ಮೃತ ಕಾರ್ಮಿಕನ ಕುಟುಂಬಕ್ಕೆ ಪರಿಹಾರ
Team Udayavani, Feb 24, 2022, 12:50 PM IST
ಹಟ್ಟಿಚಿನ್ನದಗಣಿ: ಹಟ್ಟಿಚಿನ್ನದಗಣಿ ಅಧಿಧೀನದ ಊಟಿ ಚಿನ್ನದ ಗಣಿಯಲ್ಲಿ ಇತ್ತೀಚೆಗೆ ಮಣ್ಣು ಕುಸಿದು ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ಪರಿಹಾರ ವಿತರಣೆ ಮಾಡಲಾಯಿತು.
ಟೆಕ್ನೋ ಮೈನ್ ಕನ್ಸ್ಟ್ರಕ್ಷನ್ಸ್ ಲಿಮಿಟೆಡ್ ಕಂಪನಿಯಲ್ಲಿ ಗುತ್ತಿಗೆ ಕಾರ್ಮಿಕನಾಗಿ ಕಾರ್ಯನಿರ್ವಹಿಸುತ್ತಿದ್ದ ಯಲ್ಲಪ್ಪ, ಭೂಮಿಯ 700 ಆಳದಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಸಾವನ್ನಪ್ಪಿದ್ದರು. ಮೃತ ಕಾರ್ಮಿಕನಿಗೆ 20 ಲಕ್ಷ ರೂ. ಪರಿಹಾರ ನೀಡಬೇಕೆಂದು ಹಟ್ಟಿಚಿನ್ನದಗಣಿ ಪ.ಜಾ/ಪ.ಪಂ ಗಳ ನೌಕರರ ಸಂಘದ ಮುಖಂಡರು ಹಾಗೂ ಕರ್ನಾಟಕ ಜಾಗೃತ ರೈತ ಸಂಘದ ಮುಖಂಡರು ಒತ್ತಾಯಿಸಿದ್ದರು.
ಇದೀಗ ಊಟಿಯಲ್ಲಿರುವ ಮೃತ ಕಾರ್ಮಿಕನ ಮನೆಗೆ ತೆರಳಿದ ಟೆಕ್ನೋ ಮೈನ್ ಕಂಪನಿಯ ಅಧಿಕಾರಿಗಳು ಹಾಗೂ ಪ.ಜಾ/ಪ.ಪಂ ಗಳ ನೌಕರರ ಸಂಘದ ಮುಖಂಡರು ಮೃತನ ಪತ್ನಿ ಸಿದ್ದಮ್ಮರವರಿಗೆ 1 ಲಕ್ಷ ರೂ. ನಗದು ಪರಿಹಾರ ವಿತರಣೆ ಮಾಡಿದರು.
ಇನ್ನುಳಿದ 19 ಲಕ್ಷ ರೂ.ಗಳನ್ನು ಕಾರ್ಮಿಕ ಆಯುಕ್ತರ ಮೂಲಕ ನೀಡುವುದಾಗಿ ತಿಳಿಸಿದ್ದಾರೆ. ಈ ವೇಳೆ ಟೆಕ್ನೋ ಮೈನ್ ಕಂಪನಿಯ ಅಧಿಕಾರಿಗಳಾದ ಮಾಧವರಾವ್, ನಾಗರಾಜ, ಹಟ್ಟಿಚಿನ್ನದಗಣಿ ಪ.ಜಾ/ಪ.ಪಂ ಗಳ ನೌಕರರ ಸಂಘದ ಅಧ್ಯಕ್ಷ ಜಮದಗ್ನಿ ಕೋಠಾ, ಪ್ರ.ಕಾ ಶರಣಗೌಡ ಗುರಿಕಾರ, ಸೋಮಣ್ಣ ನಾಯಕ, ರಾಜುಗೌಡ ಗುರಿಕಾರ್, ನಾಗಪ್ಪ ಗೌಡೂರು, ಆನಂದ ಕೋಠಾ, ನಿಂಗಪ್ಪ ಯರಡೋಣ, ಭರತ್, ದುರುಗಪ್ಪ ಊಟಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ. ಬಸವಲಿಂಗಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ