ಸರಕಾರಿ ನೌಕರರಿಗೆ ಸೂಕ್ತ ರಕ್ಷಣೆ ಕಲ್ಪಿಸಲು ಮನವಿ
Team Udayavani, Dec 5, 2021, 10:38 AM IST
ಗುರುಮಠಕಲ್: ಬಳ್ಳಾರಿ ತಾಲೂಕಿನ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗ ಹಾಗೂ ಪ್ರಭಾರ ಕಂದಾಯ ನಿರೀಕ್ಷಕ ಅಕ್ರಮ ಮರಳು ಸಾಗಾಣಿಕೆ ತಡೆಗೆ ಮುಂದಾದಾಗ ಅವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲೂಕು ಸರಕಾರಿ ನೌಕರರ ಸಂಘ ಪ್ರತಿಭಟನೆ ನಡೆಸಿದರು.
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕು ಸರಕಾರಿ ನೌಕರರ ಸಂಘದ ವತಿಯಿಂದ ತಹಶೀಲ್ದಾರ್ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸಂಘದ ತಾಲೂಕು ಅಧ್ಯಕ್ಷ ಸಂತೋಷ ನಿರೇಟಿ ಮಾತನಾಡಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದರೂ ಅಕ್ರಮ ದಂಧೆಕೋರರು ಅಧಿಕಾರಿ ಮನೆಗೆ ತೆರಳಿ ಅವರ ಮೇಲೆ ಹಾಗೂ ಕುಟುಂಬದವರ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಸರಕಾರಿ ನೌಕರರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಕೂಡಲೇ ತಪ್ಪಿತಸ್ಥರ ಮೇಲೆ ಸರಕಾರ ಕಾನೂನು ಕ್ರಮ ಜರುಗಿಸಬೇಕು. ಸರಕಾರಿ ನೌಕರರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಅವರು ಮನವಿ ಮಾಡಿದರು.
ಸಂಘಟನಾ ಕಾರ್ಯದರ್ಶಿ ಭೀಮಸೇನ್ ಪಾಟೀಲ್ ಮತ್ತು ಪ್ರೇಮ್ ರಾಜ್ ,ಕ್ರೀಡಾ ಕಾರ್ಯದರ್ಶಿ ನಾಗೇಶ, ಆಹಾರ ನಿರೀಕ್ಷಕ ಅನ್ವರ್ ಹುಸೇನ್, ಕಾಶಿನಾಥ ದೊಡ್ಡಮನಿ, ಪುರಸಭೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ