ನವೀಕೃತ ಸೇತುವೆ-ಬಾಂದಾರ ಪರಿಶೀಲನೆ
Team Udayavani, Oct 29, 2019, 1:31 PM IST
ಭಾಲ್ಕಿ: ತಾಲೂಕಿನ ಮಾಣಿಕೇಶ್ವರ ಮತ್ತು ಜೀಗ್ಯಾಳ ಗ್ರಾಮ ಹತ್ತಿರದ ಸೇತುವೆ-ಬಾಂದಾರ ಅನ್ನು ಶಾಸಕ ಈಶ್ವರ ಖಂಡ್ರೆ ಸೋಮವಾರ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು, 2006ರಲ್ಲಿ ನಮ್ಮ ತಂದೆ ಭೀಮಣ್ಣಾ ಖಂಡ್ರೆ ಅವರ ಅವಧಿಯಲ್ಲಿ ಚಾಲನೆ ನೀಡಿದ ಮಾಂಜರಾ ನದಿಗೆ ಕಟ್ಟಲಾದ ಮಾಣಿಕೇಶ್ವರ ಮತ್ತು ಜೀಗ್ಯಾಳ ಸೇತುವೆ-ಬಾಂದಾರಗಳ ಗೇಟ್ ಗಳಲ್ಲಿ ದೋಷದಿಂದ ನೀರು ನಿಲ್ಲುತ್ತಿದ್ದಿಲ್ಲ. ಕೆಲವು ದಿನಗಳ ಹಿಂದೆ ಈ ಕುರಿತು ಪರಿಶೀಲನೆ ನಡೆಸಿ, ಈ ಬ್ಯಾರೇಜುಗಳ ಗೇಟ್ ಕಾಮಗಾರಿ ನವೀಕರಣ ಮಾಡಲಾಗಿದೆ. ಹೀಗಾಗಿ ಈ ಭಾಗದ ರೈತರಿಗೆ ಈ ಬ್ಯಾರೇಜುಗಳು ಸಂಜೀವಿನಿಯಾಗಿ ಪರಿಣಮಿಸಿವೆ ಎಂದರು.
ಸದ್ಯದಲ್ಲಿ ಬಿದ್ದ ಕಡಿಮೆ ಮಳೆಯಿಂದಲೇ ಇಲ್ಲಿ ಸುಮಾರು 2.5 ನಿಂದ 3 ಮೀಟರ್ ವರೆಗೆ ನೀರು ನಿಂತಿದೆ. ಇದರಿಂದ ಇಲ್ಲಿಯ ರೈತರಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು. ಸಣ್ಣ ನೀರಾವರಿ ಇಲಾಖೆಯ ಎಇಇ ವಿಲಾಸ ಮಾಶೆಟ್ಟೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬಾಬುರಾವ್ ಪೊಲೀಸ್ ಪಾಟೀಲ ಸೇರಿದಂತೆ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…