ಕೆಲಸದ ಜತೆಗೆ ಆರೋಗ್ಯದತ್ತ ಗಮನವಿರಲಿ: ಹಂಪಯ್ಯ
Team Udayavani, May 2, 2020, 4:35 PM IST
ಸಿರವಾರ: ಕಾರ್ಮಿಕರ ದಿನಾಚರಣೆ ಅಂಗವಾಗಿ ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದರು
ಸಿರವಾರ: ದಿನನಿತ್ಯ ಪಟ್ಟಣದ ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಕಡೆಗೂ ಗಮನಹರಿಸಬೇಕು ಎಂದು ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.
ಕಾರ್ಮಿಕರ ದಿನಾಚರಣೆ ಅಂಗವಾಗಿ ಆಹಾರ ಸಾಮಗ್ರಿ ವಿತರಿಸಿ ಮಾತನಾಡಿದ ಅವರು, ಪೌರಕಾರ್ಮಿಕರು ಸ್ವಚ್ಛತಾ ಕೆಲಸ ಮುಗಿದ ಕೂಡಲೇ ತಮ್ಮ ಆರೋಗ್ಯಕ್ಕೂ ಆದ್ಯತೆ ನೀಡಬೇಕು. ಯಾವುದೇ ಕಾರಣಕ್ಕೂ ಆರೋಗ್ಯ ಸಮಸ್ಯೆ ನಿರ್ಲಕ್ಷಿಸಬಾರದು. ಆರೋಗ್ಯದಲ್ಲಿ ಏನೇ ಸಮಸ್ಯೆಗಳು ಬಂದರೂ ಕೂಡಲೇ ಚಿಕಿತ್ಸೆ ಪಡೆಯಬೇಕು. ಕೊರೊನಾದಿಂದಾಗಿ ಅನೇಕರು ತಮ್ಮ ಕೆಲಸ ನಿಲ್ಲಿಸಿದರೂ ಕಾರ್ಮಿಕರು ನಿರಂತರ ದುಡಿಯುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಪಟ್ಟಣ ಪಂಚಾಯತಿ ಮುಖ್ಯಾಧಿ ಕಾರಿ ಕೆ. ಮುನಿಸ್ವಾಮಿ, ಮುಖಂಡರಾದ ಚುಕ್ಕಿ ಸೂಗಪ್ಪ ಸಾಹುಕಾರ, ಶಿವಾಜಿರಾವ್ ದರ್ಶನಕರ್, ಕಲ್ಲೂರು ಬಸವರಾಜ, ದೇವಣ್ಣ ನವಲಕಲ್ಲು, ದಾನನಗೌಡ, ಶರಣಯ್ಯ ಗುಡದಿನ್ನಿ, ರಮೇಶ ದರ್ಶನಕರ್, ಶಿವಶರಣ ಅರಕೇರಿ, ಎಚ್.ಕೆ. ಅಮರೇಶ, ಎನ್. ಚಂದ್ರಶೇಖರ, ಮೌಲಾಸಾಬ್ ವರ್ಚಸ್, ನಾಗಪ್ಪ ಪತ್ತಾರ, ಪಟ್ಟಣ ಪಂಚಾಯತಿ ಸದಸ್ಯರು, ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು