ದಸರಾ ಸರಳ ಆಚರಣೆ-ಎಲ್ಲೆಡೆ ಪೂಜೆ


Team Udayavani, Oct 27, 2020, 3:30 PM IST

ದಸರಾ ಸರಳ ಆಚರಣೆ-ಎಲ್ಲೆಡೆ ಪೂಜೆ

ಬೀದರ: ಅಪ್ಪಟ ದೇಶಿ ಹಬ್ಬ ವಿಜಯ ದಶಮಿ (ದಸರಾ)ಯನ್ನು ರವಿವಾರ ಮತ್ತು ಸೋಮವಾರ ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಹೆಮ್ಮಾರಿ ಕೋವಿಡ್ ಆತಂಕ ಮತ್ತು ನೆರೆ ಪರಿಸ್ಥಿತಿ ನಡುವೆಯೂ ಹಬ್ಬವನ್ನು ಸಡಗರದಿಂದ ನೆರವೇರಿತು.

ನಗರ ಹಾಗೂ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಹಬ್ಬದ ಸಂಭ್ರಮ ಹೆಚ್ಚಿತ್ತು. ಕೆಲವು ಭಾಗದಲ್ಲಿ ರವಿವಾರ ಮತ್ತು ಉಳಿದೆಡೆ ಸೋಮವಾರ ಹಬ್ಬ ಆಚರಿಸಲಾಯಿತು. ವಯಸ್ಕರು ಸೇರಿದಂತೆ ಮಕ್ಕಳು ಹೊಸ ಬಟ್ಟೆಗಳನ್ನು ತೊಟ್ಟು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನವರಾತ್ರಿಯ ಒಂಬತ್ತು ಮತ್ತು ಐದು ದಿನಗಳವರೆಗೆ ದೇವಸ್ಥಾನ, ಮನೆ ಮನೆಯಲ್ಲಿ ದೇವಿ ಪೂಜೆ, ಆಯುಧ ಪೂಜೆ ನಡೆಸಲಾಯಿತು. ನಗರದ ಹಳ್ಳದಕೇರಿ, ದೇವಿ ಕಾಲೋನಿ, ಮಂಗಲಪೇಟ, ದರ್ಜಿಗಲ್ಲಿ, ಬ್ರಹ್ಮನವಾಡಿಯ ಭವಾನಿ ಮಂದಿರಗಳಲ್ಲಿ ಒಂಬತ್ತು ದಿನಗಳ ಕಾಲ ದೇವಿಯನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು.

ಬನ್ನಿ ಕೊಟ್ಟು ಶುಭ ಕೋರಿದರು: ಹಬ್ಬದ ನಿಮಿತ್ತ ವಿಶೇಷವಾಗಿ ಹೋಳಿಗೆ, ಪಾಯಸಾ ಸೇರಿದಂತೆ ಸಿಹಿ ಪದಾರ್ಥಗಳನ್ನು ಸಿದ್ಧಪಡಿಸಿ ಕುಟುಂಬ ವರ್ಗ, ಆಪ್ತರೊಂದಿಗೆ ಸವಿಯುವುದು. ನಂತರ ಸಾಯಂಕಾಲ ಮಕ್ಕಳು, ಹಿರಿಯರು ಸೇರಿ ಬನ್ನಿ ಮರದ ಪೂಜೆ ಮಾಡಿ ಬನ್ನಿ ಹಂಚಿಕೊಳ್ಳುವ ಶುಭ ಕೋರಿದರು. ಇನ್ನೂ ಗ್ರಾಮೀಣ ಭಾಗದಲ್ಲಿ ಇದರ ಸಂಭ್ರಮ ಹೆಚ್ಚಾಗಿ ಕಂಡುಬಂದಿತು.

ಇಲ್ಲಿನ ಜನವಾಡಾ ರಸ್ತೆಯ ಹನುಮಾನ ಮಂದಿರದ ಬಳಿ ಸೋಮವಾರ ಸಂಜೆ ಹೊತ್ತಿಗೆ ಸಾರ್ವಜನಿಕರು ಜಮಾಯಿಸಿ ಸಾಲಿನಲ್ಲಿ ನಿಂತು ದರ್ಶನ ಪಡೆದರು. ನಂತರ ಬನ್ನಿಯನ್ನು ಖರೀದಿ ಮಾಡಿ ಸಂಬಂ ಕರು, ಗೆಳೆಯವರಿಗೆ ನೀಡಿ ಹಬ್ಬದ ಶುಭಾಷಯ ಹೇಳುವುದು ಕಂಡು ಬಂತು. ದೇವಸ್ಥಾನದ ಪ್ರದೇಶದಲ್ಲಿ ಜಾತ್ರೆಯ ವಾತಾವರಣವೇ ಸೃಷ್ಟಿಯಾಗಿತ್ತು. ಲಾಡಗೇರಿಯಭವಾನಿ ಮಾತಾ ಮಂದಿರದಿಂದ ನಗರದಲ್ಲಿ ಮೆರವಣಿಗೆ ನಡೆಸಲಾಯಿತು.

ಕೋವಿಡ್ ಸೋಂಕು ಜತೆಗೆ ಭಾರಿ ಮಳೆಯಿಂದ ರೈತ ಬಾಂಧವರು ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿದ್ದರು. ಆದರೂ ಹಬ್ಬದ ಸಡಗರ ಏನೂಕಡಿಮೆ ಆಗಿರಲಿಲ್ಲ. ಮಕ್ಕಳು, ವಯಸ್ಕರು ಹೊಸ ಬಟ್ಟೆ ತೊಟ್ಟು, ಹೊಲಕ್ಕೆ ತೆರಳಿ ಬನ್ನಿ ತೆಗೆದುಕೊಂಡು, ಮೊದಲು ದೇವರಿಗೆ ಸಮರ್ಪಿಸಿದರು. ಬಳಿಕ ಸಂಬಂಧಿಕರು, ಸ್ನೇಹಿತರಿಗೆ ಬನ್ನಿ ಕೊಟ್ಟು ಹಬ್ಬದ ಸಂಭ್ರಮದ ಹಂಚಿಕೊಂಡರು.

ಹಿರೇಮಠ ಸಂಸ್ಥಾನದಿಂದ ಕಲ್ಯಾಣ ಕ್ರಾಂತಿ ವಿಜಯೋತ್ಸವ :

ಭಾಲ್ಕಿ: ಪಟ್ಟಣದ ಹಿರೇಮಠ ಸಂಸ್ಥಾನದ ವತಿಯಿಂದ ಸೋಮವಾರ ಕಲ್ಯಾಣ ಕ್ರಾಂತಿ ವಿಜಯೋತ್ಸವ ನಿಮಿತ್ತ ಭವ್ಯ ಪಲ್ಲಕ್ಕಿ ಮೆರವಣಿಗೆ ನಡೆಯಿತು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರ ದಿವ್ಯ ನೇತೃತ್ವದಲ್ಲಿ ನಡೆದ ಮೆರವಣಿಗೆಯು ಹಳೆ ಪಟ್ಟಣದ ಹಿರೇಮಠ ಸಂಸ್ಥಾನದಿಂದ ಚಾವಡಿಗಲ್ಲಿ, ತೀನದುಕಾನಗಲ್ಲಿ, ಗಂಜ ಏರಿಯಾದ ಬಸ್‌ ನಿಲ್ದಾಣ, ಡಾ| ಬಾಬಾ ಸಾಹೇಬ ಅಂಬೇಡ್ಕರ್‌ವೃತ್ತದ ಮೂಲಕ ಹಾದು ಚನ್ನಬಸವಾಶ್ರಮದಲ್ಲಿ ಸಮಾವೇಶಗೊಂಡಿತು.

ಮಹಾಲಿಂಗ ಸ್ವಾಮಿಗಳು, ಜಯದೇವ ಸ್ವಾಮಿಗಳು, ಡಿ.ಕೆ. ಸಿದ್ರಾಮ, ಸಿದ್ರಾಮಪ್ಪ ವಂಕೆ, ರಾಚಪ್ಪ ಗೋರ್ಟೆ, ರಾಜಶೇಖರ ಅಸ್ಟೂರೆ, ರಾಜು ಜುಬರೆ, ಮೋಹನ ರೆಡ್ಡಿ, ಸುರೇಶ ಬಿರಾದಾರ, ಪ್ರಕಾಶ ಮಾಶೆಟ್ಟೆ, ಹೊಸಾಳೆ, ಶಿಖರೇಶ್ವರ ಶೆಟಕಾರ ಸೇರಿದಂತೆ ಮುಂತಾದವರು ಇದ್ದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.