ಉನ್ನತ ಶಿಕ್ಷಣಕ್ಕೆ ಸ್ವಸಹಾಯ ಸಂಘಗಳು ಪೂರಕ
Team Udayavani, Nov 7, 2021, 11:25 AM IST
ಭಾಲ್ಕಿ: ದಶಕಗಳ ಹಿಂದೆ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಸಮಸ್ಯೆ ಕಾಡುತ್ತಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಸ್ವ-ಸಹಾಯ ಸಂಘದಲ್ಲಿ ಸಾಲ ಪಡೆದು ಉನ್ನತ ಶಿಕ್ಷಣ ಪಡೆಯಲು ಸಹಕಾರವಾಗುತ್ತದೆ ಎಂದು ಡಿಸಿಸಿ ಬ್ಯಾಂಕ್ ಡಿಜಿಎಂ ಅನೀಲಕುಮಾರ ಪಾಟೀಲ ಹೇಳಿದರು.
ಪಟ್ಟಣದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ದಿ| ಡಾ| ಗುರುಪಾದಪ್ಪ ನಾಗಮಾರಪಳ್ಳಿಯವರ ಜನ್ಮದಿನದ ನಿಮಿತ್ತ ನಡೆದ ಸ್ವ ಸಹಾಯ ಸಂಘದ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಕಳೆದ ಸಾಲಿಗೆ ಹೋಲಿಸಿದರೆ, ಈ ವರ್ಷ ಜಿಲ್ಲೆಯಲ್ಲಿ ಸ್ವ-ಸಹಾಯ ಸಂಘಗಳು, ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡುತ್ತಲಿವೆ. ತಾಯಂದಿರು ಸಂಘದಲ್ಲಿ ಸಾಲ ಪಡೆದು, ತಮ್ಮ ಮಕ್ಕಳಿಗೆ ಐಎಎಸ್, ಐಪಿಎಸ್, ಡಾಕ್ಟರ್, ಇಂಜಿನಿಯರ್ ನಂತಹ ಉನ್ನತ ಶಿಕ್ಷಣ ಕೊಡಿಸುತ್ತಿರುವುದು ಶ್ಲಾಘನೀಯವಾಗಿದೆ. ದಿವಂಗತ ಡಾ| ಗುರುಪಾದಪ್ಪ ನಾಗಮಾರಪಳ್ಳಿಯವರು ಹುಟ್ಟುಹಾಕಿರುವ ಸ್ವ ಸಹಾಯ ಸಂಘದಿಂದ ಪಡೆದ ಸಾಲವನ್ನು ಮಹಿಳೆಯರು ಗುಂಪು ಚಟುವಟಿಕೆಗೆ ಬಳಸಿಕೊಂಡು ವಿವಿಧ ನಮೂನೆಯ ವಸ್ತುಗಳನ್ನು ತಯಾರಿಸಿ ಹೆಚ್ಚಿನ ಆದಾಯ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಸಂಘದ ಸದಸ್ಯೆ ಜಗದೇವಿ.ಎಂ ಮತ್ತು ಪ್ರಿಯಾ ದೇಶಮುಖ ಮಾತನಾಡಿದರು. ಕಾರ್ಯಕ್ರಮದ್ಲಲಿ ನಾಗೇಶ, ಶಾಂತಕುಮಾರ ಬಿರಾದಾರ, ಶರಣು ವಾಡೆಕರ, ಸಂಗಮೇಶ ಹೂಗಾರ, ಪ್ರತಾಪಸಿಂಗ್ ಠಾಕೂರ, ವಿಜಯಕುಮಾರ ಜಾಧವ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ