ಶಿಥಿಲ ಶಾಲಾ ಕಟ್ಟಡ ಪುನರ್ ನಿರ್ಮಾಣಕ್ಕೆ ಆಗ್ರಹ
Team Udayavani, Jun 12, 2022, 6:18 PM IST
ಹುಣಸಗಿ: ತಾಲೂಕಿನ ಕಲ್ಲದೇವನಹಳ್ಳಿ ಗ್ರಾಮದ ಜನತಾ ಕಾಲೋನಿಯಲ್ಲಿನ ಶಿಥಿಲಾವಸ್ಥೆಯಲ್ಲಿದ್ದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಟ್ಟಡವು ಬೇರೆ ಕಡೆ ಸ್ಥಳಾಂತರಿಸಿ ನೂತನ ಕಟ್ಟಡ ನಿರ್ಮಾಣ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟಿಸಿದರು.
ಶನಿವಾರ ಶಾಲೆ ಎದುರು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. 2016ರಲ್ಲಿ ಲೋಕೋಪಯೋಗಿ ಇಲಾಖೆಯು ಕಟ್ಟಡ ಶಿಥಿಲಗೊಂಡಿದ್ದರಿಂದ ನೆಲಸಮಗೊಳಿಸಲು ದೃಢೀಕರಣ ನೀಡಲಾಗಿತ್ತು. ಆದರೂ ಇವರೆಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದು ಏಕೆ? ಒಂದು ವೇಳೆ ಕಟ್ಟಡ ಕುಸಿತವಾದರೆ ಆಗುವ ಅನಾಹುತಕ್ಕೆ ಇಲಾಖೆ ಹೊಣೆ ಎಂದು ಗುಡುಗಿದರು.
ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರಡ್ಡಿ ಹಾಗೂ ಎಸ್ ಡಿಎಂಸಿ ಅಧ್ಯಕ್ಷ, ಗ್ರಾಮದ ಕೆಲ ಮುಖಂಡರೊಂದಿಗೆ ಚರ್ಚೆ ನಡೆಸಿ ಶೀಘ್ರ ಬೇರೆ ಕಟ್ಟಡವೊಂದನ್ನು ಬಾಡಿಗೆ ಪಡೆದು ಶಿಥಿಲಗೊಂಡ ಕಟ್ಟಡ ನೆಲಸಮಗೊಳಿಸಿ ಪುನರ್ ನಿರ್ಮಾಣ ಮಾಡುವ ಬಗ್ಗೆ ಅಗತ್ಯ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.
ನಂತರ ಪ್ರತಿಭಟನೆ ಕೈ ಬಿಡಲಾಯಿತು. ಕರವೇ ತಾಲೂಕು ಅಧ್ಯಕ್ಷ ಶಿವಲಿಂಗಪ್ಪ ಪಟ್ಟಣಶೆಟ್ಟಿ, ಪದಾಧಿಕಾರಿಗಳಾದ ಬಸವರಾಜ್ ಚನ್ನೂರ, ನಿಂಗಣ್ಣ ಗುತ್ತೇದಾರ್, ರಾಜು ಅವರಾದಿ, ಶರಣಮ್ಮ ದೊಡ್ಡಮನಿ, ಮಹೇಶ ಗುತ್ತೇದಾರ್, ಮೌಲಾಲಿ ಸೈಯದ್, ರಮೇಶ ಉಪ್ಪಲದಿನ್ನಿ, ಬಸವರಾಜ್ ಕೊಂಡಗೂಳಿ, ಪರಶುರಾಮ್ ಮಾಲಿಪಾಟೀಲ್, ಬಂದೇನವಾಜ್ ಯಾತನೂರ್, ಮಲ್ಲು ಕಾಮನಟಗಿ, ಸೋಮನಾಥ ಡಂಗಿ, ವೆಂಕಟೇಶ ಸುರಪುರ, ಶಫೀಕ್ ಬೆಣ್ಣಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್