ಬೀದರಲ್ಲಿ ಶೀಘ್ರ ರೆಡ್‌ ಅಲರ್ಟ್‌?


Team Udayavani, Apr 4, 2020, 5:33 PM IST

ಬೀದರಲ್ಲಿ ಶೀಘ್ರ ರೆಡ್‌ ಅಲರ್ಟ್‌?

ಸಾಂದರ್ಭಿಕ ಚಿತ್ರ

ಬೀದರ: ದೆಹಲಿಯ ಜಮಾತ್‌ ಕಾರ್ಯಕ್ರಮ ಗಡಿ ಜಿಲ್ಲೆಯಲ್ಲಿ ತಲ್ಲಣವನ್ನೇ ಸೃಷ್ಟಿಸಿದ್ದು, ಒಂದೇ ಬಾರಿಗೆ 10  ಕೋವಿಡ್ 19 ಪಾಸಿಟಿವ್‌ ಪ್ರಕರಣಗಳ ವರದಿಯಿಂದಾಗಿ ಪ್ರವಾಸೋದ್ಯಮ ನಗರಿ ಬೀದರ ಸಹ “ರೆಡ್‌ ಅಲರ್ಟ್‌’ ವ್ಯಾಪ್ತಿಗೆ ಹೋಗುವ ಲಕ್ಷಣಗಳು ಗೋಚರಿಸುತ್ತಿವೆ.

ಕೋವಿಡ್ 19ಗೆ ದೇಶದಲ್ಲಿ ಮೊದಲ ಬಲಿಯಾದ ಕಲಬುರಗಿಗೆ ಬೀದರ ಹೊಂದಿಕೊಂಡಿದ್ದರೂ ಈವರೆಗೆ ಶಂಕಿತರ ಪ್ರಕರಣಗಳು ಹೆಚ್ಚಿದ್ದವಾದರೂ ಒಂದು ಪಾಸಿಟಿವ್‌ ಪ್ರಕರಣ ವರದಿಯಾಗಿರಲಿಲ್ಲ. ಆದರೆ, ಗುರುವಾರ ದೆಹಲಿಯ ಜಮಾತ್‌ ನಿಂದಾಗಿ ಕೊರೊನಾ ಜಿಲ್ಲೆಗೆ ಹೆಮ್ಮಾರಿಯಾಗಿ ಅಪ್ಪಳಿಸಿದೆ. ಒಂದೇ ದಿನದಲ್ಲಿ ಅತಿ ಹೆಚ್ಚು ಪಾಸಿಟಿವ್‌ ವರದಿ ಆಗಿರುವುದು ಮತ್ತಷ್ಟು ಆತಂಕಕ್ಕೆ ಜಿಲ್ಲೆ ಜಾರಿದೆ. ಕೋವಿಡ್ 19 ಹೊತ್ತು ತಂದಿರುವ ಸೋಂಕಿತರರನ್ನು ದೆಹಲಿಯಿಂದ ವಾಪಸ್ಸಾಗುತ್ತಿದ್ದಂತೆ ಅವರ ರಕ್ತ ಮತ್ತು ಗಂಟಲು ದ್ರವ ತಪಾಸಣೆ ಮಾಡಿದ್ದರೇ ಇಂದು ಸೋಂಕು ವ್ಯಾಪಾಸುವ ಆತಂಕವನ್ನು ಎದುರಿಸುವ ಸ್ಥಿತಿ ಬರುತ್ತಿರಲಿಲ್ಲ. ಈ ವಿಷಯದಲ್ಲಿ ಎಡವಿದ ಜಿಲ್ಲಾಡಳಿತ ಅವರಲ್ಲಿ ಲಕ್ಷಣಗಳು ಕಾಣಿಸಿಲ್ಲವೆಂಬ ಕಾರಣಕ್ಕೆ ಕೇವಲ ಅವರನ್ನು ಹೋಂ ಕ್ವಾರಂಟೈನ್‌ ಮಾಡಿ ಆರೋಗ್ಯ ಮೇಲೆ ನಿಗಾ ಇಡುವುದಕ್ಕೆ ಆದ್ಯತೆ ನೀಡಿರುವುದು ಜಿಲ್ಲೆಗೆ ಮಾರಕವಾಗಿ ಪರಿಣಮಿಸುವ ಸಾಧ್ಯತೆ ಇದೆ.

ಪಾಸಿಟಿವ್‌ ವ್ಯಕ್ತಿಗಳು ಗೃಹ ನಿರ್ಬಂಧದ ಅವಧಿಯಲ್ಲಿ ಬೇಕಾಬಿಟ್ಟಿಯಾಗಿ ಓಡಾಡಿರುವ ಮತ್ತು ಕುಟುಂಬದವರ ಜತೆಗೆ ಪ್ರಾಥಮಿಕ ಸಂಪರ್ಕ ಹೊಂದಿರುವ ಸಾಧ್ಯತೆ ಹೆಚ್ಚಿದೆ. ಇನ್ನೂ  ಸೋಂಕಿತ ವ್ಯಕ್ತಿ ಮದುವೆ ಸಮಾರಂಭದಲ್ಲೂ ಭಾಗಿಯಾಗಿದ್ದ ಎಂಬುದು ಬೆಳಕಿಗೆ ಬಂದಿದೆ. ಜತೆಗೆ ಸೋಂಕಿತರ ಟ್ರಾವೆಲ್‌ ಹಿಸ್ಟರಿ ಗುರುತಿಸಿ ಜತೆಯಲ್ಲಿದ್ದವರನ್ನು ಪತ್ತೆ ಹಚ್ಚಬೇಕಿದೆ. ಈ ಅಂಶಗಳಿಂದ ಜಿಲ್ಲೆಯಲ್ಲಿ ಯಾವಾಗ ಬೇಕಾದರೂ ಕೋವಿಡ್ 19 ವ್ಯಾಪಕವಾಗಿ ಸ್ಫೋಟಗೊಳ್ಳಬಹುದು ಎಂಬ ಭೀತಿ ಆವರಿಸಿದೆ.

ಕೋವಿಡ್ 19ಪಾಸಿಟಿವ್‌ ಪತ್ತೆಯಾಗಿರುವ 10 ಜನರು ಸುಮಾರು 100ಕ್ಕೂ ಹೆಚ್ಚು ಜನರೊಂದಿಗೆ ಪ್ರಾಥಮಿಕ ಸಂಪರ್ಕ, ಜತೆಗೆ ದ್ವಿತೀಯ ಸಂಪರ್ಕವುಳ್ಳ ಮಂದಿಯ ಸಂಖ್ಯೆಯೂ ಹೆಚ್ಚುವ ಸಾಧ್ಯತೆ ಇದೆ. ಈವರೆಗೆ 82 ಜನ ಪ್ರಾಥಮಿಕ ಸಂಬಂಧಗಳನ್ನು ಜಿಲ್ಲಾಡಳಿತ ಗುರುತಿಸಿ ಎಲ್ಲರನ್ನು ಓಲ್ಡ್‌ ಸಿಟಿಯ ನೂರು ಹಾಸಿಗೆ ಆಸ್ಪತ್ರೆಯ ಐಸೋಲೇಟ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಬೆಳವಣಿಗೆಯಿಂದ ಬೀದರ ರೆಡ್‌ ಅಲರ್ಟ್‌ ಆಗುವ ಮುನ್ಸೂಚನೆ ಕಾಣುತ್ತಿದೆ. ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸೋಂಕು ವ್ಯಾಪಿಸದಂತೆ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಜಿಲ್ಲೆಯಲ್ಲಿ 10 ಕೋವಿಡ್ 19ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು, ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 82 ಜನರನ್ನು ಗುರುತಿಸಿ ಓಲ್ಡ್‌ಸಿಟಿ ಆಸ್ಪತ್ರೆಯಲ್ಲಿ ಐಸೋಲೇಟ್‌ ಮಾಡಲಾಗಿದೆ. ಸೋಂಕಿತರು ಪತ್ತೆಯಾಗಿರುವ ಬೀದರನ ಓಲ್ಡ್‌ಸಿಟಿ, ಬಸವಕಲ್ಯಾಣ ಮತ್ತು ಮನ್ನಾಎಖೆಳ್ಳಿ ಗ್ರಾಮ ಸೇರಿ ಈ ಮೂರು ಕಡೆಗಳಲ್ಲಿ 3 ಕಿ.ಮೀ ಪ್ರದೇಶವನ್ನು ಕಂಟೈನ್ಮೆಂಟ್‌ ಪ್ರದೇಶ ಎಂದು ಘೋಷಿಸಲಾಗಿದೆ. ಇನ್ನೂ ರೆಡ್‌ ಅಲರ್ಟ್‌ ಘೋಷಣೆ ಆಗಿಲ್ಲ. . ಡಾ| ಎಚ್‌.ಆರ್‌ ಮಹಾದೇವ, ಡಿಸಿ.

 

-ಶಶಿಕಾಂತ ಬಂಬುಳಗ

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.