ಕೋವಿಡ್ ವಿರುದ್ಧ ಸೆಣಸುತ್ತಿದೆ ವೈದ್ಯರು-ಸಿಬ್ಬಂದಿ ತಂಡ
900ಕ್ಕೂ ಅಧಿಕ ಜನರ ಪರೀಕ್ಷೆ ವಾರಿಯರ್ಸ್ ಗೆ ಅಭೂತಪೂರ್ವ ಬೆಂಬಲ
Team Udayavani, May 21, 2020, 11:46 AM IST
ಸಿಂಧನೂರು: ವಿಶ್ವದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೋವಿಡ್ ಹಾವಳಿ ತಡೆಗಟ್ಟಲು ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಸ್ಲ್ಯಾಬ್ ಪರೀಕ್ಷೆ ಕೈಗೊಂಡು ಸುಮಾರು 900ಕ್ಕೂ ಅಧಿಕ ಜನರನ್ನು ಪರೀಕ್ಷೆ ಮಾಡಿ, ಕೋವಿಡ್-19 ತಡೆಗಟ್ಟಲು ಸಿಂಧನೂರಿನ ವೈದ್ಯರು ಹಾಗೂ ಸಿಬ್ಬಂದಿ ತಂಡ ಯಶಸ್ವಿಯಾಗಿ ಶ್ರಮಿಸುತ್ತಿದೆ.
ಜನಮನ್ನಣೆ: ಕೋವಿಡ್-19 ವಿರುದ್ಧ ತಾಲೂಕು ಆಸ್ಪತ್ರೆಯಲ್ಲಿ ವಿವಿಧ ತಂಡಗಳನ್ನಾಗಿ ಮಾಡಿಕೊಂಡು ಹಗಲಿರುಳೆನ್ನದೇ ತಮ್ಮ ಕುಟುಂಬ ವರ್ಗ ತೊರೆದು ಕಾಯಕ ನಿಷ್ಠೆ ನಿಭಾಯಿಸುತ್ತಿರುವುದಕ್ಕೆ ತಾಲೂಕಿನಾದ್ಯಂತ ಜನಮನ್ನಣೆ ಗಳಿಸುತ್ತಿದೆ. ತಾಲೂಕು ಆಸ್ಪತ್ರೆಯಲ್ಲಿ ಒಟ್ಟು ಮುಖ್ಯ ವೈದ್ಯಾಕಾರಿಗಳು ಸೇರಿದಂತೆ 83 ಸಿಬ್ಬಂದಿಗಳಿದ್ದು, ಇದರಲ್ಲಿ 58 ಜನರು ನಿತ್ಯ ಕಾಯಕದಲ್ಲಿ ತೊಡಗುತ್ತಿದ್ದಾರೆ. ಆದರೆ ಇನ್ನೂ 25 ಸಿಬ್ಬಂದಿ ಕೊರತೆಯೂ ಕಂಡು ಬರುತ್ತಿದೆ. ಹಾಗೂ 25ಕ್ಕೂ ಹೆಚ್ಚು ಜನರು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ನಗರ-ಗ್ರಾಮೀಣ ಪ್ರದೇಶದಿಂದ ನಿತ್ಯ ಸುಮಾರು ಜನರು ಚಿಕಿತ್ಸೆಗಾಗಿ ಬಂದು ಹೋಗುತ್ತಿದ್ದಾರೆ. ಆದರೆ ವೈದ್ಯರು ಹಾಗೂ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರಿಗೂ ಕುಡಿಯುವ ನೀರಿನ ಸಮಸ್ಯೆ, ಆಸನಗಳು ಸೇರಿದಂತೆ ಇತರ ಆಸ್ಪತ್ರೆಯ ತಾಂತ್ರಿಕ ಸಮಸ್ಯೆ ನಡುವೆಯೂ ವೈದ್ಯರು ಹಾಗೂ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿರುವುದು ಅವರ ಕಾಯಕನಿಷ್ಠೆಗೆ ಉತ್ತಮ ನಿದರ್ಶನ. ಅದರಂತೆಯೇ ಕೋವಿಡ್-19 ಬಗ್ಗೆ ಶ್ರಮಿಸಿದ ಎಲ್ಲ ಕೋವಿಡ್ ವಾರಿಯರ್ಗಳಿಗೆ ತಾಲೂಕಿನಲ್ಲಿ ಅಭೂತಪೂರ್ವ ಬೆಂಬಲ ಸಿಗುತ್ತಿದೆ.
ಜಿಲ್ಲಾಧಿಕಾರಿ ಆದೇಶ ಹಾಗೂ ಜನಪ್ರತಿನಿಧಿಗಳ ಸಹಕಾರದಿಂದ ನಮ್ಮ ಎಲ್ಲ ವೈದ್ಯರು ಹಾಗೂ ಸಿಬ್ಬಂದಿ ತಾಲೂಕಿನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದುವರೆಗೂ ಸಿಂಧನೂರು ತಾಲೂಕಿನಲ್ಲಿ ಯಾವುದೇ ಕೋವಿಡ್ ಪಾಸಿಟಿವ್ ಪ್ರಕರಣ ಕಂಡು ಬಂದಿಲ್ಲ. ಕೋವಿಡ್ ನಿಯಂತ್ರಿಸಲು ತಾಲೂಕಿನ ಎಲ್ಲ ವೈದ್ಯರು ಹಾಗೂ ಸಿಬ್ಬಂದಿ ಶ್ರಮಿಸಿದ್ದಾರೆ.
ರಾಮಕೃಷ್ಣ,
ಜಿಲ್ಲಾ ಆರೋಗ್ಯಾಧಿಕಾರಿ, ರಾಯಚೂರು
ತಂಡೋಪತಂಡವಾಗಿ ಕೋವಿಡ್-19 ವಿರುದ್ಧ ಎಲ್ಲ ವೈದ್ಯರು-ಸಿಬ್ಬಂದಿ ಸೇರಿ ಮೇಲಾಧಿಕಾರಿಗಳ ಆದೇಶದನ್ವಯ ಕೆಲಸ ಮಾಡುತ್ತಿದ್ದೇವೆ. ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ನಮ್ಮ ಆಸ್ಪತ್ರೆಯಿಂದ ಕೋವಿಡ್ ಸ್ಲ್ಯಾಬ್ ಪರೀಕ್ಷೆ ಕೈಗೊಂಡು ಸುಮಾರು 900ಕ್ಕೂ ಹೆಚ್ಚು ಜನರಿಗೆ ಪರೀಕ್ಷೆ ಮಾಡಿದ್ದೇವೆ.
ನಾಗರಾಜ ಕಾಟ್ವಾ,
ನಗರ ವೈದ್ಯಾಧಿಕಾರಿ, ಸಿಂಧನೂರು
ಚಂದ್ರಶೇಖರ್ ಯರದಿಹಾಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…