ನಕಲಿ ಬೀಜ ಮಾರಾಟ ಮಾಡುವವರ ವಿರುದ್ಧ ಕ್ರಮ
Team Udayavani, Apr 29, 2020, 4:09 PM IST
ಶಹಾಪುರ: ಉಷಾ ಕೋಲ್ಡ್ ಸ್ಟೋರೇಜ್ ಗೆ ಕೃಷಿ ಜಂಟಿ ನಿರ್ದೇಶಕಿ ಆರ್.ದೇವಿಕಾ ಭೇಟಿ ನೀಡಿ ಪರಿಶೀಲಿಸಿದರು.
ಶಹಾಪುರ: ರಾಜ್ಯದಲ್ಲಿ ನಕಲಿ ಬೀಜಗಳ ಹಾವಳಿ ಉಂಟಾಗಿದ್ದು, ಹಲವಡೆ ನಕಲಿ ಬೀಜ ಮಾರಾಟಗಾರರನ್ನು ವಶಕ್ಕೆ ಪಡೆಯಲಾಗಿದೆ. ಅದರಂತೆ ಜಿಲ್ಲೆಯಲ್ಲೂ ನಕಲಿ ಬೀಜಗಳ ಮಾರಾಟ ಜಾಲವಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ನಗರದ ಕೈಗಾರಿಕಾ ಪ್ರದೇಶದ ಉಷಾ ಕೋಲ್ಡ್ ಸ್ಟೋರೇಜ್ಗೆ ಭೇಟಿ ಪರಿಶೀಲಿಸಿದ್ದು, ಅಂತಹ ಯಾವುದೇ ಲಕ್ಷಣ ಕಂಡು ಬರಲಿಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ ತಿಳಿಸಿದರು.
ಇಲ್ಲಿನ ಕೋಲ್ಡ್ ಸ್ಟೋರೇಜ್ಗೆ ಭೇಟಿ ನೀಡಿ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೊದಲೇ ಪ್ರತಿ ವರ್ಷ ರೈತರು ಒಂದಿಲ್ಲೊಂದು ಸಂಕಷ್ಟ ಎದುರಿಸುವಂತಾಗಿದೆ. ರೈತರಿಗೆ ನಕಲಿ ಬೀಜಗಳ ಮಾರಾಟದಿಂದ ಮೋಸ ಆಗಬಾರದು ಎಂಬ ಉದ್ದೇಶದಿಂದ ನಕಲಿ ಬೀಜಗಳನ್ನು ಸಂಗ್ರಹಿಸುವ ಅಡ್ಡೆಗಳನ್ನು ಪತ್ತೆ ಹಚ್ಚುವ ಕಾರ್ಯ ಭರದಿಂದ ಸಾಗಿದೆ. ಈ ಸ್ಟೋರೇಜ್ನಲ್ಲಿ
ಅನುಮಾನ ಬಂದ ಹಿನ್ನೆಲೆ ದಾಳಿ ನಡೆಸಿ ಪರಿಶೀಲಿಸಲಾಯಿತು ಎಂದರು.
ಇಲ್ಲಿ ಸಂಗ್ರಹಿಸಲಾದ ಮೆಣಸಿನಕಾಯಿ ಕೇವಲ ರೈತರದ್ದಾಗಿದೆ. ವರ್ತಕರ ಮತ್ತು ದಲ್ಲಾಳಿಗಳ ಮೆಣಸಿನಕಾಯಿ ಅಲ್ಲ ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ. ಆದರೆ ಸಂಗ್ರಹಿಸಿದ ರೈತರ ಮಾಹಿತಿ ಲಭ್ಯವಾಗಿಲ್ಲ. ಕೂಡಲೇ ಸಂಗ್ರಹಕಾರರ ಮಾಹಿತಿ ಪಡೆಯುವಂತೆ ಸಹಾಯಕ ಕೃಷಿ ನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಸಹಾಯಕ ಕೃಷಿ ನಿರ್ದೇಶಕ ಗೌತಮ್, ಜಾಗೃತ ದಳದ ಅಧಿಕಾರಿ ರೂಪ ಎಂ.ಸಾಹೇಬ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ