ಪ್ರಯಾಣಿಕರ ಸಂಖ್ಯೆ ವಿರಳ: ಬಳ್ಳಾರಿಗೆ ಯಾರೂ ಹೋಗಿಲ್ಲ
Team Udayavani, May 20, 2020, 3:48 PM IST
ಸಾಂದರ್ಭಿಕ ಚಿತ್ರ
ಸಿಂಧನೂರು: ರಾಜ್ಯ ಸರಕಾರ ಲಾಕ್ಡೌನ್ ಸಡಿಲಿಕೆ ಮಾಡಿ ಅಂತರ ಜಿಲ್ಲೆಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದರಿಂದ ನಗರದ ಘಟಕದಿಂದ 20 ಬಸ್ ಸಂಚಾರ ಮಂಗಳವಾರ ಆರಂಭವಾಯಿತು. ನಿರ್ವಾಹಕರು ಹಾಗೂ ಚಾಲಕರು ಪ್ರಯಾಣಿಕರಿಗಾಗಿ ಕಾಯುತ್ತಿರುವುದು ಕಂಡು ಬಂತು.
ಸಿಂಧನೂರಿನಿಂದ ರಾಯಚೂರು, ಕೊಪ್ಪಳ, ಬಳ್ಳಾರಿ, ಕುಷ್ಟಗಿ, ಲಿಂಗಸುಗೂರು, ಗಂಗಾವತಿಗೆ ಬೆಳಗ್ಗೆ 7:00ರಿಂದ ಸಂಜೆ 7:00ರ ವರೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೆ ಬೆಳಗ್ಗೆ 11:00 ಗಂಟೆಯವರೆಗೂ ಬಳ್ಳಾರಿಗೆ ತೆರಳುವ ಯಾವೊಬ್ಬ ಪ್ರಯಾಣಿಕರು ಬರಲಿಲ್ಲ. ಹಾಗಾಗಿ ಬಳ್ಳಾರಿಗೆ ತೆರಳುವ ಬಸ್ನ್ನು ಪುನಃ ಘಟಕಕ್ಕೆ ಕಳುಹಿಸಲಾಯಿತು. ಇನ್ನಿತ್ತರ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಿಗೆ ತೆರಳಿದ ಬಸ್ಗಳಲ್ಲಿಯೂ ನಿಗದಿತ ಪ್ರಯಾಣಿಕರು ಇರಲಿಲ್ಲ. ಹಾಗಾಗಿ ಒಂದೊಂದೆ ಬಸ್ನ್ನು 2ರಿಂದ 3ಗಂಟೆ ತಡವಾಗಿ ಸಂಚಾರಕ್ಕೆ ಬಿಡಲಾಯಿತು.
ಪ್ರಯಾಣಿಕರ ಸಂಖ್ಯೆ ವಿರಳವಾಗಿದ್ದರಿಂದ ಬಸ್ ನಿಲ್ದಾಣದಲ್ಲಿ ಕುರ್ಚಿಗಳು ಖಾಲಿ ಇರುವುದು ಕಂಡು ಬಂತು. ಅಂತರ ಜಿಲ್ಲೆಗಳಿಗೆ ತೆರಳುವ ನಿರ್ವಾಹಕ ಹಾಗೂ ಚಾಲಕರಿಗೆ ಮಾಸ್ಕ್, ಸ್ಯಾನಿಟೈರಿಸ್ ಹಾಗೂ ಕೈಗವಸ ಮತ್ತು ಎಲ್ಲ ಬಸ್ಗಳಿಗೂ ಸ್ಪ್ರೇ ಮಾಡಿಸಿ ಘಟಕದಿಂದ ಹೊರಗಡೆಗೆ ಕಳುಹಿಸಲಾಯಿತು. ಅಂತರ ಜಿಲ್ಲೆಗಳಿಗೆ ತೆರಳಿದ ಎಲ್ಲ ಪ್ರಯಾಣಿಕರನ್ನು ಆರೋಗ್ಯ ಇಲಾಖೆಯಿಂದ ತಪಾಸಣೆ ಮಾಡಿದ ನಂತರ ಬಸ್ನಲ್ಲಿ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ