ಆಂಧ್ರ ಕಾರ್ಮಿಕರಿಗೆ ಆಹಾರ ಧಾನ್ಯ ವಿತರಣೆ
Team Udayavani, Apr 17, 2020, 3:41 PM IST
ಶಹಾಪುರ: ಮುಡಬೂಳ ಗ್ರಾಮದಲ್ಲಿ ಆಂಧ್ರದ ಕೂಲಿ ಕಾರ್ಮಿಕರಿಗೆ ಗುರುವಾರ ಆಹಾರ ಧಾನ್ಯ ವಿತರಿಸಲಾಯಿತು
ಶಹಾಪುರ: ತಾಲೂಕಿನ ಮೂಡಬೂಳ ಗ್ರಾಮದಲ್ಲಿ ಆಂಧ್ರದಿಂದ ಕೂಲಿ ಕೆಲಸಕ್ಕೆಂದು ಬಂದ ಸುಮಾರು 50 ಜನ ಕಾರ್ಮಿಕರು ಲಾಕ್ ಡೌನ್ನಿಂದ ಗ್ರಾಮದಲ್ಲಿಯೇ ಉಳಿಯುವಂತಾಗಿದ್ದು, ಊಟಕ್ಕಾಗಿ ಪರಿತಪಿಸುವಂತಾದ ಸುದ್ದಿ ತಿಳಿದ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಕಾರ್ಮಿಕರಿಗೆ ಅಗತ್ಯ ಆಹಾರ ಧಾನ್ಯ, ಸಾಮಗ್ರಿ ವಿತರಿಸಿದರು.
ನಂತರ ಮಾತನಾಡಿದ ಅವರು, ಲಾಕ್ ಡೌನ್ ಮುಕ್ತಾಯವಾಗುವವರೆಗೂ ಊಟದ ಸಮಸ್ಯೆಯಾಗದಂತೆ ಎಲ್ಲ ಅಗತ್ಯ ಆಹಾರ ಸಾಮಗ್ರಿ ವಿತರಿಸಲಾಗಿದ್ದು, ಯಾರೊಬ್ಬರೂ ಹಸಿವಿನಿಂದ ಬಳಲಬಾರದೆಂಬ ಉದ್ದೇಶದಿಂದ ಸ್ವಂತ ಖರ್ಚಿನಿಂದ ಸಾಮಗ್ರಿ ನೀಡಿದ್ದೇನೆ ಎಂದರು.
ಕಾರ್ಮಿಕರಿಗೆ 15 ದಿನಗಳವರೆಗೆ ಬೇಕಾಗುವ ಅಕ್ಕಿ, ಬೇಳೆ, ಒಳ್ಳೆಣ್ಣೆ ಮತ್ತು ಸಕ್ಕರೆ ಸೇರಿದಂತೆ ತರಕಾರಿ ಮುಂತಾದ ಆಹಾರ ಸಾಮಗ್ರಿಗಳನ್ನು ಟಂಟಂ ಮೂಲಕ ಕಳುಹಿಸಿ ಕೊಟ್ಟಿರುವುದಾಗಿ ತಿಳಿಸಿದ ಅವರು, ಲಾಕ್ಡೌನ್ ಮುಗಿದ ನಂತರ ತಮ್ಮ ಸ್ವಗ್ರಾಮ ತೆರಳುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಶಾಸಕರ ಆಪ್ತ ಸಹಾಯಕ ಶಿವಶರಣಪ್ಪ ಇಟಗಿ, ನಗರಸಭೆ ಮಾಜಿ ಸದಸ್ಯ ವಸಂತ ಸುರಪುರಕರ್, ಶಂಕರಗೌಡ ಪಾಟೀಲ್, ಅಶೋಕರಾವ್ ಮಲ್ಲಾಬಾದಿ, ಬಸಲಿಂಗಪ್ಪ ಹವಾಲ್ದಾರ, ಗೋಪಣ್ಣ ಹವಾಲ್ದಾರ, ಮಲ್ಲಣ್ಣ ದ್ಯಾವಗೊಂಡ, ಹಣಮಂತ ಗಡಗ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…