ದೇಶಿ ಕಲೆ, ಕಲಾವಿದರ ದಾಖಲೀಕರಣ ಅವಶ್ಯ


Team Udayavani, Sep 25, 2018, 12:09 PM IST

bid-1.jpg

ಹುಮನಾಬಾದ: ದೇಸಿ ಕಲೆ, ಕಲಾವಿದರ ದಾಖಲೀಕರಣ ಅತ್ಯಂತ ಅವಶ್ಯ. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಒಳಗೊಂಡಂತೆ ಸಂಬಂಧಿ ತ ಸಂಘ ಸಂಸ್ಥೆಗಳು ಪೂರಕ ಯೋಜನೆ ರೂಪಿಸಿ, ಸಂರಕ್ಷಿಸಲು ಶ್ರಮಿಸಬೇಕು ಎಂದು ಗಣಿ, ಭೂವಿಜ್ಞಾನ ಮತ್ತು ಮುಜರಾಯಿ ಸಚಿವ ರಾಜಶೇಖರ ಪಾಟೀಲ ಹೇಳಿದರು. 

ಮಾಣಿಕನಗರದ ಮಾಣಿಕ್ಯ ಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ ಸಾಂಸ್ಕೃತಿಕ ಸೌರಭ-2018-19ರ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಅದಕ್ಕಾಗಿ ಸರ್ಕಾರದಿಂದ ಯಾವುದೇ ಸೌಲಭ್ಯ ಬೇಕಾದರೂ ಕಲ್ಪಿಸಿಕೊಡಲು ಯಾವತ್ತೂ ಸಿದ್ಧವಿರುವುದಾಗಿ ಹೇಳಿದರು.

ಚಿಕ್ಕವರಿದ್ದಾಗ ಮನೆಯಲ್ಲಿ ಅಜ್ಜಿ ಬೀಸುವ, ಕುಟ್ಟುವ ಮತ್ತು ಜೋಗುಳ ಹಾಡುವುದನ್ನು ಕೇಳಿದ್ದೆವು. ಈಗ ವಿದೇಶಿ ಸಂಸ್ಕೃತಿ ಪ್ರಭಾವ, ಮೊಬೈಲ್‌ ಪ್ರವೇಶದ ನಂತರ ಅವೆಲ್ಲವೂ ಕಣ್ಮರೆಯಾಗಿವೆ ಎಂದ ಅವರು, ಬಾಲ್ಯದಲ್ಲಿ ತಾವು ಆಡುತ್ತಿದ್ದ ಚಿಣ್ಣಿ ದಾಂಡು, ಗೋಟಿ, ಲಗೋರಿ, ಜಾರಣಿ, ಚಾರ್‌ ಫತ್ತರ್‌ ಎನ್ನುವ ವಿಶಿಷ್ಟ ದೇಶಿ ಆಟಗಳನ್ನು ಆಡುತ್ತಿದ್ದೆವು. 

ಅವೆಲ್ಲ ಈಗ ಸಂಪೂರ್ಣ ಕಣ್ಮರೆಯಾಗಿದ್ದು, ಚಿಕ್ಕ ಮಕ್ಕಳಿಂದ ವೃದ್ಧರವರೆಗಿನ ಎಲ್ಲರಿಗೂ ಕ್ರಿಕೆಟ್‌ ಹುಚ್ಚು ಅಂಟಿಕೊಂದೆ. ಇಂತಹ ದಿನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಂಸ್ಕೃತಿಕ ಸೌರಭ ಆಯೋಜಿಸಿರುವುದು ಪ್ರಶಂಸನೀಯ ಎಂದು ಹೇಳಿದರು.

ಮಾಣಿಕನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಪೊಲೀಸ್‌ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಪಂ ಅಧ್ಯಕ್ಷೆ ಭಾರತೀಬಾಯಿ ಶೇರಿಕಾರ, ಸಾಹಿತಿಗಳಾದ ಡಿ.ಅಜೇಂದ್ರಸ್ವಾಮಿ, ಎಚ್‌.ಕಾಶಿನಾಥರೆಡ್ಡಿ ಕರ್ನಾಟಕ ಜಾನಪದ ಪರಿಷತ್‌ ಪ್ರಮುಖ ಶಶಿಧರ ಘಾವಲ್ಕರ್‌, ಗೋಂಧಳಿ ಗಾಯನ ಕಲಾವಿದ ಸಿದ್ರಾಮ ಡಿ.ವಾಗ್ಮಾರೆ, ಶರಣಬಸಪ್ಪ ಪಾರಾ ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ ಪ್ರಾಸ್ತಾವಿಕ ಮಾತನಾಡಿ, ಚಿಗುರು ಯೋಜನೆಯಡಿ 7-15 ವರ್ಷದ ಮಕ್ಕಳಿಗೆ, 16-25ರ ವರೆಗಿನ ಯುವಕರಿಗೆ, ಸಾಂಸ್ಕೃತಿಕ ಸೌರಭ ಯೋಜನೆಯಡಿ ಹಿರಿಯ ಕಲಾವಿದರಿಗೆ ಪ್ರತ್ಯೇಕ ಅವಕಾಶ ಕಲ್ಪಿಸಿದ್ದು, ಅರ್ಹ ಕಲಾವಿದರು ಯೋಜನೆ ಸದ್ಬಳಕೆ ಮಾಡಕೊಳ್ಳಬೇಕು ಎಂದರು. ಜಾನಪದ ಪರಿಷತ್‌ ಅಧ್ಯಕ್ಷ ಶರದ್‌ ಕುಮಾರ ನಾರಾಯಣಪೇಟಕರ್‌ ನಿರೂಪಿಸಿದರು. ಮಹಾವೀರ ಜಮಖಂಡಿ ವಂದಿಸಿದರು.

ಸಾಂಸ್ಕೃತಿಕ ಸೌರಭ: ಹೈ.ಕ. ಭಾಗದ ಜಾಕಿರ್‌ ಹುಸೇನ್‌ ಖ್ಯಾತಿಯ ಜನಾರ್ಧನ್‌ ವಾಗ್ಮಾರೆ ತಂಡದ ಹಿಂದೂಸ್ಥಾನಿ ವಾದ್ಯ ಸಂಗೀತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಭಾಲ್ಕಿಯ ಉಸ್ತಾದ್‌ ಶೇಖ್‌ ಹನ್ನುಮಿಯ್ಯ, ಯುವ ಕಲಾವಿದೆ ಆಶಾರಾಣಿ ಷಟಕಾರ ಸುಗಮ ಸಂಗೀತ, ಸಾಹಿತಿ, ಕಲಾವಿದ ಶಂಭುಲಿಂಗ ವಾಲೊªಡ್ಡಿ ಅವರ ಜನಪದ ಗೀತೆ, ಉಷಾ ಪ್ರಭಾಕರ ತಂಡದಿಂದ ನೃತ್ಯ ರೂಪಕ, ಸುರೇಶ ಸಂಗಡಿಗರ ನಾಟಕ, ಹಣಮಂತಪ್ಪ ನರಸಪ್ಪ ಕಠೊuಳ್ಳಿಕರ್‌ ತಂಡದ ಕಥಾ ಕೀರ್ತನ, ಸಿದ್ರಾಮ ವಾಗ್ಮಾರೆ ಅವರ ಗೋಂಧಳಿ ಪದ ಮೊದಲಾದವು ನೆರೆದ ಪ್ರೇಕ್ಷಕರ ಮನಸೂರೆಗೊಂಡವು.

ಟಾಪ್ ನ್ಯೂಸ್

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.