ಚೌಡಯ್ಯ ಮೂರ್ತಿ ಅನಾವರಣಕ್ಕೆ ಅದ್ಧೂರಿ ಸಿದ್ಧತೆ

9 ಕುದುರೆಯುಳ್ಳ ರಥದಲ್ಲಿ ಡಿಸಿಎಂ ಮೆರವಣಿಗೆ | ಸೊಲ್ಲಾಪುರದ ಎರಡು ಆನೆಗಳ ಬಳಕೆ

Team Udayavani, Mar 2, 2020, 6:13 PM IST

2-March-35

ಸೇಡಂ: ಹಾಗರಗುಂಡಗಿಯಲ್ಲಿ ನಡೆಯಲಿರುವ ಅಂಬಿಗರ ಚೌಡಯ್ಯ ಮೂರ್ತಿ ಅನಾವರಣ ಕಾರ್ಯಕ್ರಮ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯನ್ನು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ ಉದ್ಘಾಟಿಸಿದರು.

ಸೇಡಂ: ಫರತಾಬಾದ ತಾಲೂಕಿನ ಹಾಗರಗುಂಡಗಿಯಲ್ಲಿ ಮಾ.8ರಂದು ನಡೆಯುವ ಅಂಬಿಗರ ಚೌಡಯ್ಯ ಮೂರ್ತಿ ಅನಾವರಣ ಕಾರ್ಯಕ್ರಮದ ಮೆರವಣಿಗೆಯಲ್ಲಿ ಉಪ ಮುಖ್ಯಮಂತ್ರಿ ಡಾ| ಅಶ್ವತ್ಥ ನಾರಾಯಣ ಅವರನ್ನು ಒಂಭತ್ತು ಕುದುರೆಗಳುಳ್ಳ ರಥದಲ್ಲಿ ಮೆರವಣಿಗೆ ಮಾಡಲಾಗುವುದು ಎಂದು ಮಾಜಿ ಸಚಿವ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ ತಿಳಿಸಿದರು.

ಫರತಾಬಾದ ತಾಲೂಕಿನ ಹಾಗರಗುಂಡಗಿಯಲ್ಲಿ ಮಾ. 8ರಂದು ನಡೆಯುವ ಅಂಬಿಗರ ಚೌಡಯ್ಯ ಮೂರ್ತಿ ಅನಾವರಣ ಕಾರ್ಯಕ್ರಮದ ನಿಮಿತ್ತ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಳ್ಳಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕೋಲಿ ಸಮಾಜದವರು ಆಂತರಿಕ ದ್ವೇಷ ಬದಿಗೊತ್ತಿ ಒಗ್ಗಟ್ಟಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಶ್ವಮಟ್ಟದಲ್ಲಿ ಸಮಾಜದ ಶಕ್ತಿ ತೋರಿಸಬೇಕು. ಹೀಗಾದಲ್ಲಿ ಕೋಲಿ ಸಮಾಜ ಪರಿಶಿಷ್ಟ ಪಂಗಡಕ್ಕೆ ಸೇರಲು ಅನುಕೂಲ ಆಗುವುದಲ್ಲದೇ, ರಾಜ್ಯದಲ್ಲಿ ಹತ್ತಾರು ಶಾಸಕರು, ಒಂದಿಬ್ಬರು ಸಚಿವರು ಅಧಿಕಾರಕ್ಕೆ ಬರಬಹುದು. ಶೈಕ್ಷಣಿಕ ಮತ್ತು ಉದ್ಯೋಗಿಕ ರಂಗದಲ್ಲಿ ಮೀಸಲಾತಿ ದೊರೆಯಲಿದೆ. ಈ ಮೂಲಕ ಸಮಾಜದ ಶಕ್ತಿ ವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸುವ ಶಪಥ ಮಾಡಲಾಗಿದೆ ಎಂದು ಹೇಳಿದರು. ನಾನು ಮತ್ತು ನನ್ನ ಪತ್ನಿ ಕೊನೆ ಉಸಿರಿರುವತನಕ ಕೋಲಿ ಸಮಾಜವನ್ನು ಎಸ್ಟಿಗೆ ಸೇರಿಸುವುದಕ್ಕಾಗಿಯೇ ಹೋರಾಡುತ್ತೇವೆ ಎಂದು ಪುನರುತ್ಛರಿಸಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ಶಿವಕುಮಾರ ನಿಡಗುಂದಾ ಮಾತನಾಡಿ, ಕಣಿವೆ ರಾಜ್ಯದಲ್ಲಿ ತಳವಾರ ಸಮುದಾಯದವರನ್ನು ಎಸ್ಟಿಗೆ ಸೇರಿಸಲಾಗಿದೆ. ಹೀಗಾಗಿ ಕೋಲಿ ಸಮಾಜ ಬಾಂಧವರು ಮತ್ತಷ್ಟು ಶಕ್ತಿ ಪ್ರದರ್ಶಿಸುವ ಅವಶ್ಯಕತೆ ಇದೆ ಎಂದರು.

ಕೋಲಿ ಸಮಾಜದ ಗೌರವಾಧ್ಯಕ್ಷ ಭೀಮರಾವ್‌ ಮುತ್ಯಾಲ, ತಾಲೂಕು ಅಧ್ಯಕ್ಷ ಶ್ರೀನಾಥ ಪಿಲ್ಲಿ, ಉದ್ಯಮಿ ಲಚ್ಚಪ್ಪ ಜಮಾದಾರ, ಮಾಜಿ ಅಧ್ಯಕ್ಷ ಭೀಮರಾವ್‌ ಅಳ್ಳೊಳ್ಳಿ, ಸೋಮಶೇಖರ ಬಿಬ್ಬಳ್ಳಿ, ಮಲ್ಲಿಕಾರ್ಜುನ ಗುಡ್ಡದ, ನಾಗಪ್ಪ ಕೊಳ್ಳಿ, ಶ್ಯಾಮಪ್ಪ ಕೋಲಿ, ವೆಂಕಟೇಶ ಬಿಲಕಲ್‌, ನಾಗೇಂದ್ರಪ್ಪ ಲಿಂಗಂಪಲ್ಲಿ, ಮಲ್ಲಿಕಾರ್ಜುನ ಮುತ್ಯಾಲ, ಹಣಮಂತಪ್ಪ, ರಾಘವೇಂದ್ರ ಮೆಕ್ಯಾನಿಕ್‌, ಮಲ್ಲಿಕಾರ್ಜುನ ಬ್ಯಾಂಡ್ಲೆ, ಪ್ರವೀಣ ಕೋಡ್ಲಾ, ಮುರುಗೇಶ ಇನ್ನಿತರರು ಇದ್ದರು.ಸಮಾಜದ ಮಾಜಿ ಕಾರ್ಯಾಧ್ಯಕ್ಷ ಶರಣಪ್ಪ ಎಳ್ಳಿ ಪ್ರಾರ್ಥಿಸಿದರು, ವೆಂಕಟೇಶ ಬಿಲಕಲ್‌ ವಂದಿಸಿದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.