ಬೀದರ್: ಕೋವಿಡ್ ವೈರಸ್ ಗೆ ಎರಡನೇ ಬಲಿ ; ಜಿಲ್ಲೆಯನ್ನು ಕಾಡುತ್ತಿದೆ ತಬ್ಲಿಘಿ, ಮುಂಬಯಿ ನಂಟು


Team Udayavani, May 15, 2020, 9:48 PM IST

ಬೀದರ್: ಕೋವಿಡ್ ವೈರಸ್ ಗೆ ಎರಡನೇ ಬಲಿ ; ಜಿಲ್ಲೆಯನ್ನು ಕಾಡುತ್ತಿದೆ ತಬ್ಲಿಘಿ, ಮುಂಬಯಿ ನಂಟು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀದರ್: ಜಿಲ್ಲೆಯಲ್ಲಿ ತಲ್ಲಣ ಮೂಡಿಸುತ್ತಿರುವ ಕೋವಿಡ್ ಸೋಂಕಿಗೆ ಎರಡನೇ ಬಲಿ ಆಗಿದೆ. ಆದರೆ ಈ ವಿಚಾರ ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ಇನ್ನೊಂದೆಡೆ ದೆಹಲಿ, ಮುಂಬೈ ಬಳಿಕ ಈಗ ಜಿಲ್ಲೆಗೆ ಹೈದ್ರಾಬಾದ್ ಕಂಟಕ ಶುರುವಾಗಿದ್ದು, ಶುಕ್ರವಾರ ಬಾಲಕಿ ಸೇರಿ ಜಿಲ್ಲೆಯಲ್ಲಿ ಮತ್ತೆ 7 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 56 ಕ್ಕೆ ಏರಿಕೆಯಾಗಿದೆ.

ತೀವ್ರ ಉಸಿರಾಟದ ತೊಂದರೆಯಿಂದ ಬ್ರಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹುಮನಾಬಾದ್ ತಾಲೂಕಿನ ಚಿಟಗುಪ್ಪಾ ಗ್ರಾಮದ 50 ವರ್ಷದ ಪಿ- 1041 ಸಂಖ್ಯೆಯ ರೋಗಿ ಮೇ 12ರಂದು ಸಾವನ್ನಪ್ಪಿದ್ದರು.

ಅವರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಶುಕ್ರವಾರ ಬಂದಿದ್ದು, ಕೋವಿಡ್ ಸೊಂಕು ಇದ್ದಿರುವುದು ದೃಢಪಟ್ಟಿದೆ. ಮೇ 2ರಂದು ಬೀದರನ ಓಲ್ಡ್ ಸಿಟಿಯ 82 ವರ್ಷದ ನಿವಾಸಿ (ಪಿ-590) ಈ ಮಹಾಮಾರಿಗೆ ಮೊದಲ ಬಲಿಯಾಗಿದ್ದರು.

ಕೇವಲ ಬೀದರ್ ನ ಒಂದು ಭಾಗಕ್ಕಷ್ಟೇ ಕಾಡುತ್ತಿದ್ದ ಸೋಂಕು ಈಗ ಜಿಲ್ಲೆಯ ಹಳ್ಳಿಗಳಿಗೂ ವ್ಯಾಪಿಸುತ್ತಿರುವುದು ಜನರಲ್ಲಿ ತೀವ್ರ ಆತಂಕವನ್ನುಂಟು ಮಾಡುತ್ತಿದೆ. ಜತೆಗೆ ಜಿಲ್ಲೆಗೆ ತಬ್ಲೀಘಿ ಮತ್ತು ಮುಂಬೈನ ನಂಟು ದೊಡ್ಡ ಕಂಟಕವಾಗಿ ಕಾಡುತ್ತಿದೆ.

ಶುಕ್ರವಾರದ ಪಾಸಿಟಿವ್ ಪ್ರಕರಣಗಳಲ್ಲಿ ಐದು ಸೋಂಕಿತರು ತಬ್ಲೀಘಿಗಳ ಮತ್ತು ಒಂದು ಕೇಸ್ ಮುಂಬೈನ್ ಸಂಪರ್ಕ ಇರುವುದು ಖಾತ್ರಿ ಆಗಿದೆ.

ಮುಂಬೈನಿಂದ ಬಂದಿರುವ ಬಸವಕಲ್ಯಾಣ ತಾಲೂಕಿನ ಧನ್ನೂರ(ಕೆ) ಗ್ರಾಮದ ವ್ಯಕ್ತಿಗೆ ಸೋಂಕು ತಗುಲಿದೆ. ಚಿಟಗುಪ್ಪ ಮತ್ತು ಧನ್ನೂರ (ಕೆ) ಗ್ರಾಮಗಳನ್ನು ಕಂಟೈನ್ಮೆಂಟ್ ಝೋನ್ ಆಗಿ ಘೋಷಿಸಿ ಲಾಕ್‌ಡೌನ್ ಮಾಡಲಾಗಿದೆ.

ನಗರದ ಕಂಟೈನ್ಮೆಂಟ್ ಝೋನ್ ನಲ್ಲಿ ಕೋವಿಡ್ ಆರ್ಭಟ ಹೆಚ್ಚಳಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರ‍್ಯಾಂಡಮ್ ಪರೀಕ್ಷೆ ಶುರು ಮಾಡಿರುವುದರಿಂದ ಕಳೆದ ಐದು ದಿನಗಳಿಂದ ಪ್ರತಿ ದಿನ ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ಜಿಲ್ಲೆಯಲ್ಲಿ ಈ ಐದು ದಿನಗಳಲ್ಲಿ 32 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ವಿಸುವಂತೆ ಮಾಡಿದರೆ, ಸೋಂಕು ನಿಯಂತ್ರಣಕ್ಕೆ ಸಮರ ನಡೆಸುತ್ತಿರುವ ಜಿಲ್ಲಾಡಳಿತಕ್ಕೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.

14 ವರ್ಷದ ಪಿ-990 ರೋಗಿಯು ಪಿ-936ರ, 10 ವರ್ಷದ ಪಿ-991 ರೋಗಿಯು ಪಿ-937ರ ಸಂಪರ್ಕ, 24 ವರ್ಷದ ಪಿ-999, 46 ವರ್ಷದ ಪಿ- 1037 ಮತ್ತು 38 ವರ್ಷದ ಪಿ-1043 ಸಂಖ್ಯೆ ರೋಗಿಯು ಕಂಟೈನ್ಮೆಂಟ್ ಝೋನ್ ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದರೆ, 52 ವರ್ಷದ ಪಿ- 1041 ರೋಗಿ ಹೈದ್ರಾಬಾದ್ ಮತ್ತು 36 ವರ್ಷದ ಪಿ- 1042 ರೋಗಿಯು ಮುಂಬೈ ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಹೆಲ್ತ್ ಬುಲೇಟಿನ್ ತಿಳಿಸಿದೆ.

ಜಿಲ್ಲೆಯಲ್ಲಿ ಈಗ ಒಟ್ಟಾರೆ 56 ಪಾಸಿಟಿವ್ ಪ್ರಕರಣಗಳು ವರದಿ ಆದಂತಾಗಿದೆ. ಅದರಲ್ಲಿ ಎರಡು ಸಾವು ಸಂಭವಿಸಿದ್ದರೆ 15 ಜನರು ಡಿಸ್ಚಾರ್ಜ್ ಆಗಿದ್ದು, ಇನ್ನೂ 39 ಜನರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.