ಲಿಂಗಸುಗೂರು: ಸ್ವಯಂ ಸೇವಕರ ಪಥಸಂಚಲನ
Team Udayavani, Oct 26, 2021, 1:17 PM IST
ಲಿಂಗಸುಗೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ವಿಜಯದಶಮಿ ಉತ್ಸವದ ಅಂಗವಾಗಿ ಗಣವೇಷಧಾರಿ ಸ್ವಯಂ ಸೇವಕರ ಆಕರ್ಷಕ ಪಥಸಂಚಲನ ನಡೆಯಿತು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭಗೊಂಡ ಪಥಸಂಚಲನ ಅಂಚೆ ಕಚೇರಿ, ಗೌಳಿಪುರ, ಗದ್ದೆಮ್ಮ ದೇವಿ ದೇವಸ್ಥಾನ, ಮುನ್ನೂರು ಓಣಿ ಗಡಿಯಾರ ವೃತ್ತ, ಚಾವೂಸ್ ಓಣಿ, ರಾಘವೇಂದ್ರ ಸ್ವಾಮಿಗಳ ಮಠ, ಬಸ್ ನಿಲ್ದಾಣ ವೃತ್ತ, ಬೈಪಾಸ್ ರಸ್ತೆ, ಸ್ವಾಮಿ ವಿವೇಕಾನಂದ ನಗರ ಮೂಲಕ ಹಾಯ್ದು ಕಾಲೇಜು ಮೈದಾನ ತಲುಪಿತು.
ಪಥ ಸಂಚಲನದಲ್ಲಿ ನಗರ ಹಾಗೂ ಸುತ್ತಲಿನ ಗ್ರಾಮಗಳಿಂದ ಆಗಮಿದ ಗಣವೇಷಧಾರಿ ಸ್ವಯಂ ಸೇವಕರು, ಘೋಷ ಸಹಿತ ಸಂಚಲನದಲ್ಲಿ ಭಾಗವಹಿಸಿದ್ದರು. ನಗರದ ಕಟ್ಟಡಗಳ ಮೇಲೆ ಭಗವಾಧ್ವಜ ರಾರಾಚಿಸುತ್ತಿದ್ದವು. ಸಾರ್ವಜನಿಕರು ರಸ್ತೆಗಳಲ್ಲಿ ರಂಗೋಲಿ, ಹೂವಿನ ಅಲಂಕಾರ ಮಾಡಿ ಪಥ ಸಂಚಲನ ಸ್ವಾಗತಿಸಿದರು. ಶಿವಾಜಿ, ಸುಭಾಷಚಂದ್ರ ಭೋಸ್, ವಿವೇಕಾನಂದ, ಝಾನ್ಸಿರಾಣಿ ಲಕ್ಷ್ಮೀ, ಒನಕೆ ಓಬವ್ವ, ಭಗತ್ಸಿಂಗ್, ಶ್ರೀರಾಮ, ಕಿತ್ತೂರುರಾಣಿ ಚೆನ್ನಮ್ಮ ಸೇರಿದಂತೆ ವಿವಿಧ ರಾಷ್ಟ್ರ ನಾಯಕರ ವೇಷಧಾರಿ ಮಕ್ಕಳು ಪಥ ಸಂಚಲನ ಸ್ವಾಗತಿಸಿದರು.
ನಂತರ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಎಸ್ಎಸ್ನ ಬಳ್ಳಾರಿ ವಿಭಾಗ ಪ್ರಮುಖ ನಾಗರಾಜ ಮಾತನಾಡಿದರು. ಪಥಸಂಚಲನದಲ್ಲಿ ಡಾ| ಪಾಂಡುರಂಗ ಆಪ್ಟೆ ಬಸವರಾಜ ಸ್ವಾಮಿ, ಸೋಮಶೇಖರ್ ನಾಯಕ, ಮಾಜಿ ಶಾಸಕ ಮಾನಪ್ಪ ವಜ್ಜಲ್, ಗಿರಿಮಲ್ಲನಗೌಡ ಕರಡಕಲ್, ಡಾ| ಶಿವಬಸಪ್ಪ, ವೀರನಗೌಡ ಲೆಕ್ಕಿಹಾಳ, ಚೆನ್ನಬಸವ ಹಿರೇಮಠ, ಶಶಿಕಾಂತ ಗಸ್ತಿ, ಭೀಮಸೇನ್ ಕುಲಕರ್ಣಿ, ಅಯ್ಯಪ್ಪ, ಈಶ್ವರ,ಅಮರ, ಮನೋಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ