ಮಳೆಹಾನಿ: ಶಾಸಕರಿಂದ ಸ್ಥಳ ಪರಿಶೀಲನೆ
Team Udayavani, Sep 11, 2022, 1:40 PM IST
ಬೀದರ: ಬೀದರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ರಹೀಂಖಾನ್ ಭೇಟಿ ನೀಡಿ ಪರಿಶೀಲಿಸಿದರು. ಅಲಿಯಾಬಾದ್ ಗ್ರಾಮದಲ್ಲಿ ಮಳೆಯಿಂದ ಕುಸಿದು ಬಿದ್ದ ಶರಣಮ್ಮ ತಿಪ್ಪಣ್ಣ, ಸಿಮೊನ್ ಬಾಬು ಅವರ ಮನೆಗೆ ಭೇಟಿ ನೀಡಿದರು.
ವಿಳಾಸಪುರ ಸಮೀಪ ಮಳೆ ನೀರಿನಲ್ಲಿ ಮುಳುಗಿದ ಸೇತುವೆ ವೀಕ್ಷಿಸಿದರು. ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೇತುವೆಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ವಿಳಾಸಪುರ ಸೇತುವೆಗೆ ಹಾನಿ ಉಂಟಾಗಿದೆ. ನೀರು ಸೇತುವೆ ಮೇಲಿಂದ ಹರಿಯುತ್ತಿರುವುದರಿಂದ ಗ್ರಾಮದ ಸಂಪರ್ಕ ಕಡಿತಗೊಂಡಿದೆ ಎಂದು ಶಾಸಕ ರಹೀಂಖಾನ್ ಸುದ್ದಿಗಾರರಿಗೆ ತಿಳಿಸಿದರು.
ಹೊಸ ಸೇತುವೆ ನಿರ್ಮಾಣಕ್ಕೆ 1.5 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ವರ್ಕ್ ಆಡರ್ಗೆ ಸ್ವಲ್ಪ ಸಮಯ ಹಿಡಿಯಲಿದೆ ಎಂದು ಹೇಳಿದರು. ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ, ಮಳೆಯಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಲಿದ್ದೇನೆ. ಜನರ ನೋವಿಗೆ ಸ್ಪಂದಿಸಲಿದ್ದೇನೆ. ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು