ಏಸು ಕ್ರಿಸ್ತರ ಪ್ರಾರ್ಥನೆಯಿಂದ ನೆಮ್ಮದಿ: ಶಾಸಕ ಖೇಣಿ


Team Udayavani, Dec 16, 2017, 12:57 PM IST

ashok-kheny.jpg

ಹುಮನಾಬಾದ: ಬೀದರ ದಕ್ಷಿಣ ಕ್ಷೇತ್ರದಲ್ಲಿ 180 ಕ್ರೆಸ್ತ್ ಧರ್ಮದ ಪ್ರಾರ್ಥನಾ ಮಂದಿರಗಳಿವೆ. ಏಸು ಕ್ರಿಸ್ತರ ಆಶೀರ್ವಾದದಿಂದ ನನ್ನ ಕ್ಷೇತ್ರದ ಜನರು ಸುಖ ಶಾಂತಿ ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ ಎಂದು ಶಾಸಕ ಅಶೋಕ ಖೇಣಿ ಹೇಳಿದರು.

ತಾಲೂಕಿನ ಮನ್ನಾಏಖೇಳಿ ಗ್ರಾಮದ ನೂರ್‌ ಭವನದಲ್ಲಿ ಕರ್ನಾಟಕ ಮಕ್ಕಳ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕ್ರಿಸ್‌ಮಸ್‌ ಉತ್ಸವ 2017ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಾಂತಿಪ್ರಿಯನಾದ ಏಸು ಕ್ರಿಸ್ತರ ಪ್ರಾರ್ಥನೆಯಿಂದ ಮನಸ್ಸಿಗೆ ನೆಮ್ಮದಿ, ಸಮಾಧಾನ ಪ್ರಾಪ್ತಿಯಾಗುತ್ತದೆ. ಸಮಾಜವನ್ನು ಒಳ್ಳೆಯದಾರಿಗೆ ತರುವಲ್ಲಿ ಶ್ರಮಿಸಿದ್ದಾರೆ. ಸಮಾಜದ ಜನರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಅಲ್ಲದೇ ಉತ್ತಮ ಸಂಸ್ಕೃತಿ, ಆಚಾರ ವಿಚಾರ, ನಡೆನುಡಿ ಬಗ್ಗೆ ಮಕ್ಕಳಿಗೆ ತಿಳಿಹೇಳಿ ಅಜ್ಞಾನದಿಂದ ಸುಜ್ಞಾನದ ಕಡೆಗೆ ತರಬೇಕು ಎಂದು ಹೇಳಿದರು.

ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳು ವಿರೋಧ ಪಕ್ಷದವರಿಗೆ ಕಾಣುತ್ತಿಲ್ಲ. ವಿರೋಧ ಪಕ್ಷದವರು ಕೇವಲ ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಾ ದಿನ ಕಳೆಯುತ್ತಿದ್ದಾರೆ. ಸಮಸ್ಯೆಗೆ ಸ್ಪಂದಿಸಬೇಕಾದ ಪಕ್ಷಗಳು ಬಡಜನರ ದಿಕ್ಕು ತಪ್ಪಿಸುವಂತಹ ಕೆಲಸಗಳಲ್ಲಿ ನಿರತರಾಗಿವೆ. ಕ್ಷೇತ್ರದ ಜನರು ಎಲ್ಲ ವಿಷಯಗಳನ್ನು ಸರಳವಾಗಿ ಅರ್ಥೈಸಿಕೊಳ್ಳುವಂತರಿದ್ದಾರೆ ಎಂದು ಹೇಳಿದರು.

ನಾನು ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ ಆಸ್ವಾಸನೆಗಳನ್ನು ಸಂಪೂರ್ಣವಾಗಿ ಈಡೇರಿಸಿದ್ದೇನೆ. ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯ ಕಲ್ಪಸುವ ನಿಟ್ಟಿನಲ್ಲಿ 1048 ಕೋಟಿ ರೂ. ವೆಚ್ಚದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳಿಸಿದ್ದೇವೆ. ಇನ್ನೂ ಕೆಲ ಕಾಮಗಾರಿಗಳು ಪ್ರಗತಿಯಲ್ಲಿವೆ. ಕ್ಷೇತ್ರವನ್ನು ಭ್ರಷ್ಟಾಚಾರ ಮುಕ್ತವನ್ನಾಗಿ ಮಾಡಲಾಗಿದೆ ಎಂದು ಹೇಳಿದರು.

ಕ್ಷೇತ್ರದ ಪ್ರತಿ ಗ್ರಾಪಂ ಮಟ್ಟದಲ್ಲಿ ನಾನು ಮಾಡಿರುವ ಅಭಿವೃದ್ಧಿ ಯೋಜನೆಗಳ ಸಮಗ್ರ ಮಾಹಿತಿ ಕರಪತ್ರಗಳು ಮತ್ತು ಬ್ಯಾನರ್‌ ಅಳವಡಿಸಿ ಆಯಾ ಗ್ರಾಮದಲ್ಲಿನ ಪ್ರಗತಿ ಹಾಗೂ ಖರ್ಚು ಮಾಡಿದ ಅನುದಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಸುಳ್ಳು ಹೇಳಿ ರಾಜಕೀಯ ಮಾಡುವರಿಗೆ ಜನರೇ ಉತ್ತರ ನೀಡುತ್ತಾರೆ. ಕ್ಷೇತ್ರದ ಮತದಾರರ ಆಶೀರ್ವಾದದಿಂದ
ನಾನು ಶಾಸಕನಾಗಿದ್ದೇನೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆಯಾಗಿದೆ ಎಂದು ಹೇಳಿದರು.

ಕರ್ನಾಟಕ ಮಕ್ಕಳ ಪಕ್ಷದ ರಾಜ್ಯಾಧ್ಯಕ್ಷ ನಾಗೇಂದ್ರ ಪ್ರಸಾದ ಮಾತನಾಡಿ, ವಿರೋಧ ಪಕ್ಷದವರು ಸಭೆ ಸಮಾರಂಭಗಳಿಗಾಗಿ
ಹಣ ಕೊಟ್ಟು ಜನರನ್ನು ಕರೆತರುತ್ತಾರೆ. ಆದರೆ ಶಾಸಕ ಅಶೋಕ ಖೇಣಿ ಅವರ ಕಾರ್ಯಕ್ರಮಕ್ಕೆ ಅಭಿಮಾನಿಗಳು, ಕಾರ್ಯಕರ್ತರು, ಸಾರ್ವಜನಿಕರು ಸ್ವಯಂಪ್ರೇರಣೆಯಿಂದ ಸ್ವಂತ ಹಣ ಖರ್ಚು ಮಾಡಿಕೂಂಡು ಬರುತ್ತಾರೆ ಎಂದು ಹೇಳಿದರು.

ಸಮಾಜದ ಮೇಲ್ವಿಚಾರಕರಾದ ನೆಲ್ಸನ್‌ ಸುಮಿತ್ರಾ, ಎಂ.ಪಿ. ಜಯಪಾಲ, ಎಸ್‌.ಡಿ.ಎ ಅಧ್ಯಕ್ಷ ವೈಜಿನಾಥ, ಫಾದರ್‌ ಆನಂದಕುಮಾರ ಕೆ. ಸಾನ್ನಿಧ್ಯ ವಹಿಸಿದ್ದರು. ಮುಖಂಡ ಶಿವರಾಜ ಪಾಟೀಲ ಐಸಪುರ, ಸಂದೀಪ ಉದಗೀರೆ. ಮಾರ್ಟಿನ್‌, ಸಂತೋಷ ಹಳ್ಳಿಖೇಡ, ಸಲಮಪಾಶಾ, ಶಿವಕುಮಾರ, ಯೇಸುದಾಸ ಅಮಲಾಪುರೆ, ಪ್ರಸಾದ ಮನ್ನಳ್ಳಿ ಸೇರಿದಂತೆ ಮಕ್ಕಳ ಪಕ್ಷದ ಕಾರ್ಯಕರ್ತರು ಮುಖಂಡರು ಇದ್ದರು.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.