ಎಚ್ಚರ..ಬಡಿಗೆ ಹಿಡಿದು ಬರ್ತಿದಾರೆ!
Team Udayavani, Apr 30, 2020, 3:57 PM IST
ಶಹಾಬಾದ: ಕೋವಿಡ್ ವೈರಸ್ ಹರಡದಂತೆ ತಡೆಗಟ್ಟಲು ನಿರಂತರವಾಗಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು.
ಶಹಾಬಾದ: ಇವರು ಪೊಲೀಸರಲ್ಲ..ಆದರೂ ಕೈಯಲ್ಲಿ ಬಡಿಗೆ ಹಿಡಿದು, ಸೀಟಿ ಹೊಡೆಯುತ್ತಾ ಬಂದರೆ ಜನರೆಲ್ಲ ಮನೆಗೆ ಓಡಿಹೋಗುತ್ತಾರೆ. ಹೌದು! ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ಭಂಕೂರ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಜನ ಜಾಗೃತಿ ಮೂಡಿಸುತ್ತಿರುವ ರೀತಿ ಇದು.
ಕಟ್ಟೆ ಮೇಲೆ ಕುಳಿತು ಹರಟೆ ಹೊಡೆಯುತ್ತಿದ್ದರೆ ಅಲ್ಲಿಗೆ ಬಡಿಗೆ ಹಿಡಿದು, ಸೀಟಿ ಹೊಡೆಯುತ್ತಾ ದೌಡಾಯಿಸಿ ಮನೆಗೆ ಹೋಗುವಂತೆ ಮಾಡುತ್ತಿದ್ದಾರೆ ಈ ಆಶಾ ಕಾರ್ಯಕರ್ತೆಯರು. ಅಲ್ಲದೇ ದಿನಸಿ ಅಂಗಡಿ, ತರಕಾರಿ ಅಂಗಡಿ ಎದುರು ನಿಲ್ಲುವ ಗ್ರಾಹಕರು, ಮಾಲೀಕರಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ತಿಳಿ ಹೇಳುತ್ತಿದ್ದಾರೆ. ಇವರ ಕಾರ್ಯ ಇಷ್ಟಕ್ಕೇ ಸೀಮಿತವಾಗಿಲ್ಲ. ಜತೆಗೆ ಗ್ರಾಮದ ಪ್ರತಿಯೊಂದು ಓಣಿಗಳಲ್ಲಿಯೂ ಓಡಾಡುವ ಮೂಲಕ ಪಕ್ಕದ ಜಿಲ್ಲೆ, ರಾಜ್ಯದಿಂದ ಬಂದವರನ್ನು ಗುರುತಿಸಿ ತಾಲೂಕಾಡಳಿತಕ್ಕೆ ತಿಳಿಸುತ್ತಿದ್ದಾರೆ.
ತಾಲೂಕಾಡಳಿತದಿಂದ ಬಂದ ಆಹಾರ ಧಾನ್ಯಗಳ ಕಿಟ್ಗಳನ್ನು ಮತ್ತು ಹಾಲಿನ ಪಾಕೆಟ್ಗಳನ್ನು ಬಡ ಕುಟುಂಬದವರಿಗೆ ಹಂಚುವ ಜವಾಬ್ದಾರಿ ಹೊತ್ತಿದ್ದಾರೆ. ತಮ್ಮ ಜೀವವನ್ನು ಲೆಕ್ಕಿಸದೇ ಅಪಾಯಕಾರಿ ಪರಿಸ್ಥಿತಿಯಲ್ಲಿಯೂ ಮನೆ-ಮನೆಗೆ ತೆರಳಿ ಸಾರ್ವಜನಿಕರ ಆರೋಗ್ಯ ತಪಾಸಣೆಯನ್ನು ಇವರು ಮಾಡುತ್ತಿದ್ದಾರೆ. ಇವರ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಮಲ್ಲಿನಾಥ ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ