ಮರಾಠಿಗರಿಗೆ ಸಚಿವ ಸ್ಥಾನ ನೀಡಲು ಮನವಿ
Team Udayavani, Sep 18, 2018, 12:07 PM IST
ಹುಮನಾಬಾದ: ಮರಾಠಾ ಸಮುದಾಯದ ನಿಯೋಗ ಸೋಮವಾರ ಭಾಲ್ಕಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿರುವ 6ಜನ ಮರಾಠಾ ಶಾಸಕರಲ್ಲಿ ಒಬ್ಬರಿಗಾದರೂ ಸಚಿವ ನೀಡಿ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿತು.
ಕ್ಷತ್ರೀಯ ಮರಾಠಾ ಸಮಾಜ ರಾಜ್ಯ ಘಟಕದ ಅಧ್ಯಕ್ಷ ಸುರೇಶರಾವ್ ಸಾಠೆ ಮತ್ತು ಜಿಪಂ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ ನೇತೃತ್ವದ ನಿಯೋಗದ ಮನವಿಗೆ ಸ್ಪಂದಿಸಿದ ಈಶ್ವರ ಖಂಡ್ರೆ ಅವರು, ಮರಾಠಿಗರಿಗೆ ಸಚಿವ ಸ್ಥಾನ ಕೊಡಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸುವಂತೆ ಈಶ್ವರ ಖಂಡ್ರೆ ಅವರು ಮರಾಠಾ ಸಮುದಾಯ ಮುಖಂಡರಿಗೆ ಸಲಹೆ ನೀಡಿದರು. ತಾಪಂ ಸದಸ್ಯ ಪರಮೇಶ್ವರ ಕೆ.ಪಾಟೀಲ, ಜ್ಞಾನದೇವ ಭೋಸ್ಲೆ, ಗೋರಖ ಸಗರ್, ದಿಗಂಬರರಾವ್ ಮಾನಕರೆ, ಬಾಬುರಾವ್ ಕಾರಭಾರಿ ಸೇರಿ 25ಕ್ಕೂ ಅಧಿಕ ಜನ ನಿಯೋಗದಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ