ಬ್ರಿಟಿಷರಿಗೆ ನಡುಕ ಹುಟ್ಟಿಸಿದ್ದ ರಾಣಿ ಚನ್ನಮ್ಮ
Team Udayavani, Oct 24, 2020, 6:26 PM IST
ಬೀದರ: ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ (ಮೈಲೂರ ಕ್ರಾಸ್) ಶುಕ್ರವಾರ ಬಸವ ನಗರ ವಿಕಾಸ ಸಮಿತಿ, ಬಸವನಗರ ಮಹಿಳಾ ಮಂಡಳಿ, ಬಸವ ಸಮಿತಿ ಹಾಗೂಕಿತ್ತೂರು ರಾಣಿ ಚನ್ನಮ್ಮ ಬಡಾವಣೆಗಳ ಆಶ್ರಯದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಿಜಯೋತ್ಸ ವಆಚರಿಸಲಾಯಿತು.
ಸಂಸದ ಭಗವಂತ ಖೂಬಾ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಕಿತ್ತೂರು ರಾಣಿ ಚನ್ನಮ್ಮ, ಬೆಳವಡಿ ಮಲ್ಲಮ್ಮ, ಒನಕೆ ಓಬವ್ವ ಸೇರಿ ಅನೇಕರ ಪಾತ್ರ ಮುಖ್ಯವಾಗಿದೆ ಎಂದರು.
ಜಯಂತಿ- ವಿಜಯೋತ್ಸವ ಆಚರಿಸುವುದರಿಂದ ಪ್ರತಿಯೊಬ್ಬರಲ್ಲಿ ದೇಶ ಪ್ರೇಮ ಹಾಗೂ ಸಾಹಸ ಹೆಚ್ಚಾಗುತ್ತದೆ. ಬಸವೇಶ್ವರ ವೃತ್ತದಿಂದ ಮೈಲೂರವರೆಗಿನ ಈ ರಸ್ತೆಯನ್ನುಕಿತ್ತೂರು ರಾಣಿ ಚನ್ನಮ್ಮ ರಸ್ತೆಯೆಂದುನಾಮಕರಣ ಮಾಡಿದ ನಗರಸಭೆ ಕಾರ್ಯ ಮೆಚ್ಚಿ ಅಭಿನಂದಿಸಿದರು.
ಶಾಸಕ ಬಂಡೆಪ್ಪ ಖಾಶೆಂಪೂರ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರ ಬಲಗೈ ಬಂಟನಾಗಿದ್ದ ಸಂಗೊಳ್ಳಿ ರಾಯಣ್ಣ ಅಂದು ಮಾಡಿದ ತ್ಯಾಗ ಇಂದಿನ ಯುವಜನರಿಗೆ ಸ್ಫೂ ರ್ತಿ ಎಂದರು.
ವಿಕಾಸ ಸಮಿತಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜನಾದೆಮಾತನಾಡಿದರು. ಈ ವೇಳೆ ಶರಣಪ್ಪ ಹೊಸಪೇಟ, ಬಲಭೀಮ ಬೆಟ್ಟದ್, ರತ್ನಾ ಪಾಟೀಲ, ಬಸವರಾಜ ಪಾಟೀಲಹಾರೂರಗೇರಿ, ಓಂಕಾರ ಮಾಶಟ್ಟೆ,ಚಂದ್ರಶೇಖರ ತಾಂಡೂರೆ, ಶಿವಕುಮಾರ ಭಾಲ್ಕೆ, ಸಂತೋಷಿ ಅರುಣಕುಮಾರ ಇದ್ದರು.
ಚನ್ನಮ್ಮನ ಧೈರ್ಯ-ಸಾಹಸ ಎಲ್ಲರಿಗೂ ಸ್ಫೂರ್ತಿ: ಚಿಂಚೋಳಿ
ಹುಣಸಗಿ: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚನ್ನಮ್ಮನ ಧೈರ್ಯ, ಸಾಹಸ ಎಲ್ಲರಿಗೂ ಸ್ಫೂರ್ತಿ ಎಂದು ಬಿಜೆಪಿ ಮುಖಂಡ ವಿರೇಶ ಚಿಂಚೋಳಿ ಹೇಳಿದರು.
ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದಲ್ಲಿ 197ನೇ ವಿಜಯೋತ್ಸವದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸ್ತ್ರೀಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡಿ ತೋರಿಸಬಹುದು ಎಂಬುದಕ್ಕೆ ಚನ್ನಮ್ಮನೇ ಪ್ರೇರಣೆ. ಹೀಗಾಗಿ ಅವರ ಬದುಕು ಎಲ್ಲರಿಗೂ ಆದರ್ಶವಾಗಿದೆ ಎಂದರು.
ವೀರರಾಣಿ ಕಿತ್ತೂರು ಚನ್ನಮ್ಮ ಸಹಕಾರಿ ಬ್ಯಾಂಕ್ ಅಧ್ಯಕ್ಷ ಬಸವರಾಜ ಮಲಗಲದಿನ್ನಿ ಮಾತನಾಡಿ, ಚನ್ನಮ್ಮ ಕೋಮುಸೌಹಾರ್ದತೆ ಮೆರೆದರು. ಚಿಕ್ಕ ವಯಸ್ಸಿನಲ್ಲಿಯೇ ಕುದುರೆ ಸವಾರಿ, ಬಿಲ್ವಿದ್ಯೆ ಕರಗತ ಮಾಡಿಕೊಂಡಿದ್ದಳು. ಹೀಗಾಗಿ ವೈರಿಗಳನ್ನು ಸಮರ್ಥವಾಗಿ ಎದುರಿಸುವ ದಿಟ್ಟತನ ಚನ್ನಮ್ಮನಲ್ಲಿತ್ತು ಎಂದು ಸ್ಮರಿಸಿದರು.
ಈ ವೇಳೆ ಎಪಿಎಂಸಿ ಅಧ್ಯಕ್ಷ ದೇವಣ್ಣ ಮಲಗಲದಿನ್ನಿ, ಮುರುಗೆಣ್ಣ ದೇಸಾಯಿ, ಅನೀಲ್ ಚಂದಾ, ಮಲ್ಲು ದೇಸಾಯಿ, ಹೊನ್ನಕೇಶವ ದೇಸಾಯಿ, ಸಿದ್ದು ರೇವಡಿ, ಮುದಕಪ್ಪ ದೇಸಾಯಿ, ಎಂ.ಎಸ್. ಚಂದಾ, ನಂದನಗೌಡ ಬಿರಾದಾರ, ಮಲ್ಲಿಕಾರ್ಜುನ ದೇಸಾಯಿ, ಅಮರೇಶ ವಜ್ಜಲ್, ಅಮರಣ್ಣ ದೇಸಾಯಿ, ರಾಜು ಮಲಗಲದಿನ್ನಿ, ಗೊಲ್ಲಾಳ ಮಲಗಲದಿನ್ನಿ, ಗೌಡಪ್ಪ ಬಲಗೌಡ್ರ, ಮಲ್ಲಯ್ಯ ಸ್ವಾಮಿ, ರಾಜು ಬಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ