ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ 27ರಂದು ಬಂದ್
ಕೃಷಿ ಕಾಯ್ದೆ ಜಾರಿಗೊಳಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾರಕ ಬೆಳವಣಿಗೆಯಾಗಿದೆ.
Team Udayavani, Sep 25, 2021, 12:20 PM IST
ಶಹಾಪುರ: ವಿವಾದಿತ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಸೆ.27ರಂದು ನಡೆಯಲಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಬಂದ್ ಮಾಡಲಾಗುವುದು ಎಂದು ಹಿರಿಯ ನ್ಯಾಯವಾದಿ ಬಾಸ್ಕರ್ರಾವ್ ಮೂಡಬೂಳ ತಿಳಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿವಿಧ ಬೇಡಿಕೆ ಈಡೇರಿಕೆಗೆ ಹೋರಾಟ ನಡೆಸಲಾಗುತ್ತದೆ.
ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಬಂದ್ ಗೆ ಕರೆ ನೀಡಿದ್ದು, ಇದರಲ್ಲಿ ಪ್ರತಿಯೊಬ್ಬ ಅನ್ನದಾತರು ಕೂಡ ಭಾಗವಹಿಸುವುದು ಅಗತ್ಯ. ಸರ್ಕಾರ ಮೂರು ಕೃಷಿ ಕಾಯ್ದೆ ಜಾರಿಗೊಳಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾರಕ ಬೆಳವಣಿಗೆಯಾಗಿದೆ. ರೈತ ವಿರೋಧಿ ನೂತನ ಕೃಷಿ ಕಾಯ್ದೆಗಳಾದ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ ಮಾಡಿ ಜಾರಿಗೊಳಿಸಿರುವುದನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು ಎಂದರು.
ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಚೆನ್ನಪ್ಪ ಆನೇಗುಂದಿ ಮಾತನಾಡಿ, ಇಂಧನ ಬೆಲೆ ಇಳಿಸಬೇಕು. ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನಡೆದ ಕೋಟ್ಯಂತರ ರೂ. ವೆಚ್ಚದ ಯಲ್ಲಮ್ಮದೇವಿ ಗುಡಿ, ಸೈದಾಪುರ, ಸಗರ, ಗೋಗಿ ಹೊಸಕೇರಿ, ರಸ್ತಾಪುರದಿಂದ ಶಾರದಳ್ಳಿ ರಸ್ತೆ ಅಗಲೀಕರಣ, ಡಾಂಬರೀಕರಣ ರಸ್ತೆಗಳು ಕಳಪೆ ಮಟ್ಟದಿಂದ ಕೂಡಿದ್ದು ಸಮಗ್ರ ತನಿಖೆ ಮಾಡಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಆಗ್ರಹಸಿದರು. ಈ ವೇಳೆ ಶರಣಗೌಡ ಗೂಗಲ್, ದಾವಲಸಾಬ್ ನದಾಫ್, ಜೈಲಾಲ್ ತೋಟದಮನಿ, ಎಸ್.ಎಂ. ಸಾಗರ್, ಶರಣು ಮದ್ರಕಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ