ಧೂಪತಮಹಾಗಾಂವ್‌ ಗ್ರಾಪಂ ಸೌರಮಯ 4 ಗ್ರಾಮ-2 ತಾಂಡಾಗಳಲ್ಲಿ ಸೌರ ಬೆಳಕು


Team Udayavani, Dec 4, 2019, 4:25 AM IST

rt-45

ಧೂಪತಮಹಾಗಾಂವ್‌ ಗ್ರಾಪಂ ಕಚೇರಿ ಕಟ್ಟಡದ ಮೇಲೆ ಸೌರ್‌ ವಿದ್ಯುತ್‌ಗಾಗಿ ಅಳವಡಿಸಿರುವ ಪ್ಯಾನೆಲ್‌ಗ‌ಳನ್ನು ಅಧ್ಯಯನ ತಂಡ ವೀಕ್ಷಿಸಿತು.

ಬೀದರ್‌: ಲಭ್ಯ ಅನುದಾನ ಸದ್ಬಳಕೆ ಮತ್ತು ಜನಪ್ರತಿನಿಧಿಗಳ ಸಹಭಾಗಿತ್ವದಲ್ಲಿ ಜಿಲ್ಲೆಯ ಧೂಪತಮಹಾಗಾಂವ್‌ ಗ್ರಾಪಂನ ಎಲ್ಲ ಗ್ರಾಮಗಳು ಸೌರ ವಿದ್ಯುತ್‌ ಬೆಳಕಿನಲ್ಲಿ ಬೆಳಗುವಂತಾಗಿವೆ. ರಾಜ್ಯದಲ್ಲಿ ಸೌರಮಯ ಆಗಿರುವ ಮೊದಲ ಗ್ರಾಪಂ ಎಂಬ ಹೆಗ್ಗಳಿಕೆ ಪಡೆದಿದ್ದು,ಈ ಮಾದರಿ ಎಲ್ಲ ಗ್ರಾಪಂಗಳಲ್ಲಿ ಅಳವಡಿಸಲು ಮುಂದಾಗಿದೆ.

ಧೂಪತಮಹಾಗಾಂವ್‌ ಗ್ರಾಪಂ ಕಟ್ಟಡ ಮಾತ್ರವಲ್ಲ ನಾಲ್ಕು ಗ್ರಾಮ ಮತ್ತು ಎರಡು ತಾಂಡಾಗಳು ಕೂಡ ಸೌರ ವಿದ್ಯುತೀಕರಣಗೊಂಡಿವೆ. ಕಚೇರಿ ಕೆಲಸಗಳ ಜತೆಗೆ ಹಳ್ಳಿಗಳ ಬೀದಿ ದೀಪಗಳಿಗೆ ಸೌರ ವಿದ್ಯುತ್‌ ಬಳಕೆ ಆಗುತ್ತಿದೆ. ಗ್ರಾಮ ಮಟ್ಟದಲ್ಲಿ ಪರ್ಯಾಯ ವಿದ್ಯುತ್‌ ಸ್ವಾವಲಂಬನೆ ಸಾಧಿಸುವತ್ತ ಹೆಜ್ಜೆಯನ್ನಿಟ್ಟಿರುವುದು ಹೊಸ ಸಾಧ್ಯತೆಗಳನ್ನು ತೆರೆದಿಟ್ಟಿದೆ. ಜನಪ್ರತಿನಿಧಿಗಳು, ಪಿಡಿಒ ನಡುವೆ ಸಮನ್ವಯತೆ ಇದ್ದಲ್ಲಿ ಗ್ರಾಮಾಭಿವೃದಿಟಛಿ ಸಾಧ್ಯ ಎಂಬುದನ್ನು ಈ ಗ್ರಾಪಂ ಸಾಧಿಸಿ ತೋರಿಸಿದೆ.

ಧೂಪತಮಹಾಗಾಂವ್‌ ಗ್ರಾಪಂ ಕಟ್ಟಡಕ್ಕೆ 1.60 ಲಕ್ಷ ರೂ. ವೆಚ್ಚದಲ್ಲಿ 2 ಕೆವಿ ಸೋಲಾರ್‌ ಅಳವಡಿಸಿದ್ದು, ಕಚೇರಿಯಲ್ಲಿ ಕಂಪ್ಯೂಟರ್‌, ಫ್ಯಾನ್‌, ಟ್ಯೂಬ್‌, ಸಿಸಿ ಕ್ಯಾಮೆರಾ ಸೌರ್‌ ವಿದ್ಯುತ್‌ನಲ್ಲಿ ನಡೆಯುತ್ತಿವೆ. ಇದೇ ಗ್ರಾಪಂ ವ್ಯಾಪ್ತಿಯ ಧೂಪತ ಮಹಾಗಾಂವ್‌, ಬಾಬಳಿ, ಮಣಿಗೆಂಪೂರ, ಜೀರ್ಗಾ(ಬಿ) ಗ್ರಾಮಗಳು, ಚಂದ್ರಾನಾಯ್ಕ ತಾಂಡಾಗಳಲ್ಲಿನ ಬೀದಿ ದೀಪಗಳನ್ನು ಸೌರ ವಿದ್ಯುತ್‌ಗೆ ಪರಿವರ್ತಿಸಲಾಗಿದೆ. 250 ಬೀದಿ ದೀಪಕ್ಕೆ 12.50 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಸಾಮಾನ್ಯ ವಿದ್ಯುತ್‌ನಿಂದ ಬರುತ್ತಿದ್ದ ಲಕ್ಷಗಟ್ಟಲೆ ವಿದ್ಯುತ್‌ ಬಿಲ್‌ ಉಳಿತಾಯ ಆಗಿ ಆರ್ಥಿಕ ಹೊರೆ ತಪ್ಪುತ್ತಿದೆ. ವಿದ್ಯುತ್‌ ವ್ಯತ್ಯಯ ಇಲ್ಲದೇ ದಿನವೀಡಿ ಸೌರ ವಿದ್ಯುತ್‌ ಬೆಳಗುತ್ತಿದ್ದು, ಶೂನ್ಯ ನಿರ್ವಹಣೆಯೂ ಇಲ್ಲಿದೆ.

ಸೌರ ವಿದ್ಯುತ್‌ ವ್ಯವಸ್ಥೆಗಾಗಿ ಪಂಚಾಯತ್‌ ಯಾವುದೇ ದೇಣಿಗೆಯನ್ನು ಪಡೆಯಲಿಲ್ಲ. ಬದಲಾಗಿ ಸರ್ಕಾರದ ಲಭ್ಯ ಸಂಪನ್ಮೂಲ ಸರಿಯಾಗಿ ಬಳಸಿಕೊಂಡಿದೆ. ಕಚೇರಿಗೆ ಸಮುದಾಯ ಸ್ವತ್ತು ನಿರ್ವಹಣೆ ಅಡಿ ಹಾಗೂ ಬೀದಿ ದೀಪಕ್ಕೆ 14ನೇ ಹಣಕಾಸು ಯೋಜನೆ, ತೆರಿಗೆ ಅನುದಾನದಲ್ಲಿ 12 ಲಕ್ಷ ರೂ. ಹಣ ಮತ್ತು ಜನಪ್ರತಿನಿ ಧಿಗಳ 50 ಸಾವಿರ ರೂ. ನೆರವು ಪಡೆಯಲಾಗಿದೆ. ಚೆನ್ನೈನ ಸನ್‌ ಸೋಲಾರ್‌, ಸನ್‌ ಎಲೆಕ್ಟ್ರಿಕಲ್‌ ಸಂಸ್ಥೆಗಳ ಮೂಲಕ ಗುಣಮಟ್ಟದ ಸೌರ ವಿದ್ಯುತ್‌ ಉಪಕರಣ ಅಳವಡಿಸಲಾಗಿದೆ.

ಗ್ರಾಪಂನ ಸೌರ ವಿದ್ಯುತ್‌ ಮಾದರಿ ಕಾರ್ಯಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್‌ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೇ ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಅಧಿ ಕಾರಿಗಳ ಸಭೆಯಲ್ಲಿ ಇದೇ ಮಾದರಿಯಲ್ಲಿ ರಾಜ್ಯದ ಎಲ್ಲ 6,022 ಗ್ರಾಪಂಗಳಲ್ಲಿ ಸೌರ ವಿದ್ಯುತೀಕರಣ ಗೊಳಿಸುವ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಲಾಗಿದೆ.

ಸಮಿತಿ ಈಗಾಗಲೇ ಮಾದರಿ ಗ್ರಾಪಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸಂಪನ್ಮೂಲದ ಸಂಗ್ರಹ, ಯೋಜನೆಯಿಂದ ಸಾರ್ವಜನಿಕರು ಮತ್ತು ಸರ್ಕಾರಕ್ಕೆ ಹೇಗೆ ಲಾಭ ಎಂಬುದರ ಕುರಿತು ಅಧ್ಯಯನ ನಡೆಸಿದ್ದು, ಶೀಘ್ರದಲ್ಲೇ ಗ್ರಾಮೀಣಾಭಿವೃದಿಟಛಿ ಇಲಾಖೆಗೆ ವರದಿ ಸಲ್ಲಿಸಲಿದೆ. ವರದಿ ಜಾರಿಗೆ ತಂದರೆ ನಾಡಿನ ಎಲ್ಲ ಹಳ್ಳಿಗಳು ಸೂರ್ಯನ ಬೆಳಕಿನಲ್ಲಿ ಝಗಮಗಿಸಲಿವೆ. ಔರಾದ ತಾಲೂಕಿನ ಚಿಂತಾಕಿ ಮತ್ತು ಗುಡಪಳ್ಳಿ ಗ್ರಾಪಂ ಕಚೇರಿಯಲ್ಲಿಯೂ ಪಿಡಿಒ ಆಗಿದ್ದ ಶಿವಾನಂದ, ಸೌರ ವಿದ್ಯುತೀಕರಣ ವ್ಯವಸ್ಥೆ ಪ್ರಯೋಗ ಯಶಸ್ವಿಯಾಗಿ ಮಾಡಿದ್ದರು. ನಂತರ ಧೂಪತಮಹಾಗಾಂವ್‌ನಲ್ಲಿ ಕಚೇರಿ,
ಬೀದಿ ದೀಪಕ್ಕೆ ಅಳವಡಿಸಿ ರಾಜ್ಯಕ್ಕೆ ಮಾದರಿ ಕಾರ್ಯ ಮಾಡಿದ್ದಾರೆ.

ಸಹಭಾಗಿತ್ವದಿಂದ ಯಶಸ್ಸು
ಚುನಾಯಿತ ಪ್ರತಿನಿಧಿಗಳ ಸಹಭಾಗಿತ್ವದಿಂದ ಧೂಪತ ಮಹಾಗಾಂವ್‌ ಗ್ರಾಪಂನಲ್ಲಿ ಸೌರ ವಿದ್ಯುತ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ಲಕ್ಷಾಂತರ ರೂ. ವಿದ್ಯುತ್‌ ಬಿಲ್‌ ಉಳಿತಾಯ ಆಗುತ್ತಿದೇ ಮಾತ್ರಲ್ಲ, ಸಾಂಪ್ರದಾಯಿಕ ವಿದ್ಯುತ್‌ ಉಳಿತಾಯ, ಜಾಗತಿಕ ತಾಪಮಾನ ತಡೆಯತ್ತ ಹೆಜ್ಜೆ ಆಗಲಿದೆ. ಇದೇ ಮಾದರಿಯನ್ನು ರಾಜ್ಯಾದ್ಯಂತ ವಿಸ್ತರಿಸಲು ಗ್ರಾಮೀಣಾಭಿವೃದಿಟಛಿ ಇಲಾಖೆ ಈಗಾಗಲೇ ಸಮಿತಿ ರಚಿಸಿದ್ದು, ಅದು ಶೀಘ್ರದಲ್ಲಿ ತನ್ನ ವರದಿ ಸಲ್ಲಿಸಲಿದೆ.

● ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.