ಬೃಹತ್ ರೋಡ್ ಶೋ ನಡೆಸಿದ ಕೇಸರಿ ಪಡೆ
ಮಡಿವಾಳ ಮಾಚಿದೇವ ವೃತ್ತಗಳ ಮೂಲಕ ಹಾದು ತ್ರಿಪುರಾಂತ ಹನುಮಾನ ದೇವಸ್ಥಾನ ಬಳಿ ಮುಕ್ತಾಯಗೊಂಡಿತು.
Team Udayavani, Apr 16, 2021, 6:42 PM IST
ಬಸವಕಲ್ಯಾಣ: ವಿಧಾನಸಭೆ ಉಪ ಚುನಾವಣೆ ಬಹಿರಂಗ ಪ್ರಚಾರ ಗುರುವಾರ ಸಂಜೆ 5 ಗಂಟೆಗೆ ಅಂತ್ಯಗೊಂಡಿದ್ದು ಇದಕ್ಕೂ ಮುನ್ನ ಮಧ್ಯಾಹ್ನ ಬಿಜೆಪಿ ವತಿಯಿಂದ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಲಾಯಿತು. ಬಿಜೆಪಿ ಅಭ್ಯರ್ಥಿ ಶರಣು ಸಲಗರ ಬೆಂಬಲಿಗರು, ಅಭಿಮಾನಿಗಳು ಹಾಗೂ ಅಸಂಖ್ಯ ಕೇಸರಿ ಪಡೆ ಕಾರ್ಯಕರ್ತರಿಂದ ಮುಖ್ಯರಸ್ತೆ ಕಿಕ್ಕಿರಿದು ತುಂಬಿದ್ದು ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.
ನಗರದ ಥೇರ್ ಮೈದಾನದಿಂದ ಆರಂಭವಾದ ರೋಡ್ ಶೋ ಮಹಾತ್ಮ ಗಾಂಧಿ, ಅಂಬೇಡ್ಕರ್, ಹರಳಯ್ಯ ಹಾಗೂ ಮಡಿವಾಳ ಮಾಚಿದೇವ ವೃತ್ತಗಳ ಮೂಲಕ ಹಾದು ತ್ರಿಪುರಾಂತ ಹನುಮಾನ ದೇವಸ್ಥಾನ ಬಳಿ ಮುಕ್ತಾಯಗೊಂಡಿತು.
ಅಭ್ಯರ್ಥಿ ಪ್ರಚಾರದ ರಥದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ. ಸೋಮಣ್ಣ, ಸಂಸದರಾದ ಭಗವಂತ ಖೂಬಾ, ಉಮೇಶ ಜಾಧವ, ಅಭ್ಯರ್ಥಿ ಶರಣು ಸಲಗರ, ಮಾಜಿ ಶಾಸಕ ಎಂ.ಜಿ. ಮುಳೆ, ಜಿಪಂ ಸದಸ್ಯರಾದ
ಗುಂಡುರೆಡ್ಡಿ, ಅಣ್ಣಾರಾವ್ ರಾಠೊಡ್ ಮುಂತಾದವರು ಜನರತ್ತ ಕೈಬೀಸಿ ಶಕ್ತಿ ಪ್ರದರ್ಶಿಸಿದರು.
ಬಿಜೆಪಿ ಜಿಲ್ಲೆ ಹಾಗೂ ತಾಲೂಕಿನ ವಿವಿಧ ಪದಾ ಧಿಕಾರಿಗಳು, ಕಾರ್ಯಕರ್ತರು ಹಾಗೂ ನಗರ ಸೇರಿದಂತೆ ತಾಲೂಕಿನ ಸುತ್ತ ಹಳ್ಳಿಯ ಜನರು ರೋಡ್ ಶೋದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ