ಗಡಿ ನಾಡಿನಲ್ಲಿ ಉತ್ತಮ ಮಳೆ-ಹಳ್ಳಗಳಿಗೆ ಕಳೆ
Team Udayavani, Jul 16, 2020, 2:16 PM IST
ಸಾಂದರ್ಭಿಕ ಚಿತ್ರ
ಬೀದರ: ಕಳೆದ ಹಲವು ದಿನಗಳಿಂದ ಮಳೆ-ಬಿಸಿಲಿನ ಕಣ್ಣಾ ಮುಚ್ಚಾಲೆಯಲ್ಲಿದ್ದ ಗಡಿ ನಾಡು ಬೀದರನಲ್ಲಿ ಈಗ ಮುಂಗಾರಿನ ವಾತಾವರಣ ಮೂಡಿದೆ. ಬೀದರ ನಗರ ಸೇರಿದಂತೆ ಜಿಲ್ಲಾದ್ಯಂತ ಬುಧವಾರ ಉತ್ತಮ ಮಳೆಯಾಗಿದೆ.
ಜೂನ್ ತಿಂಗಳಲ್ಲಿ ಉತ್ತಮ ಮಳೆಯಾಗಿದ್ದ ಜಿಲ್ಲೆಯಲ್ಲಿ ರೈತರು ಬಿತ್ತನೆ ಮುಗಿಸಿ ಕಳೆ ತೆಗೆಯುವ ಚಟುವಟಿಕೆಯಲ್ಲಿ ತೊಡಗಿದ್ದರು. ಜುಲೈ ಆರಂಭದಲ್ಲಿ ಹೇಳಿಕೊಳ್ಳುವಂಥ ಮಳೆಯಾಗಿರಲಿಲ್ಲ. ಆದರೆ, ಮಂಗಳವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಮತ್ತೆ ಮರು ದಿನ ಬುಧವಾರ ಮಧ್ಯಾಹ್ನ 1ರಿಂದ ಸಂಜೆ 7ರವರೆಗೆ ಭರ್ಜರಿ ಮಳೆಯಾಗಿದೆ. ಹಳ್ಳ- ಕೊಳ್ಳಗಳು ತುಂಬಿಕೊಂಡಿವೆ.
ಮಳೆಯಿಂದಾಗಿ ದಿಢೀರ್ ಆಗಿ ಹವಾಗುಣ ಬದಲಾಗಿದ್ದು, ಸಾಧಾರಣ ಗಾಳಿ ಸಹಿತ ತುಂತುರು ಮಳೆ ಮುಂದುವರಿದಿದೆ. ಬೀದರ ನಗರದ ಪ್ರಮುಖ ವೃತ್ತ, ರಸ್ತೆಗಳು ಮಳೆಯಿಂದಾಗಿ ಜಲಾವೃತಗೊಂಡಿವೆ. ಚರಂಡಿಗಳು ಕಸ-ಕಡ್ಡಿಗಳು ತುಂಬಿಕೊಂಡಿದ್ದರಿಂದ ನೀರು ಹರಿದು ಹೋಗದೇ ನಿಂತುಕೊಂಡು ಜನರ ಸಂಚಾರಕ್ಕೆ ಅಡ್ಡಿಯಾಯಿತು. ಬುಧವಾರ ರಾತ್ರಿಯಿಂದ ಲಾಕ್ಡೌನ್ ಜಾರಿ ಹಿನ್ನಲೆಯಲ್ಲಿ ಅಗತ್ಯ ಸಾಮಗ್ರಿಗಳ ಖರೀದಿಗಾಗಿ ಮಾರುಕಟ್ಟೆಗೆ ಆಗಮಿಸಿದ್ದ ಜನರು ಕಿರಿಕಿರಿ ಅನುಭವಿಸಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?