ದಲಿತ ಸಂಘಟನೆಗಳಿಂದ¨ ರಾಜೇಶ್ವರ ಗ್ರಾಮ ಬಂದ್
Team Udayavani, Jan 9, 2018, 12:15 PM IST
ಬಸವಕಲ್ಯಾಣ: ವಿಜಯಪೂರದಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಆರೋಪಿಗಳನ್ನು ಗಲ್ಲಿಗೇರಿಸಬೇಕು. ದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳಿಂದ ಸೋಮವಾರ ಕರೆ ನೀಲಾಗಿದ್ದ ರಾಜೇಶ್ವರ ಬಂದ್ಗೆ ಉತ್ತಮ ಸ್ಪಂದನೆ ದೊರೆಯಿತು.
ದಲಿತ ಸಂಘರ್ಷ ಸಮಿತಿ ರಾಜೇಶ್ವರ ಗ್ರಾಮ ಶಾಖೆ, ದಲಿತ ವಿದ್ಯಾರ್ಥಿ ಒಕ್ಕೂಟದ ತಾಲೂಕು ಘಟಕ, ಭೀಮನ ಹುಲಿಗಳ ಸಂಘ, ರಾಜೇಶ್ವರನ ಬೌದ್ಧ ವಿಹಾರ ಸಮಿತಿ, ದಲಿತ ನೌಕರರ ಸಂಘದ ಆಶ್ರಯದಲ್ಲಿ ಕರೆ ನೀಡಿದ್ದ ಬಂದ್ಗೆ ಓಗೊಟ್ಟು ಗ್ರಾಮದಲ್ಲಿ ಬಹುತೇಕ ಅಂಗಡಿ-ಮುಗ್ಗಟ್ಟುಗಳು ಸಂಜೆ ವರೆಗೆ ಬಂದ್ ಆಗಿದ್ದವು. ಬಂದ್ ನಿಮಿತ್ತ ಗ್ರಾಮದ ಭೀಮನಗರ ಓಣಿಯಿಂದ ಪ್ರಮುಖ ರಸ್ತೆಗಳ ಮೂಲಕ ಬಸ್ ನಿಲ್ದಾಣದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿಯನ್ನು ಸ್ಥಳಕ್ಕೆ ಭೇಟಿ ನೀಡಿದ ಉಪ ತಹಶೀಲ್ದಾರ ಅಶೋಕ ಕುಲ್ಕರ್ಣಿ ಅವರಿಗೆ ಸಲ್ಲಿಸಲಾಯಿತು.
ರಾಜೇಶ್ವರನ ಬೌದ್ಧ ವಿಹಾರ ಸಮಿತಿ ಅಧ್ಯಕ್ಷ ಧೂಳಪ್ಪ ಪೋಸ್ತಾರ ಹಾಗೂ ಬಿಎಸ್ಪಿ ಜಿಲ್ಲಾ ಅಧ್ಯಕ್ಷ ಅಂಕುಶ ಗೋಖಲೆ ಅವರು, ದಲಿತರ ಮೇಲೆ ನಡೆದ ದೌರ್ಜನ್ಯ ಹಾಗೂ ಸಚಿವ ಕುಮಾರ ಹೆಗಡೆ ಅವರಿಂದಾದ ಸಂವಿಧಾನದ ಅವಹೇಳನ ಖಂಡಿಸಿದರು.
ಎಸ್ಸಿ-ಎಟಿ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಅಂಬಣ್ಣ ಘಾಂಗ್ರೆ, ಮುಖಂಡರಾದ ದಯಾನಂದ ಕಟ್ಟಿಮನಿ, ಪರಮೇಶ್ವರ ಬುಡಕೆ, ಅಶೋಕ ಅಂತಪ್ಪನಳ್ಳಿ, ಧನರಾಜ ರಂಜೇರಿ, ಗ್ರಾಪಂ ಮಾಜಿ ಅಧ್ಯಕ್ಷ ವಿಕ್ರಮ ಪೊಸ್ತಾರ, ಎಂ.ಡಿ, ಹನೀಪ್ ಮಾತನಾಡಿದರು. ದಲಿತ ಸಂಘರ್ಷ ಸಮಿತಿ ವಿದ್ಯಾರ್ಥಿ ಒಕ್ಕೂಟದ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮಾಲೆ, ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಅಧ್ಯಕ್ಷ ನಾಗಣ್ಣಾ ಘಾಂಗ್ರೆ, ಭೀಮನ ಹುಲಿಗಳ ಸಂಘದ ಅಧ್ಯಕ್ಷ ಸಂತೋಷ ಮುಲಗೆ, ತಾಪಂ ಸದಸ್ಯೆ ಜ್ಯೋತಿ ಸುಭಾಷ, ಗ್ರಾಪಂ ಉಪಾಧ್ಯಕ್ಷ ದೀಪಕ ಪೋಸ್ತಾರ, ಮುಖಂಡರಾದ ಸಂಗ್ರಾಮ ಮೂಲಗೆ, ಸುಭಾಷ ಅಂತಪನಳ್ಳಿ, ವಿಕ್ರಮ ಪೋಸ್ತಾರ, ಮಾಣಿಕ ಘಾಂಗ್ರೆ, ವೀರಣ್ಣ ಮೂಲಗೆ, ಅಯುಬಖಾನ, ಅಜೀಮೋದ್ದಿನ್ ಸೇರಿದಂತೆ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ