ರೇವಪ್ಪಯ್ಯಾ ಜಾತ್ರೋತ್ಸವ-ಅಗ್ನಿ ಪೂಜೆ
Team Udayavani, Dec 15, 2021, 11:16 AM IST
ಭಾಲ್ಕಿ: ನಾವದಗಿ ಗ್ರಾಮದ ಸದ್ಗುರು ಶ್ರೀ ರೇವಪ್ಪಯ್ಯಾ ಮಹಾಶಿವಶರಣರ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ನಸುಕಿನ ಜಾವದಲ್ಲಿ ಅಗ್ನಿಪೂಜೆ ನೆರವೇರಿತು.
ಪ್ರಾರಂಭದಲ್ಲಿ ಗ್ರಾಮದ ಸದ್ಗುರು ರೇವಪ್ಪಯ್ನಾ ಮಹಾಶಿವಶರಣರ ದೇವಸ್ಥಾನದಿಂದ, ರೇವಪ್ಪಯ್ನಾ ಮುತ್ಯಾರವರ ಪಲ್ಲಕ್ಕಿ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸುಮಂಗಲೆಯರು ಕುಂಭ-ಕಳಸ ಹೊತ್ತು ಭಕ್ತಿ ಮೆರೆದರು.
ನಂತರ ಥೇರ ಮೈದಾನಕ್ಕೆ ಆಗಮಿಸಿದ ಮೆರವಣಿಗೆ ಅಗ್ನಿ ಕುಂಡ, ಅಗ್ನಿ ಹೊತ್ತಿಸುವುದರೊಂದಿಗೆ ಸದ್ಗುರು ರೇವಪ್ಪಯ್ಯಾ ಮಹಾರಾಜಕಿ ಜೈ.. ಜಯಘೋಷದೊಂದಿಗೆ ಅಗ್ನಿ ಪೂಜೆಗೆ ಚಾಲನೆ ನೀಡಲಾಯಿತು.
ಇದಕ್ಕೂ ಮುನ್ನ ನಡೆದ ಧರ್ಮ ಸಭೆಯಲ್ಲಿ ತೆಲಂಗಾಣದ ಜಹಿರಾಬಾದ ತಾಲೂಕಿನ ಮಲ್ಲಯ್ಯನಗಿರಿಯ ಡಾ| ಬಸವಲಿಂಗ ಅವಧೂತರಿಂದ ಪ್ರವಚನ ಕಾರ್ಯಕ್ರಮ ನಡೆಯಿತು. ಎರಡು ವರ್ಷದಿಂದ ಕೊರೊನಾ ಹಿನ್ನೆಲೆಯಲ್ಲಿ ಸದ್ಗುರು ರೇವಪ್ಪಯ್ಯಾ ಸ್ವಾಮಿಗಳ ಜಾತ್ರೋತ್ಸವ ಸರಳವಾಗಿ ಆಚರಿಸಲಾಗಿತ್ತು. ಪ್ರಸ್ತುತ ರಾಜ್ಯದ ಸುತ್ತಮುತ್ತಲಿನ ಗ್ರಾಮಗಳ ಭಕ್ತರೊಂದಿಗೆ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಗಳಿಂದ ಆಗಮಿಸಿದ ಸಾವಿರಾರು ಭಕ್ತರು, ಭಕ್ತಿ-ಭಾವದಿಂದ ಅಗ್ನಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ