ಕಡಿಮೆ ಖರ್ಚಿನಲ್ಲಿ ಜನತೆಗೆ ಉತ್ತಮ ಸೇವೆ ನೀಡಿ


Team Udayavani, Sep 14, 2020, 4:50 PM IST

ಕಡಿಮೆ ಖರ್ಚಿನಲ್ಲಿ ಜನತೆಗೆ ಉತ್ತಮ ಸೇವೆ ನೀಡಿ

ಬೀದರ: ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್‌ ಇಂಡಿಯಾದ ಕನಸು ಕಂಡಿದ್ದಾರೆ. ಜನರಿಗೆ ಎಲ್ಲ ಸೇವೆಗಳು ಸರಳವಾಗಿ ಮತ್ತು ಕಡಿಮೆ ದರದಲ್ಲಿ ದೊರೆಯಬೇಕು ಎನ್ನುವುದೇ ಸಾಮಾನ್ಯ ಸೇವಾ ಕೇಂದ್ರಗಳ ಉದ್ದೇಶವಾಗಿದೆ. ಗ್ರಾಮೀಣ ಭಾಗದಲ್ಲಿ ವಿಎಲ್‌ಇಗಳು ಉತ್ತಮ ಸೇವೆ ನೀಡಿ ಜನರ ಪ್ರೀತಿ, ಗೌರವಕ್ಕೆ ಪಾತ್ರರಾಗಬೇಕು ಎಂದು ಸಂಸದ ಭಗವಂತ ಖೂಬಾ ಕರೆ ನೀಡಿದರು.

ನಗರದ ಡಾ| ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ರವಿವಾರ ನಡೆದ, ಸಂಸದ ಭಗವಂತ ಖೂಬಾ ಅವರ ಜತೆ ಜಿಲ್ಲೆಯ ಎಲ್ಲ ಸಾಮಾನ್ಯ ಸೇವಾ ಕೇಂದ್ರಗಳ ವಿಲೇಜ್‌ ಲೇವೆಲ್‌ ಎಂಟರ್‌ ಪ್ರೇನಿಯರ್‌ ಅವರ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಿಎಸ್‌ ಸಿಗಳಲ್ಲಿ ವಿಎಲ್‌ಇಗಳಾಗಿ ಸೇವೆ ಸಲ್ಲಿಸುತ್ತಿರುವ ಬೀದರ ಜಿಲ್ಲೆಯ 340 ಜನರು ಸ್ವಾವಲಂಬಿ ಜೀವನ ನಡೆಸುತ್ತಿದ್ದೀರಿ. ಅನೇಕ ಪದವೀಧರರಿಗೆ ಕೆಲಸಸಿಗುತ್ತಿಲ್ಲ. ಸ್ಥಳೀಯವಾಗಿ ಕೆಲಸ ಮಾಡಿ, ಹಣ ಗಳಿಸುತ್ತಿರುವ ನೀವೇ ಭಾಗ್ಯಶಾಲಿಗಳು ಎಂದು ಹೇಳಿದರು.

ಕಡಿಮೆ ಖರ್ಚಿನಲ್ಲಿ ಉತ್ತಮ ಸೇವೆ ನೀಡಿದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಲಿದೆ. ಸಿಎಸ್‌ಸಿನಿಂದ 400 ಸೇವೆಗಳನ್ನು ಕಡಿಮೆ ದರದಲ್ಲಿ ನೀಡಬಹುದಾಗಿದೆ. ಇಲ್ಲಿ ಕೆಲಸ ಮಾಡುವ ವಿಎಲ್‌ಇಗಳು ಗ್ರಾಮದ ಮಗ ಹಾಗೂ ಮನೆಯ ಮಗನಾಗಲು ಅವಕಾಶವಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ದೇಶದ ಎಲ್ಲರೂ ಆರ್ಥಿಕವಾಗಿ ಸದೃಢರಾದರೆ ಮಾತ್ರ ದೇಶವು ಬಲಿಷ್ಠವಾಗುತ್ತದೆ. ಎಲ್ಲರೂ ಈ ನಿಟ್ಟಿನಲ್ಲಿ ಸಾಥ್‌ ನೀಡಬೇಕೆಂದರು. ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಮಾತನಾಡಿ, ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಆಹಾರ ಪಡೆಯಲು ಬರುವವರಿಗೆ ಅಲ್ಲಿಯೇ ಆಯುಷ್ಮಾನ್‌ ಆರೋಗ್ಯ ಕಾರ್ಡ್‌ ವಿತರಣೆಗೆಅವಕಾಶ ನೀಡಬೇಕು ಎಂದು ವಿಎಲ್‌ಇ ಒಬ್ಬರು ನೀಡಿರುವ ಸಲಹೆ ಒಳ್ಳೆಯದು. ಈ ಬಗ್ಗೆ ಆಹಾರ ಇಲಾಖೆ ಉಪ ನಿರ್ದೇಶಕರೊಂದಿಗೆ ಚರ್ಚಿಸಿ, ಅನುಷ್ಠಾನಗೊಳಿಸಲಾಗುವುದು. ಸಿಎಸ್‌ಸಿಮೂಲಕ ಹೋಲ್ಡಿಂಗ್‌ ವಿತರಣೆ ಮತ್ತು ಎಸ್‌ಟಿ ಜಾತಿ ಪ್ರಮಾಣ ಪತ್ರಕ್ಕೆ ಅವಕಾಶ ನೀಡಬೇಕೆಂಬ ಬೇಡಿಕೆ ರಾಜ್ಯ ಮಟ್ಟದ ವಿಷಯಗಳಾಗಿದ್ದು, ಈ ಕುರಿತು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ಸಂವಾದದಲ್ಲಿ ಅನೇಕ ವಿಲೇಜ್‌ ಲೇವೆಲ್‌ ಎಂಟರ್‌ಪ್ರೇನಿಯರ್‌ಗಳು ತಮ್ಮ ಅನುಭವ ಮತ್ತು ಸಮಸ್ಯೆಗಳನ್ನು ಹೇಳಿಕೊಂಡರು. ಮಹಾನಂದ ಮಾತನಾಡಿ, ಸಿಎಸ್‌ಸಿ ಸ್ಥಾಪನೆ ಮೂಲಕ ತಮ್ಮ ಜೀವನ ಸುಧಾರಣೆ ಮತ್ತು ಕಷ್ಟಗಳನ್ನು ಮೆಟ್ಟಿ ತಾವು ಈ ಹಂತಕ್ಕೆ ಹೇಗೆ ತಲುಪಿದೆ ಎನ್ನುವ ಅನುಭವ ಹಂಚಿಕೊಂಡರಲ್ಲದೇ ತಾವು ಸ್ಯಾನಿಟರಿ ಪ್ಯಾಡ್‌ ತಯಾರಿಕಾ ಘಟಕ ಸ್ಥಾಪಿಸುತ್ತಿರುವುದಾಗಿಯೂ ತಿಳಿಸಿದರು. ಶೀಬಾ ರೋಜ್‌ ಅವರು ಆಯುಷ್ಮಾನ್‌ ಭಾರತ ಕಾರ್ಡ್‌ ವಿತರಣೆಯಲ್ಲಿನ ಸಾಧನೆ ವಿವರಿಸಿದರು.

ಡಿಎಚ್‌ಒ ಡಾ| ವಿ.ಜಿ. ರೆಡ್ಡಿ, ಯೋಜನಾ ವ್ಯವಸ್ಥಾಪಕ ಸಚಿನ್‌ ಉಪ್ಪೆ, ಸತೀಶ ವಾಲೆ, ಸಂಸದರ ಆಪ್ತ ಸಹಾಯಕ ಅಮರ ಹಿರೇಮಠ, ಶಂಕರ ದೇಶಮುಖ ಮತ್ತಿತರರು ಇದ್ದರು. ಚನ್ನಬಸವ ಹೇಡೆ ನಿರೂಪಿಸಿದರು. ಸಂವಾದದಲ್ಲಿ ಸಿಎಸ್‌ಸಿಗಳ ಸೊಸೈಟಿಗೆ ಕೇಕ್‌ ಕತ್ತರಿಸುವ ಮೂಲಕ ಸಂಸದ ಖೂಬಾ ಉದ್ಘಾಟಿಸಿದರು.

ಬ್ಯಾಂಕ್‌ಗೆ ನೋಟಿಸ್‌ ಕೊಡಿ :  ಭಾಲ್ಕಿಯ ಎಸ್‌ಬಿಐ ಬ್ಯಾಂಕ್‌ನಲ್ಲಿ ಆಧಾರ್‌ ಕಾರ್ಡ್‌ ನವೀಕರಣ ಮಾಡುತ್ತಿಲ್ಲ ಎಂದು ವಿಎಲ್‌ಇ ಒಬ್ಬರು ಸಂವಾದದಲ್ಲಿ ಗಮನ ಸೆಳೆದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಧಿಕಾರಿ ರಾಮಚಂದ್ರನ್‌ ಆರ್‌. ಅವರು, ಸೇವೆ ನೀಡದ ಬ್ಯಾಂಕ್‌ನವರಿಗೆ ನೋಟೀಸ್‌ ಜಾರಿ ಮಾಡಿ ಎಂದು ಸಿಬ್ಬಂದಿಗೆ ಸೂಚಿಸಿದರಲ್ಲದೇ ಜಿಲ್ಲೆಯ ಎಲ್ಲ 340 ಸಿಎಸ್‌ಸಿಗಳಲ್ಲೂ ಆಧಾರ್‌ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಘೋಷಿಸಿದರು.

2021ರ ಜನವರಿ ತಿಂಗಳೊಳಗೆ ಬೀದರ ಜಿಲ್ಲೆಯ 15 ಲಕ್ಷ ಅರ್ಹ ಫಲಾನುಭವಿಗಳಿಗೆ ಆಯುಷ್ಮಾನ್‌ ಆರೋಗ್ಯ ಕಾರ್ಡ್‌ ವಿತರಿಸಲು ಗುರಿ ಹಾಕಿಕೊಳ್ಳಬೇಕು. ಈ ಗುರಿಯನ್ನು ತಲುಪಿದರೆ ಕೇಂದ್ರ ಸಚಿವರನ್ನು ಬೀದರಗೆಕರೆಯಿಸಿ ಜಿಲ್ಲೆಯ ಸಾಮಾನ್ಯ ಸೇವಾ ಕೇಂದ್ರಗಳ ವಿಲೇಜ್‌ ಲೇವೆಲ್‌ ಎಂಟರ್‌ ಪ್ರೇನಿಯರ್‌ಗಳನ್ನು ಸನ್ಮಾನಿಸಲಾಗುವುದು. ರಾಷ್ಟ್ರೀಯ ಭಾವನೆ, ಸಾಮಾಜಿಕ ಕಾಳಜಿ ಇದ್ದರೆ ಮಾತ್ರ ಸಾಧನೆ ಸಾಧ್ಯವಾಗಲಿದೆ.- ಭಗವಂತ ಖೂಬಾ, ಸಂಸದ, ಬೀದರ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.