ಸ್ವ ಸಹಾಯ ಸಂಘ ಡಿಜಿಟಲೀಕರಣ


Team Udayavani, Mar 3, 2018, 12:14 PM IST

bid-3.jpg

ಬೀದರ: ಜಿಲ್ಲೆಯ 8000 ಸ್ವ ಸಹಾಯ ಸಂಘಗಳನ್ನು ಈ ಶಕ್ತಿ ಯೋಜನೆಯಡಿ ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು
ನಬಾರ್ಡ್‌ ಸಹಾಯಕ ಮಹಾಪ್ರಬಂಧಕ ಡಿ.ವಿ. ಜೋಶಿ ಹೇಳಿದರು.

ನಗರದ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಈ-ಶಕ್ತಿ ಯೋಜನೆ ಮತ್ತು ಡಿಜಿಟಲ್‌ ಇಂಡಿಯಾ ಪರಿಕಲ್ಪನೆ ಕುರಿತ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇದರಿಂದ ಸಂಘದ ಸದಸ್ಯರ ದ್ವಿ ಸದಸ್ಯತ್ವ, ಬಹುರೂಪದ ಸಾಲ ಪಡೆಯುವಿಕೆಗಳನ್ನು ತಡೆದು ಅವರಿಗೆ ಸುಲಭ ರೂಪದಲ್ಲಿ ವಿಶ್ವಾಸಾರ್ಹವಾಗಿ ಸಾಲ ನೀಡಲು ಅನುಕೂಲವಾಗಿತ್ತದೆ. ಕಾಗದರಹಿತ ರೂಪದಲ್ಲಿ ಸಾಲ ವಿತರಣೆ ನಡೆಯುತ್ತದೆ
ಎಂದರು.

ಬೀದರ ಸದ್ಯ ಈ ಯೋಜನೆಯಲ್ಲಿ ದೇಶದಲ್ಲಿ 3ನೇ ಸ್ಥಾನದಲ್ಲಿದ್ದು, ಉತ್ತಮ ಸಾಧನೆ ತೋರಿಸಿದೆ. ಸ್ವ ಸಹಾಯ ಗುಂಪುಗಳ ರಚನೆ ಮೂಲಕ ಮಹಿಳೆಯರನ್ನು ಸ್ವಾವಂಬಿಗಳನ್ನಾಗಿಸುವುದು ನಬಾರ್ಡ್‌ ಬ್ಯಾಂಕಿನ ಗುರಿಯಾಗಿದೆ ಎಂದರು.

ಕೇವಲ ಸಾಲ ಮಾತ್ರ ನೀಡದೆ ತರಬೇತಿಗಳ ಮೂಲಕ ಸದಸ್ಯರ ಸಾಮರ್ಥ್ಯ ವೃದ್ಧಿ ಮತ್ತು ಸಂಘದ ಆರ್ಥಿಕ ಶಿಸ್ತಿಗೆ ಕಾರಣವಾಗುವ ಹಲವು ಚಟುವಟಿಕೆಗಳನ್ನು ನಬಾರ್ಡ್‌ ಹಮ್ಮಿಕೊಂಡಿದೆ. “ಸ್ವ ಸಹಾಯದ ಮೂಲಕ ಸಮೃದ್ಧಿ ಆ ಮೂಲಕ ಸ್ವಾವಲಂಬನೆ’ ಎಂಬುದು ಧ್ಯೇಯವಾಗಿದೆ ಎಂದ ಅವರು, ಗುಂಪಿನ ಸದಸ್ಯರ ಅಗತ್ಯಕ್ಕೆ ಅನುಗುಣವಾಗಿ ಸಕಾಲದಲ್ಲಿ ಸಾಲ ಸಿಗುವಂತೆ ಮಾಡುವಲ್ಲಿ ಸ್ವಸಹಾಯ
ಸಂಘಗಳ ಆಂದೋಲನ ಯಶಕಂಡಿದ್ದು ಈಗ ಸಾಲ ನೀಡುವ ಮತ್ತು ಸಂಘಗಳ ವ್ಯವಸ್ಥಿತ ಕಾರ್ಯಾಚರಣೆಗಾಗಿ ಈ-ಶಕ್ತಿ
ಯೋಜನೆ ಆರಂಭಿಸಲಾಗಿದೆ. ಇದರಡಿ ದೇಶದ ಕೇವಲ ನೂರು ಜಿಲ್ಲೆಗಳನ್ನು ಆಯ್ಕೆ ಮಾಡಿಕೊಂಡಿದ್ದು ಕರ್ನಾಟಕದಲ್ಲಿ
ಕೇವಲ 5 ಜಿಲ್ಲೆಗಳಲ್ಲಿ ಅನುಷ್ಠಾನವಾಗುತ್ತಿದೆ. ಅದರಲ್ಲಿ ಬೀದರ ಕೂಡ ಒಳಗೊಂಡಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ಉಪ ಪ್ರಧಾನ ವ್ಯವಸ್ಥಾಪಕ ಅನಿಲ ಪಾಟೀಲ ಮಾತನಾಡಿ, ಯಾವುದೇ ಜಾತಿ ಭೇದ, ಲಿಂಗ ಭೇದ ಮೀರಿ ಒಂದಾಗಿ ಸಹಕರಿಸುವುದೇ ಸಹಕಾರ ವ್ಯವಸ್ಥೆಯ ವೈಶಿಷ್ಟ್ಯವಾಗಿದೆ. ವಿಶ್ವಾಸ ಮತ್ತು ಪ್ರಾಮಾಣಿಕತೆಗಳೇ ಸಹಕಾರಿ ಬ್ಯಾಂಕ್‌ಗಳ ಜೀವಾಳವಾಗಿದೆ. ಭಾವನಾತ್ಮಕ ಸಂಬಂಧಗಳೊಂದಿಗೆ ಆರ್ಥಿಕ ವ್ಯವಹಾರ ನಡೆಸುವುದು, ಗ್ರಾಹಕರೇ ಮಾಲೀಕರಾಗಿರವುದು, ಲಾಭದ ಜೊತೆಗೆ ಸೇವೆಯ ಗುರಿ ಹೊಂದಿರುವುದು ಸಹಕಾರಿ ಸಂಸ್ಥೆಗಳ ವಿಶೇಷತೆಯಾಗಿದೆ.

ಸ್ವ ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ಕೇವಲ ಸಾಲ ವಿತರಿಸುವ ಕೆಲಸವನ್ನು ಮಾತ್ರ ಮಾಡದೇ ಕೃಷಿಕನಿಗೆ ಸಹಾಯಕವಾಗುವ ಹಲವು ಸೇವೆಗಳನ್ನು ಒದಗಿಸುವ ಮೂಲಕ ಅವರಿಗೆ ಆತ್ಮವಿಶ್ವಾಸ ಮೂಡಿಸಬಹುದಾಗಿದೆ. ಈ ನಿಟ್ಟಿನಲ್ಲಿ ಹಲವು ಸಾಮಾಜಿಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕಾಗಿ ಸ್ವ ಸಹಾಯ ಗುಂಪಿನ ಸದಸ್ಯರಿಗೆ ತರಬೇತಿ ಅವಶ್ಯವಾಗಿದೆ ಎಂದು ಹೇಳಿದರು. 

ಚಿಟ್ಟಾದ ಪ್ರಗತಿಪರ ರೈತ ಜಾಫರ್‌ ಮಾತನಾಡಿ, ಆಧುನಿಕ ಕೃಷಿ ಬಗ್ಗೆ ತರಬೇತಿಗಳು ಬಹಳ ಪ್ರಯೋಜನ ನೀಡುತ್ತವೆ. ಇಂತಹ ತರಬೇತಿಗಳಿಗೆ ಹಾಜರಾಗುವ ಮೂಲಕ ಹಲವು ಉತ್ತಮ ಕೃಷಿ ವಿಧಾನಗಳನ್ನು ಅಳವಡಿಸಿಕೊಂಡಿದ್ದೇನೆ. ಸಾವಯುವ ಕೃಷಿ ಮೂಲಕ ಬೆಳೆದ ತೊಗರಿ ಬೇಳೆಯನ್ನು 8000 ರೂ.ಗೆ ಕ್ವಿಂಟಲ್‌ನಂತೆ ಮಾರಾಟ ಮಾಡಿದ್ದೇನೆ ಎಂದು ಅನುಭವ ಹಂಚಿಕೊಂಡರು. ಡಿಸಿಸಿ ಬ್ಯಾಂಕಿನ ತಾಲೂಕು ಅಧಿಕಾರಿ ಮಲ್ಲಿಕಾರ್ಜುನ ಕಾಜಿ, ನಾಗೇಶ, ರಮೇಶ, ಶಂಕರ ಉಪಸ್ಥಿತರಿದ್ದರು. ಸಹಾರ್ದ ಸಂಸ್ಥೆಯ ನಿರ್ದೇಶಕ
ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಅನೀಲ ಮತ್ತು ತನ್ವೀರ ರಾಜಾ ನಿರ್ವಸಿದರು. ಸಂಪನ್ಮೂಲ ವ್ಯಕ್ತಿ ಎಸ್‌.ಜಿ. ಪಾಟೀಲ
ವಂದಿಸಿದರು.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.