ಆರೋಗ್ಯ ಸಮಸ್ಯೆಯಿಂದಾಗಿ ಬೀದರ್ ನ ಯೋಧ ಕಾಶ್ಮೀರದಲ್ಲಿ ಸಾವು
Team Udayavani, Sep 25, 2022, 10:12 PM IST
ಬೀದರ್ : ಆರೋಗ್ಯ ಸಮಸ್ಯೆ ಹಾಗೂ ಆಮ್ಲಜನಕ ಕೊರತೆ ಉಂಟಾಗಿ ಕಮಲನಗರ ತಾಲೂಕಿನ ಯೋಧರೊಬ್ಬರು ಸಾವನಪ್ಪಿರುವ ಘಟನೆ ಭಾನುವಾರ ಜಮ್ಮು ಮತ್ತು ಕಾಶ್ಮೀರದ ಗುರಜ್ ನಲ್ಲಿ ನಡೆದಿದೆ.
ರಾಮದಾಸ್ ಧನರಾಜ ಚಂದಾಪುರೆ (35) ಮೃತ ಯೋಧ. 2006ರಲ್ಲಿ ಸೇನೆಗೆ ಸೇರಿದ್ದ ರಾಮದಾಸ್ ವಿವಿಧೆಡೆ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಹೈದರಾಬಾದ್ ನಿಂದ ಜಮ್ಮು ಕಾಶ್ಮೀರದಿಂದ 125 ಕಿ.ಮೀ. ಅಂತರದಲ್ಲಿರುವ ಗುರೇಜ್ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೃತ ಯೋಧ ತಂದೆ, ತಾಯಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಮೃತ ದೇಹ ವಿಶೇಷ ವಿಮಾನದ ಮೂಲಕ ಶ್ರೀನಗರದಿಂದ ಹೈದರಾಬಾದ್ ಗೆ ತಂದು, ಅಲ್ಲಿಂದ ರಸ್ತೆ ಮಾರ್ಗವಾಗಿ ಸ್ವಗ್ರಾಮಕ್ಕೆ ಸೋಮವಾರ ಸಂಜೆ ಬರುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ