ವಚನ ವಿಜಯೋತ್ಸವಕ್ಕೆ ಬೀದರ ಸಿದ್ಧ


Team Udayavani, Jan 29, 2018, 1:18 PM IST

bid-3.jpg

ಬೀದರ: ನಗರದ ಪವೀತ್ರ ಕ್ಷೇತ್ರ ಬಸವಗಿರಿ ಪರಿಸರದಲ್ಲಿ ಜ.29ರಿಂದ ಮೂರು ದಿನಗಳ ಕಾಲ ಜರುಗಲಿರುವ
18ನೇ ವಚನ ವಿಜಯೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಹತ್ತು ಸಾವಿರ ಜನರು ಕುಳಿತುಕೊಳ್ಳಲು
ಅನುವಾಗವಂತೆ ಶರಣಕವಿ ಸರ್ವಜ್ಞ ಮಹಾಮಂಟಪ ಮತ್ತು ಡಾ| ಎಂ.ಎಂ. ಕಲಬುರ್ಗಿ ವೇದಿಕೆ ನಿರ್ಮಾಗೊಂಡಿದೆ.

ವಿಜಯೋತ್ಸವಕ್ಕೆ ಆಗಮಿಸುವ ಶರಣ-ಶರಣೆಯರ ಹಸಿವು ತಣಿಸಲು “ನೀಲಮ್ಮನ ದಾಸೋಹ ಮಂಟಪ’ ತಲೆಯೆತ್ತಿದ್ದು, ಏಕ ಕಾಲಕ್ಕೆ ಸಾವಿರಾರು ಜನ ಪ್ರಸಾದ ಸೇವಿಸಬಹುದು. ಸ್ಥಳೀಯರಿಗೆ ಹೊರ ಜಿಲ್ಲೆಯ ಅತಿಥಿಗಳು ಮತ್ತು ಗಣ್ಯರಿಗೆ ಬೇರೆ ಬೇರೆ ಕಡೆ ಅಂದರೆ ಮೂರು ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ವಚನ ವಿಜಯೋತ್ಸವಕ್ಕೆ ಆಗಮಿಸುವ ಜನರನ್ನು ಸ್ವಾಗತಿಸಲು ನಗರದಾದ್ಯಂತ 40 ಸ್ವಾಗತ ಕಮಾನಗಳನ್ನು ಹಾಕಿ ನಗರವನ್ನು ಶೃಂಗರಿಸಲಾಗಿದೆ.

ಮೂರು ದಿನಗಳ ಕಾಲ ನಿರಂತರ ದಾಸೋಹ ವ್ಯವಸ್ಥೆ ಮಾಡಲಾಗಿದ್ದು. ಗೋದಿ ಹುಗ್ಗಿ, ರೊಟ್ಟಿ, ಚಟ್ನಿ, ಭಜ್ಜಿ,
ಸಜ್ಜೆ ರೊಟ್ಟಿ, ಶೇಂಗಾ ಹೋಳಿಗೆ, ಅನ್ನ, ಸಾಂಬಾರ್‌ ಪ್ರಸಾದ ಸಿದ್ಧತೆ ಮಾಡಲಾಗಿದೆ. ಈಗಾಗಲೇ ಭಕ್ತರು ಸಾವಿರ-ಸಾವಿರ ರೊಟ್ಟಿಗಳನ್ನು ತಯಾರಿಸಿ ದಾಸೋಹಕ್ಕೆ ಸಲ್ಲಿಸುತ್ತಿದ್ದಾರೆ. ನಗರದ ಎಲ್ಲ ಭಾಗಗಳಿಂದ ಬಸವಗಿರಿಗೆ ಆಗಮಿಸಲು ನಗರ ಸಾರಿಗೆ ಬಸ್‌ ವ್ಯವಸ್ಥೆ ಮಾಡಲಾಗಿದ್ದು, ಇದಕ್ಕೆ ಒಪ್ಪಿಗೆ ಸೂಚಿಸಿದೆ.

ಜ.29ರಂದು ಬೆಳಗ್ಗೆ 8ಕ್ಕೆ ಹಿರಿಯರಾದ ಪಿ.ಸಂಗಪ್ಪ ಅವರಿಂದ ಷಟ್‌ಸ್ಥಲ ಧ್ವಜಾರೋಹಣ ಮತ್ತು ಗುರುವಚನ ಪರುಷಕಟ್ಟೆಯಲ್ಲಿ ಧರ್ಮ ಗ್ರಂಥ ಗುರುವಚನಕ್ಕೆ ಗೌರವ ಸಲ್ಲಿಸುವುದರೊಂದಿಗೆ ವಚನ ವಿಜಯೋತ್ಸವದ ಕಾರ್ಯಕಲಾಪಗಳು ಆರಂಭವಾಗುವವು. ನಂತರ ಅಕ್ಕ ಅನ್ನಪೂರ್ಣತಾಯಿ ಮತ್ತು ಡಾ| ಗಂಗಾಂಬಿಕೆ
ಅಕ್ಕನವರ ಮಾರ್ಗದರ್ಶನದಲ್ಲಿ ಸಾಮೂಹಿಕ ಇಷ್ಠಲಿಂಗ ಯೋಗ ಸಂಪನ್ನಗೊಳ್ಳುವುದು. ಬೆಳಗ್ಗೆ 11ಕ್ಕೆ ಉತ್ಸವದ ಉದ್ಘಾಟನಾ ಸಮಾರಂಭ ಮತ್ತು ಯುವ ಪ್ರೇರಣಾ ಸಮಾವೇಶಕ್ಕೆ ವಿಜಯಪುರದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಚಾಲನೆ ನೀಡುವರು.

ಶಿಕ್ಷಣ ತಜ್ಞ ಕೆ.ಇ. ರಾಧಾಕೃಷ್ಣ, ವ್ಯಕ್ತಿತ್ವ ವಿಕಸನ ತರಬೇತಿದಾರ ಎಸ್‌.ಜಿ. ಪಾಟೀಲ ಮತ್ತು ಅಂತಾರಾಷ್ಟ್ರೀಯ
ಶ್ರೇಷ್ಠ ನೇತ್ರ ತಜ್ಞ ಡಾ| ಚಂದ್ರಪ್ಪಾ ಎಸ್‌. ರೇಷ್ಮೆ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡುವರು. ಈ 
ಸಂದರ್ಭದಲ್ಲಿ ಕಾರ್ಗಿಲ್‌ ಹೀರೋ ಕ್ಯಾ| ನವೀನ ನಾಗಪ್ಪಾ ಅವರಿಗೆ ವೀರಮಾತೆ ಅಕ್ಕ ನಾಗಲಾಂಬಿಕಾ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು.

 ಶರಣರ ತ್ಯಾಗ ಬಲಿದಾನದ ಸ್ಮರಣೆಗಾಗಿ ಪ್ರತಿ ವರ್ಷವೂ ಆಚರಿಸಿಲಾಗುತ್ತಿರುವ “ವಚನ ವಿಜಯೋತ್ಸವ’ಕ್ಕೆ ಎಲ್ಲ ಜಿಲ್ಲೆಗಳಿಂದ ಪ್ರತಿನಿಧಿಗಳು, ನೆರೆ ಜಿಲ್ಲೆಗಳಿಂದಲೂ ಶರಣ ಸಂಕುಲ ಆಗಮಿಸುತ್ತಿರುವುದು ಬೀದರ ಜಿಲ್ಲೆಯ ಹೆಮ್ಮೆಯಾಗಿದೆ. 
 ಅಕ್ಕ ಅನ್ನಪೂರ್ಣ ತಾಯಿ

ಈ ಸಲದ ವಚನ ವಿಜಯೋತ್ಸವದಲ್ಲಿ ಯುವ ಪ್ರೇರಣೆ, ಮಹಿಳಾ ಸಬಲೀಕರಣ ಮತ್ತು ಆರೋಗ್ಯ ಕುರಿತು ಗೋಷ್ಠಿಗಳನ್ನು ಏರ್ಪಡಿಸಿರುವುದು ವಿಶೇಷ. ಮೂರು ದಿನಗಳ ಉತ್ಸವದಲ್ಲಿ ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆ ಇದೆ.
 ನೀಲಮ್ಮ ರೂಗನ, ಅಧ್ಯಕ್ಷರು, ಸ್ವಾಗತ ಸಮಿತಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.