ಜನರ ಸಮಸ್ಯೆಗೆ ತಕ್ಷಣ ಸ್ಪಂದಿಸಿ


Team Udayavani, Jun 22, 2022, 3:02 PM IST

14people

ಹುಣಸಗಿ: ಸಾರ್ವಜನಿಕರ ಪ್ರತಿಯೊಂದು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದರ ಜೊತೆಗೆ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್‌ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಮಂಗಳವಾರ ಸಾರ್ವಜನಿಕರ ಸಮಸ್ಯೆಗಳ ಕುರಿತು ಅರ್ಜಿ ಸ್ವೀಕರಿಸಿ ಮಾತನಾಡಿ, ಸಾರ್ವಜನಿಕರ ಅರ್ಜಿಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದರೆ ಸಂಬಂಧಿಸಿದ ಅಧಿಕಾರಿಗಳಿಗೆ ಅಮಾನತು ಮಾಡಲಾಗುವುದು ಎಂದು ಖಡಕ್ಕಾಗಿ ಎಚ್ಚರಿಸಿದರು.

ಹುಣಸಗಿ ಪಟ್ಟಣದಲ್ಲಿ ಸ್ವತ್ಛತೆ ಕಾಪಾಡಬೇಕು. ಎಲ್ಲೆಂದರಲ್ಲಿ ವ್ಯಾಪಾರ ತಳ್ಳು ಗಾಡಿ ನಿಲ್ಲಿಸದೆ ಸೂಕ್ತ ಸ್ಥಳಗಳಲ್ಲಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕು. ಸಂಚಾರಕ್ಕೆ ತೊಂದರೆ ಆಗದಂತೆ ನಿಗಾವಹಿಸಬೇಕು ಎಂದು ಪಪಂ ಮುಖ್ಯಾಧಿಕಾರಿಗಳಿಗೆ ತಿಳಿಸಿದರು.

ತಹಶೀಲ್ದಾರ್‌ ಕಚೇರಿ ಸುತ್ತಲು ಸ್ವಚ್ಛತೆ ಕಾಪಾಡಬೇಕು. ಕ್ರಮಬದ್ಧವಾಗಿ ಕಚೇರಿ ಸಿದ್ಧಪಡಿಸಿಕೊಳ್ಳಬೇಕು. ಅಲ್ಲದೆ ಆವರಣದಲ್ಲಿ ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಮಾಡಬೇಕು ಎಂದು ತಹಶೀಲ್ದಾರ್‌ ಅಶೋಕ ಸುರಪುರಕರ್‌ಗೆ ಸೂಚಿಸಿದರು.

ಪ್ರತಿ ತಿಂಗಳು ತಾಲೂಕು ಕಚೇರಿಗೆ ಭೇಟಿ

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಪ್ರತಿ ತಿಂಗಳು ಆಯಾ ತಾಲೂಕು ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳ ಆಲಿಸಿ ಪರಿಹರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಹುಣಸಗಿ ತಾಲೂಕು ಕಚೇರಿಗೆ ಭೇಟಿ ನೀಡಿದ್ದು, ವಿವಿಧ ಸಮಸ್ಯೆಗಳ ಕುರಿತು ಅರ್ಜಿಗಳು ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ವೇಳೆ ಪಹಣಿ, ಪಡಿತರ ಚೀಟಿ, ಸರ್ವೇ, ವಿದ್ಯುತ್‌ ಸಮಸ್ಯೆ, ಸಾರಿಗೆ ಸೇರಿದಂತೆ 18ಕ್ಕೂ ಹೆಚ್ಚು ಅರ್ಜಿಗಳನ್ನು ಸಾರ್ವಜನಿಕರು ಜಿಲ್ಲಾಧಿಕಾರಿಗೆ ಸಲ್ಲಿಸಿ ಸಮಸ್ಯೆ ತೋಡಿಕೊಂಡರು. ಜಿಲ್ಲಾ ಸಹಾಯಕ ಅಧಿಕಾರಿ ಶಾಲಮ್‌ ಹುಸೇನ್‌, ತಹಶೀಲ್ದಾರ್‌ ಅಶೋಕ ಸುರಪುರಕರ್‌, ಗ್ರೇಡ್‌-2 ತಹಶೀಲ್ದಾರ್‌ ಮಹಾದೇವಪ್ಪಗೌಡ ಬಿರಾದಾರ, ತಾಪಂ ಇಒ ಬಸವರಾಜ ಸ್ವಾಮಿ, ರೇಷ್ಮೆ ವಿಸ್ತರಣಾಧಿಕಾರಿ ಸಾಬರೆಡ್ಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.