ಕುರಿ ಸಾಕಾಣಿಕೆಗೆ ಹಿಂಜರಿಕೆ ಬೇಡ
Team Udayavani, Jan 31, 2020, 5:18 PM IST
ಶಹಾಬಾದ: ಲಾಭದಾಯಕ ಕಸುಬಾದ ಕುರಿ ಸಾಕಾಣಿಕೆ ಕೈಗೊಳ್ಳಲು ರೈತರು ಯಾವುದೇ ಹಿಂಜರಿಕೆಯಿಲ್ಲದೇ ಉತ್ತಮ ರೀತಿಯ ತಾಂತ್ರಿಕ ಜ್ಞಾನ ಪಡೆದು ವೈಜ್ಞಾನಿಕ ಕುರಿ ಸಾಕಾಣಿಕೆ ಮಾಡಿದಲ್ಲಿ ರೈತರ ಅಭ್ಯುದಯ ಸಾಧ್ಯ ಎಂದು ಕಲಬುರಗಿಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪನಿರ್ದೇಶಕ ಡಾ| ಶಿವಕುಮಾರ ಜಂಬಲದಿನ್ನಿ ಹೇಳಿದರು.
ಭಂಕೂರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವೈಜ್ಞಾನಿಕ ಪದ್ಧತಿಯಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತ ತರಬೇತಿ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ರೈತರು ಪ್ರತಿವರ್ಷ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಕೃಷಿಯಲ್ಲಿ ನಿರಂತರ ನಷ್ಟ ಅನುಭವಿಸಿ ಸಾಲಭಾದೆ ತಾಳದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಬೇಕಾದರೆ ರೈತರು ಕೃಷಿ ಜತೆಗೆ ಕುರಿ, ಆಡು, ಗೋವು ಸಾಕಾಣಿಕೆ, ಹೈನುಗಾರಿಕೆಯಂತಹ ಉಪಕಸುಬನ್ನು ಮಾಡಿದಾಗ ಲಾಭ ಗಳಿಸಿ ಸಾಮಾಜಿಕವಾಗಿ,ಆರ್ಥಿಕವಾಗಿ ಸದೃಢನಾಗುತ್ತಾರೆ ಎಂದರು.
ವಿದ್ಯಾವಂತ ಯುವಕರು ನೌಕರಿಗಾಗಿ ಅಲೆದಾಡಿ ಸಮಯ ಕಳೆಯುವುದರ ಬದಲು ಹಳ್ಳಿಯಲ್ಲೇ ಸ್ವಯಂ ಉದ್ಯೋಗ ಸೃಷ್ಟಿಸಿ ಮಾಲೀಕರಾಗಿ ಉತ್ತಮ ಆದಾಯ ಪಡೆದುಕೊಳ್ಳಬಹುದು. ಅಲ್ಲದೇ ಕುರಿ ಸಾಕಾಣಿಕೆ ತರಬೇತಿಯಿಂದ ಮಾಹಿತಿ ತಿಳಿಯಬಹುದು ಎಂದು ಹೇಳಿದರು.
ಪಶು ವೈದ್ಯೆ ದೀಪ್ತಿ ಅಲಧರ್ತಿ ಮಾತನಾಡಿ, ದಿನೇ ದಿನೇ ಕುರಿಗಳ ಬೇಡಿಕೆ ಹೆಚ್ಚಾಗುತ್ತಿದೆ.
ರೈತರು ಹಳೆಯ ಪದ್ಧತಿಯಂತೆ ಕುರಿ ಸಾಕಾಣಿಕೆ ಮಾಡದೇ ವೈಜ್ಞಾನಿಕವಾಗಿ ಮಾಡಿದರೆ 2ರಿಂದ 3 ತಿಂಗಳ 3000ರೂ ಬೆಲೆಯ ಗಂಡು ಕುರಿ ತಂದು ಐದಾರು ತಿಂಗಳು ಸಲುಹಿ ಒಂಭತ್ತು ತಿಂಗಳಿಗೆ ಮಾರಾಟ ಮಾಡಿದರೆ ಒಂದು ಗಂಡು ಕುರಿ ಸುಮಾರು 12ರಿಂದ 15 ಸಾವಿರ ರೂ. ಗೆ ಮಾರಾಟವಾಗುತ್ತದೆ. ಈ ಮಾದರಿಯಲ್ಲಿ ಎರಡ್ಮರೂರು ಗುಂಪುಗಳನ್ನು ರಚಿಸಿ ಅವುಗಳಿಗೆ ಸಮಯಕ್ಕೆ ಸರಿಯಾಗಿ ಜಂತು ನಾಶಕ, ಕರಳು ಬೇನೆ ಸೇರಿದಂತೆ ಇತರ ರೋಗಗಳ ವಿರುದ್ಧ ಲಸಿಕೆ ಹಾಕಿಸಿ ಲಾಲನೆ ಪೋಷಣೆ ಮಾಡಿದರೆ ಲಕ್ಷಗಳಲ್ಲಿ ಆದಾಯ ಪಡೆಯಬಹುದು ಎಂದು ಹೇಳಿದರು.
ದೇವೆಂದ್ರಪ್ಪ ಬೆಳಗುಂಪಿ ಅಧ್ಯಕ್ಷತೆ ವಹಿಸಿದ್ದರು. ಭಂಕೂರ ತಾ.ಪಂ ಸದಸ್ಯೆ ವಿಜಯಲಕ್ಷ್ಮೀ ಸುರೇಶ ಚವ್ಹಾಣ, ಕೆಎಂಎಫ್ ಅ ಧಿಕಾರಿ ಸಿದ್ಧಲಿಂಗ ಸಿರಗೊಂಡ, ಸುರೇಶ ಚವ್ಹಾಣ, ಗ್ರಾ.ಪಂ ಮಾಜಿ ಸದಸ್ಯ ರಾಯಪ್ಪ ಹೂಗೊಂಡ, ಚಂದ್ರಕಾಂತ ಧರಿ, ಶರಣು ಮುಡ್ಲಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ