ಕೋವಿಡ್ನಿಂದ ಮೃತ ಕುಟುಂಬಕ್ಕೆ ಪರಿಹಾರ ನೀಡಿ
Team Udayavani, Oct 16, 2021, 10:41 AM IST
ಬೀದರ: ಕೋವಿಡ್-19 ಸೋಂಕಿನಿಂದಾಗಿ ಯಾರಾದರು ಮರಣ ಹೊಂದಿದವರಿದ್ದರೆ ಅವರ ಕುಟುಂಬದವರಿಗೆ ಸರ್ಕಾರದಿಂದ ನಿಯಮಾನುಸಾರ ಪರಿಹಾರ ನೀಡುವುದಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ರಿಚರ್ಡ್ ವಿನ್ಸೇಂಟ್ ಡಿಸೋಜಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು, ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾಕರಣ ಪ್ರಗತಿಯು ನಿಗದಿಪಡಿಸಿದ ಗುರಿಯನುಸಾರ ನಡೆಯಬೇಕು. ಅತಿ ಹೆಚ್ಚು ಲಸಿಕೆ ನೀಡಿದ ಕೇಂದ್ರಗಳೆಷ್ಟು? ಅತೀ ಕಡಿಮೆ ಲಸಿಕೆ ನೀಡಿದ ಕೇಂದ್ರಗಳೆಷ್ಟು? ಎಂಬುದನ್ನು ಗುರುತಿಸಿ, ಪರಿಶೀಲಿಸಿ, ಕೊರತೆ ಇರುವ ಕಡೆಗಳಲ್ಲಿ ಲಸಿಕಾರಣದ ಪ್ರಗತಿಗೆ ಮೊದಲ ಆದ್ಯತೆ ನೀಡಬೇಕು ಎಂದರು.
ಅಗತ್ಯವಿದ್ದರೆ ಜಿಲ್ಲೆಯಲ್ಲಿ ಕೋವಿಡ್-19 ಲಸಿಕಾ ಬೂತ್ಗಳ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ವಹಿಸಬೇಕು. ನಿಗದಿಪಡಿಸಿದ ಗುರಿಯನುಸಾರ ಲಸಿಕಾಕರಣಕ್ಕೆ ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಇದೇ ವೇಳೆ ತಿಳಿಸಿದರು.
ಸಭೆಯಲ್ಲಿ ಡಿಎಚ್ಒ ಡಾ| ವಿ.ಜಿ ರೆಡ್ಡಿ ಮಾತನಾಡಿ, ಕೋವಿಡ್ನಿಂದ ಮೃತರಾದವರ ಕುಟುಂಬದವರು, ಸಂಬಂಧಿಕರು ಸರ್ಕಾರದಿಂದ ಪರಿಹಾರ ಪಡೆಯುವುದಕ್ಕೆ ಸಂಬಂಧಿಸಿದಂತೆ ಲಿಂಕ್ ಬಳಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಇದುವರೆಗೆ 8,83,463 ಜನರು ಮೊದಲ ಡೋಸ್ನ್ನು 4,33,005 ಜನರು ಎರಡನೇ ಡೋಸನ್ನು ಪಡೆದು ಕೊಂಡಿದ್ದಾರೆ. ಇನ್ನೂ 3 ಲಕ್ಷ ಜನರಿಗೆ ಮೊದಲನೇ ಡೋಸ್ ನೀಡುವುದು ಬಾಕಿ ಇದೆ. ಈಗ ಮೊದಲನೇ ಹಾಗೂ ಎರಡನೇ ಡೋಸ್ ಸೇರಿ ಪ್ರತಿ ದಿನ 11 ಜನರಿಗೆ ಲಸಿಕೆ ನೀಡಲಾಗುತ್ತಿದೆ. ಲಸಿಕಾಕರಣಕ್ಕೆ ವಿವಿಧ ಇಲಾಖೆಗಳಿಂದ ಸಹಕಾರ ಸಿಗುತ್ತಿದೆ. ಜನರ ಮನವೊಲಿಸಿ ಲಸಿಕಾಕರಣ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಕುರ್ಚಿ ಉಳಿಸಿಕೊಳ್ಳಲು ಸಿಎಂ ಆರ್ ಎಸ್ಎಸ್ ಹೊಗಳುತ್ತಿದ್ದಾರೆ: ಸಿದ್ದರಾಮಯ್ಯ
ತೋಟಗಾರಿಕಾ ಬೆಳೆಗಳ ಸ್ಥಿತಿಗತಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದಾಗಿ 1203 ಹೆಕ್ಟೇರ್ ಪ್ರದೇಶದಲ್ಲಿನ ಶುಂಠಿ, ಟೆಮೆಟೋ, ಮೆನಸಿನಕಾಯಿ ಹಾಗೂ ಇನ್ನಿತರ ತೋಟಗಾರಿಕಾ ಬೆಳೆಗಳು ಹಾನಿಯಾಗಿದೆ. ಇದಕ್ಕಾಗಿ ಪರಿಹಾರ ಮೊತ್ತ 1.7 ಕೋಟಿ ರೂ. ಅಂದಾಜಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ಸಭೆಗೆ ತಿಳಿಸಿದರು.
ಸರ್ಕಾರದಿಂದ ಈಗಾಗಲೇ ಬಿಡುಗಡೆ ಆಗಿರುವ ಅನುದಾನವನ್ನು ಕೂಡಲೇ ಬಳಕೆ ಮಾಡಬೇಕು. ನಿವೇಶನ ಲಭ್ಯವಿರುವ ಕಡೆಗಳಲ್ಲಿ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯವನ್ನು ವಿಳಂಬ ಮಾಡದೇ ಆರಂಭಿಸಬೇಕು ಎಂದು ಡಿಡಿಪಿಯ ಮತ್ತು ಪಿಆರ್ಇ ಇಲಾಖೆ ಅಧಿಕಾರಿಗಳಿಗೆ ಸಭೆಯಲ್ಲಿ ಕಾರ್ಯದರ್ಶಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಹಲವಾರು ಬಾರಿ ನಡೆದ ಸಭೆಗಳಲ್ಲಿ ತಿಳಿಸಿದಾಗ್ಯೂ ಕಚೇರಿಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಲಸಿಕೆ ಹಾಕಿಸಲು ಕ್ರಮ ವಹಿಸದೇ ಇರುವ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಕಾರಣ ಕೇಳಿ ನೋಟೀಸ್ ಜಾರಿ ಮಾಡಲು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಜಿಪಂ ಸಿಇಒ ಜಹೀರಾ ನಸೀಮ್, ಅಪರ ಜಿಲ್ಲಾಧಿಕಾರಿ ಬಿ. ಬಾಬು ರೆಡ್ಡಿ, ಸಹಾಯಕ ಆಯುಕ್ತರಾದ ಗರೀಮಾ ಪನ್ವಾರ, ಡಾ| ಭುವನೇಶ ಪಾಟೀಲ, ಜಿಪಂ ಸಿಇಒ ಎಸ್.ಎಸ್ ಮಠಪತಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ