ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡಲು ಸಿದ್ದರಾಮಯ್ಯ ಬಿಜೆಪಿ ವಕ್ತಾರರೇ?: ಶೆಟ್ಟರ್
Team Udayavani, Jan 11, 2021, 1:30 PM IST
ಬೀದರ್: ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಕ್ತಾರರೇ ಅಥವಾ ವರಿಷ್ಠರೇ? ಸಿಎಂ ಬದಲಾವಣೆ ಕುರಿತು ಮಾತನಾಡಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಬೃಹತ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಕುಟುಕ್ಕಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಪಕ್ಷ (ಕಾಂಗ್ರೆಸ್) ಪ್ರತಿ ಚುನಾವಣೆಯಲ್ಲಿ ಸೋತು ಸುಣ್ಣವಾಗುತ್ತಿದ್ದು, ಪಕ್ಷಕ್ಕೆ ಗತಿ ಇಲ್ಲದಂತಾಗಿದೆ. ಆ ಬಗ್ಗೆ ವಿಚಾರ ಮಾಡಿ, ನಿಮ್ಮ ಮತ್ತು ಡಿ.ಕೆ ಶಿವಕುಮಾರ್ ನಡುವಿನ ಸಂಬಂಧ ಸರಿಪಡಿಸಿಕೊಳ್ಳಿ. ಬೇಕಾಬಿಟ್ಟಿ ಮಾತನಾಡುವುದನ್ನು ಬಿಟ್ಟು ಸರ್ಕಾರಕ್ಕೆ ರಚನಾತ್ಮಕ ಸಲಹೆಗಳನ್ನು ನೀಡಲಿ ಎಂದು ಹೇಳಿದರು.
ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಯಡಿಯೂರಪ್ಪ ಅವರೇ ಮುಂದಿನ ಎರಡುವರೆ ವರ್ಷ ಸಿಎಂ ಅಗಿ ಮುಂದುವರೆಯಲಿದ್ದಾರೆ ಎಂದು ಹೇಳಿದ ಅವರು, ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರ ಇದೆ. ಎಷ್ಟು ಜನ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದನ್ನು ಅವರೇ ನಿರ್ಣಯಿಸಲಿದ್ದಾರೆ ಎಂದರು.
ಬೆಳಗಾವಿ ಸಂಸದ ಉಪ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ, ನನಗೆ ಆಸೆಯೂ ಇಲ್ಲ. ಅಷ್ಟಕ್ಕೂ ಇನ್ನೂ ಚುನಾವಣೆ ಘೋಷಣೆಯಾಗಿಲ್ಲ. ಬೆಳಗಾವಿಯಲ್ಲಿ ಅಂಗಡಿ ಕುಟುಂಬ ಅಥವಾ ಯಾರು ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ಜತೆಗೆ ಬಸವಕಲ್ಯಾಣ ಮತ್ತು ಮಸ್ಕಿ ಉಪ ಚುನಾವಣೆಯ ಅಭ್ಯರ್ಥಿಗಳನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ:ಬಿಜೆಪಿಯದ್ದು 30 ಪರ್ಸೆಂಟ್ ಸರ್ಕಾರ, ಏನಾದರೂ ಅನುಮಾನ ಇದೆಯಾ? ಸಿದ್ದರಾಮಯ್ಯ
ರಾಜ್ಯದಲ್ಲಿ ಶೇ. 60ರಷ್ಟು ಗ್ರಾಮ ಪಂಚಾಯತ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ವಿಜೇತ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಲು ರಾಜ್ಯಾದ್ಯಂತ ಜನ ಸೇವಕ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಜ. 17ರಂದು ಸಮಾವೇಶದ ಸಮಾರೋಪ ನಡೆಯಲ್ಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಈ ಹಿಂದೆ ನಡೆಸಿದ ಗ್ರಾಮ ಸ್ವರಾಜ್ ಸಮಾವೇಶವೇ ಕಾರಣ. ಬಿಜೆಪಿಯ ಸಮಾವೇಶದಿಂದ ಕಾಂಗ್ರೆಸ್ ಎಚ್ಚರಗೊಂಡು ಸಂಕಲ್ಪ ಯಾತ್ರೆ ನಡೆಸುತ್ತಿದೆ. ಜನರ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ಸಿನ ಈ ಸಮಾವೇಶ ಯಶಸ್ಬಿಯಾಗಲ್ಲ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಸಚಿವರಾದ ಶಶಿಕಲಾ ಜೊಲ್ಲಾ, ಪ್ರಭು ಚವ್ಹಾಣ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ