ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ


Team Udayavani, Oct 19, 2021, 2:37 PM IST

19

ಮಸ್ಕಿ: ಕಳೆದ ಮೂರು ದಶಕಗಳ ಬೇಡಿಕೆಯಾದ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಯತವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಮಾದಿಗ, ಮೋಚಿ, ಸಮಗಾರ ಸೇರಿದಂತೆ ದಲಿತ ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ಪಟ್ಟಣದಲ್ಲಿ ಬೃಹತ್‌ ರ್ಯಾಲಿ ನಡೆಸಲಾಯಿತು.

ಪಟ್ಟಣದ ಗಾಂಧಿ ನಗರದಿಂದ ಆರಂಭವಾದ ರ್ಯಾಲಿ ಅಶೋಕ ವೃತ್ತ, ಡಾ| ಖಲೀಲ್‌ ವೃತ್ತ, ದೈವದಕಟ್ಟೆ, ಕನಕವೃತ್ತದ ಮೂಲಕ ಸಾಗಿ ಹಳೆಯ ಬಸ್‌ ನಿಲ್ದಾಣದ ಬಳಿಯ ಡಾ| ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆ ಸ್ಥಳಕ್ಕೆ ಆಗಮಿಸಿತು. ರ್ಯಾಲಿಯುದ್ದಕ್ಕೂ ಸದಾಶಿವ ಆಯೋಗದ ವರದಿಗೆ ಜಾರಿಗೆ ವಿಳಂಬ ಮಾಡುತ್ತಿರುವ ರಾಜಕೀಯ ಪಕ್ಷಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟ ಸಮಿತಿ ಮುಖಂಡರು ಮಾತನಾಡಿ, ಸಂವಿಧಾನ ಬದ್ಧವಾಗಿ ಸಿಗಬೇಕಾದ ಸೌಲಭ್ಯವನ್ನು ಕೇಳಲು ಕಳೆದ 30 ವರ್ಷಗಳಿಂದ ಬೀದಿಯಲ್ಲಿ ಹೋರಾಟ ಮಾಡುತ್ತಿದ್ದೇವೆ. ಆದರೆ ಅಂದಿನಿಂದ ಈವರೆಗೆ ನಮ್ಮನ್ನಾಳಿರುವ ಸರ್ಕಾರಗಳು ಹೋರಾಟವನ್ನು ಕಡೆಗಣಿಸಿವೆ. ಆದ್ದರಿಂದ ನಮ್ಮ ಹೋರಾಟದ ರೋಪರೇಷೆಗಳನ್ನು ಬದಲಿಸಿಕೊಂಡು ವಿಧಾನಸೌಧದ ಮೂರನೇ ಮಹಡಿಗೆ ಹೋರಾಟ ಮಾಡೋಣ ಎಂದು ಕರೆ ನೀಡಿ ಚುನಾಯಿತ ಜನಪ್ರತಿನಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ನ್ಯಾ| ಸದಾಶಿವ ಆಯೋಗದ ವರದಿ ಸಂವಿಧಾನ ಬದ್ಧವಾಗಿದೆ. ವರದಿಯನ್ನು ವಿರೋಧಿಸುವವರು ಸಂವಿಧಾನದ ವಿರೋಧಿಗಳು. ರಾಜ್ಯದಲ್ಲಿ ಪ್ರತಿನಿತ್ಯ ದಲಿತರ ಮೇಲೆ ನಿರಂತರ ದೌರ್ಜನ್ಯಗಳು ನಡೆಯತ್ತಿವೆ. ಆದರೆ ಸರ್ಕಾರಗಳು ಮಾತ್ರ ಇದನ್ನು ನೋಡಿಕೊಂಡು ಸುಮ್ಮನೆ ಕುಳಿತಿವೆ. ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಎಲ್ಲ ರಾಜಕೀಯ ಪಕ್ಷಗಳು ವರದಿ ಜಾರಿ ಬಗ್ಗೆ ಹೇಳುತ್ತಿವೆ ಹೊರತು ಜಾರಿ ಮಾಡಲು ಮುಂದೆ ಬರುತ್ತಿಲ್ಲ. ಕೂಡಲೇ ವರದಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಲಿಂಗಸಗೂರಿನ ಸಹಾಯಕ ಆಯುಕ್ತ ರಾಹುಲ್‌ ಸಂಕನೂರು ಆಗಮಿಸಿ ಮನವಿ ಸ್ವೀಕರಿಸಿದರು. ದಲಿತ ಸಾಹಿತಿ ದಾನಪ್ಪ ನಿಲೋಗಲ್‌, ಮುಖಂಡರಾದ ದೊಡ್ಡಪ್ಪ ಮುರಾರಿ, ಎಚ್‌.ಬಿ.ಮುರಾರಿ, ಪಾಮಯ್ಯ ಮುರಾರಿ, ದುರಗಪ್ಪ ಗುಡಗಲದಿನ್ನಿ, ದೊಡ್ಡ ಕರಿಯಪ್ಪ, ಹನುಮಂತಪ್ಪ ಮೋಚಿ, ಹನುಮಂತಪ್ಪ ಮುದ್ದಾಪೂರ, ಹನುಮಂತಪ್ಪ ಪರಾಪೂರ, ಮಲ್ಲಯ್ಯ ಬಳ್ಳಾ, ಹನುಮಂತಪ್ಪ ವೆಂಕಟಾಪೂರ, ತಿಕ್ಕಯ್ಯ ಬಿ. ಮಲ್ಲಪ್ಪ ಗೋನಾಳ, ಹನುಮಂತಪ್ಪ ಮೋಚಿ, ಮೌನೇಶ ಮುರಾರಿ, ಅಶೋಕ ಮುರಾರಿ, ದುರ್ಗರಾಜ ವಟಗಲ್‌, ಬಸವರಾಜ ಉದ್ಬಾಳ್‌, ಸಂತೋಷ ಹಿರೇದಿನ್ನಿ ಸೇರಿದಂತೆ ಮಾದಿಗ, ಛಲುವಾದಿ, ಸಮಗಾರ, ಮೀಸಲಾತಿ ಒಳಪಡುವ ಸಮುದಾಯಗಳು, ಮಹಿಳೆಯರು ಹಾಗೂ ಯುವಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.