ಎಡದಂಡೆ ಕಾಲುವೆ ದುರಸ್ತಿ: ಸ್ಥಳಕ್ಕೆ ಎಂಡಿ ಭೇಟಿ
Team Udayavani, Jul 14, 2022, 5:50 PM IST
ಹುಣಸಗಿ: ಬಸವಸಾಗರ ಎಡದಂಡೆ ಮುಖ್ಯಕಾಲುವೆ ಅಗ್ನಿ ಬಳಿ ದುರಸ್ತಿ ಕಾಮಗಾರಿ ಸ್ಥಳಕ್ಕೆ ಬುಧವಾರ ಕೆಬಿಜೆಎನ್ಎಲ್ ಎಂ.ಡಿ. ಶಿವಕುಮಾರ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಅವರು, ಈಗಾಗಲೇ ಜಲಾಶಯ ಭರ್ತಿಯಾಗಿದ್ದು, ರೈತರ ಹಿತದೃಷ್ಟಿಯಿಂದ ವಾರದೊಳಗೆ ಕಾಮಗಾರಿ ಮುಗಿಸಬೇಕು ಎಂದು ಇಂಜಿನಿಯರ್ಗಳಿಗೆ ಸೂಚಿಸಿದರು.
ವರುಣನ ಅರ್ಭಟದಿಂದಾಗಿ ಕಾಲುವೆ ಕೆಲಸಕ್ಕೆ ಸಮಸ್ಯೆಯಾಗಿದ್ದು, ಈಗಾಗಲೇ ಮರುಮ್ ಟ್ರಿಮ್ಮಿಂಗ್ ಕೆಲಸ ಮುಗಿದಿದೆ. ಆರ್ಸಿಸಿ ಲೈನಿಂಗ್ ಕೆಲಸ ಮಾತ್ರ ಬಾಕಿಯಿದೆ. ಜು. 20ರ ನಂತರ ಆದಷ್ಟು ಬೇಗ ಐಸಿಸಿ ಸಭೆ ಕರೆದು ಕಾಲುವೆಗೆ ನೀರು ಹರಿಸುವ ಕುರಿತು ನಿರ್ಣಯಿಸಲಾಗುತ್ತದೆ ಎಂದು ತಿಳಿಸಿದರು.
ಜಲಾಶಯದಲ್ಲಿ 29 ಟಿಎಂಸಿ ನೀರನ್ನು ಸಂಗ್ರಹಿಸಿ ಇಟ್ಟುಕೊಳ್ಳಲಾಗಿದೆ. ಅಗ್ನಿ ಬಳಿ ಪದೇ ಪದೆ ಕಾಲುವೆ ಕುಸಿತಕ್ಕೆ ಸರಕಾರ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದು, ಮುಂದಿನ ದಿನಗಳಲ್ಲಿ ನವೀನ ತಂತ್ರಜ್ಞಾನದ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು. ಮುಖ್ಯ ಅಭಿಯಂತರ ಅಶೋಕ ವಾಸನದ, ಇಇ ಪ್ರಕಾಶ ಮುದುಗಲ್, ಎಇಇ ಗಳಾದ ರವಿಕುಮಾರ ಸೇರಿದಂತೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ