ನೀರು ಉಳಿಸಿಸುವ ಕೆಲಸ ಸರ್ಕಾರವೇ ಮಾಡಬೇಕೆಂಬ ಭಾವನೆ ಹೋಗಬೇಕು: ಮೋದಿ ಕರೆ
ಮೋದಿ ಜತೆ ಧೂಪತಮಹಾಗಾಂವ್ ಗ್ರಾಮ ಪಂಚಾಯತ ಅಧ್ಯಕ್ಷ ಶ್ರೀನಿವಾಸ ಜೊನ್ನೆಕೇರಿ ಸಂವಾದ
Team Udayavani, Mar 22, 2021, 4:02 PM IST
ಬೀದರ್: ವಿಶ್ವ ಜಲ ದಿನಾಚರಣೆ ಪ್ರಯುಕ್ತ ಸೋಮವಾರ ನೀರಿನ ಸಂರಕ್ಷಣೆಯ ಮಹತ್ವದ ಕಾರ್ಯದಲ್ಲಿ ಯಶಸ್ಸು ಸಾಧಿಸಿರುವ ಜಿಲ್ಲೆಯ ಧೂಪತಮಹಾಗಾಂವ್ ಗ್ರಾಮ ಪಂಚಾಯತ ಅಧ್ಯಕ್ಷ ಶ್ರೀನಿವಾಸ ಜೊನ್ನೆಕೇರಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಸಂವಾದ ನಡೆಸಿದರು.
ದೇಶದ ಕೇವಲ ಐದು ಗ್ರಾ.ಪಂ ಅಧ್ಯಕ್ಷರ (ಸರಪಂಚ್) ಜತೆ ಪ್ರಧಾನಿ ನಡೆಸಿದ ಸಂವಾದದಲ್ಲಿ ಕರ್ನಾಟಕದಿಂದ ಧೂಪತಮಹಾಗಾಂವ್ ಗ್ರಾ.ಪಂ ಅಧ್ಯಕ್ಷ ಶ್ರೀನಿವಾಸ ಒಬ್ಬರಾಗಿ ಭಾಗವಹಿಸಿದ್ದು ವಿಶೇಷ. ನೀರಿನ ಸಂರಕ್ಷಣೆಗಾಗಿ ತಮ್ಮ ಗ್ರಾ.ಪಂಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡ ಪ್ರಧಾನಿ ಮೋದಿ ಅವರು, ಬರುವ ದಿನಗಳಲ್ಲಿ ಅಂತರ್ಜಲ ವೃದ್ಧಿಸಲು ಅಗತ್ಯ ಸಲಹೆಗಳನ್ನು ಆಲಿಸಿದರು.
ಇದನ್ನೂ ಓದಿ:ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಯ್ತು ಜ್ವಾಲಾಮುಖಿ ಸ್ಪೋಟದ ವಿಡಿಯೋ!
ಧೂಪತಮಹಾಗಾಂವ್ ಗ್ರಾ.ಪಂ ಅಧ್ಯಕ್ಷ ಶ್ರೀನಿವಾಸ ಅವರು ಸುಮಾರು 6 ನಿಮಿಷಗಳ ಕಾಲ ಪ್ರಧಾನಿ ಜತೆಗೆ ಸಂವಾದ ನಡೆಸಿ, ಪಂಚಾಯತ್ ವ್ಯಾಪ್ತಿಯಲ್ಲಿನ ನೀರಿನ ಸಂರಕ್ಷಣೆಯ ಯಶೋಗಾಥೆಯನ್ನು ವಿವರಿಸಿದರು. ಗ್ರಾಮದ ಸೂಕ್ತ ನಿರ್ವಹಣೆ ಇಲ್ಲದೇ ಹೂಳು ತುಂಬಿಕೊಂಡಿದ್ದ ಗೊಗ್ಗವ್ವೆ ಕೆರೆಯನ್ನು ನರೇಗಾದಡಿ ಕೆಲಸ ಮಾಡಿ, ಇದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿ ನೀರಿನ ದಾಹ ತಣಿಸಲು ಆಗುತ್ತಿರುವ ಉಪಯುಕ್ತತೆ, ಇದಕ್ಕೆ ಗ್ರಾಮಸ್ಥರಿಂದ ದೊರೆತ ಸಹಕಾರ ಕುರಿತು ತಿಳಿಸಿದರಲ್ಲದೇ ಮಾದರಿ ಕಾರ್ಯವನ್ನು ಸುತ್ತಲಿನ ಗ್ರಾಮಸ್ಥರು ಬಂದು ವೀಕ್ಷಿಸುತ್ತಿದ್ದಾರೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ಪ್ರಧಾನಿ ಮೊದಿ, ನೀರು ಪ್ರಕೃತಿ ನಮಗಾಗಿ ನೀಡಿರುವ ಅಮೂಲ್ಯ ಸಂಪತ್ತು. ನೀರನ್ನು ಉಳಿಸಿ ಸಂರಕ್ಷಿಸುವ ಕೆಲಸ ಸರ್ಕಾರವೇ ಮಾಡಬೇಕು ಎಂಬ ಭಾವನೆ ಹೋಗಬೇಕು. ಜನರ ಸಹಭಾಗಿತ್ವದಲ್ಲಿ ಅಗುವ ಪ್ರತಿ ಕಾರ್ಯ ಮಹತ್ವ ಪಡೆದುಕೊಳ್ಳುತ್ತವೆ. ಹಾಗಾಗಿ ಗ್ರಾಮದ ಜನರನ್ನು ವಿಶ್ವಾಸಕ್ಕೆ ಪಡೆದು ನೀರಿನ ಸಂರಕ್ಷಣೆ ಕೆಲಸ ಆಗಬೇಕಿದೆ ಎಂದು ಹೇಳಿದರು.
ಇದನ್ನೂ ಓದಿ: ಅಂತರ್ಜಲ ವೃದ್ಧಿಗೆ ದೀಕ್ಷೆ ತೊಟ್ಟ ಭಗೀರಥ
ಭಾರತದ ಅಭಿವೃದ್ಧಿ ಜಲ ಸೂತ್ರಗಳ ಮೇಲೆ ನಿಂತಿದೆ. ಹಾಗಾಗಿ ಮಳೆಗಾಲ ಆರಂಭ ಆಗುವ ಮೊದಲು ದೇಶದ ಪ್ರತಿ ಗ್ರಾಮ ಪಂಚಾಯತ್ ಅಧ್ಯಕ್ಷರು ಗ್ರಾಮ ಸಭೆಗಳನ್ನು ನಡೆಸಿ, ಮಳೆ ನೀರನ್ನು ಹಿಡಿದಿಟ್ಟುಕೊಂಡು ಸಂರಕ್ಷಿಸಿ ಕೊಳ್ಳಲು ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಬೇಕು. ಇದಕ್ಕಾಗಿ ಸರ್ಕಾರದ ಸುತ್ತೋಲೆಗಳಿಗಾಗಿ ಕಾಯಬಾರದು. ಎಲ್ಲರೂ ಗಂಭೀರತೆ ಅರಿತು ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.
ಸಂವಾದದಲ್ಲಿ ಕೇಂದ್ರ ಜಲ ಶಕ್ತಿ ಮಂತ್ರಾಲಯದ ಸಚಿವರು, ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶದ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ