ರಸ್ತೆ ನಿಯಮ ಪಾಲಿಸಿ-ಅಪರಾಧ ತಡೆಗಟ್ಟಿ
Team Udayavani, Jan 7, 2022, 5:10 PM IST
ಕಮಲನಗರ: ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಮೂಲಕ ಅಪಘಾತಗಳನ್ನು ತಡೆಯಬೇಕು ಎಂದು ಡಿವೈಎಸ್ಪಿ ಬಲ್ಲಪ್ಪ ನಂದಗಾವೆ ಸಲಹೆ ನೀಡಿದರು.
ಪಟ್ಟಣದ ಶ್ರೀ ಸಿದ್ಧರಾಮೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ 32ನೇ ರಾಷ್ಟ್ರೀಯ ಸುರಕ್ಷತಾ ಸಪ್ತಾಹ, ಮಾದಕ ವಸ್ತುಗಳ ದುಷ್ಪರಿಣಾಮ, ಅಪರಾಧ ತಡೆ ಮಾಸಾಚರಣೆ ಹಾಗೂ ಸೈಬರ್ ಅಪರಾಧಗಳ ಕಡಿವಾಣಕ್ಕಾಗಿ ಆಯೋಜಿಸಿದ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಿಎಸ್ಐ ನಂದಿನಿ ಎಸ್. ಮಾತನಾಡಿ, ವಾಹನ ಚಾಲಕರು ರಸ್ತೆ ನಿಯಮ ಹಾಗೂ ಸಂಚಾರ ಚಿಹ್ನೆ ಚೆನ್ನಾಗಿ ಅರಿತುಕೊಳ್ಳಬೇಕು. ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷತೆ ತೊರದೆ ನಿಯಮ ಪಾಲನೆ ಮಾಡಬೇಕು. ಸಂಚಾರ ನಿಯಮ ಪಾಲನೆ ಮಾಡಿದರೆ ಸಾಕಷ್ಟು ಅಪಘಾತ ತಡೆಗಟ್ಟಬಹುದು ಎಂದರು.
ಠಾಣಾ ಕುಶನೂರ ಪಿಎಸ್ಐ ಚಂದ್ರಶೇಖರ ಮಾತನಾಡಿದರು. ಪ್ರಭಾರಿ ಪ್ರಾಂಶುಪಾಲ ಉಮಾಕಾಂತ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಪಿಎಸ್ಐಗಳಾದ ಬಸವರಾಜ ಪಾಟೀಲ, ರೇಣುಕಾ, ಪ್ರಾಂಶುಪಾಲ ಶಿವಾಜಿ. ಆರ್. ಎಚ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!