ಗುರು-ಶಿಷ್ಯರ ವಾಸಸ್ಥಾನವೇ ಮಠ: ಉಜ್ಜಯಿನಿ ಶ್ರೀ


Team Udayavani, Jan 19, 2020, 4:31 PM IST

19-January-22

ಸೊಲ್ಲಾಪುರ: ಮಠವೆಂದರೆ ಕೇವಲ ಗುರುಗಳ ವಾಸಸ್ಥಾನವಲ್ಲ. ಜೊತೆಗೆ ಅಲ್ಲಿ ಶಿಷ್ಯನೂ ವಾಸವಾಗಿದ್ದು ಅವನು ನಿರಂತರ ಅಧ್ಯಯನಶೀಲನಾಗಿರುವ ಸ್ಥಾನವೇ ಮಠ ಎನ್ನುವ ಗೌರವಕ್ಕೆ ಪಾತ್ರವಾಗುತ್ತದೆ ಎಂದು ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.

ಉತ್ತರಪ್ರದೇಶದ ಕಾಶಿ ಪೀಠದ ಆಶ್ರಯದಲ್ಲಿರುವ ಜಗದ್ಗುರು ವಿಶ್ವಾರಾಧ್ಯ ಗುರುಕುಲದ ಶತಮಾನೋತ್ಸವದ ಅಂಗವಾಗಿ ವಾರಣಾಸಿಯಲ್ಲಿ ಹಮ್ಮಿಕೊಂಡಿರುವ 38 ದಿನಗಳ “ವೀರಶೈವ ಮಹಾಕುಂಭ’ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಅಮರಸಿಂಹನು ತನ್ನ ಅಮರ ಕೋಶದಲ್ಲಿ ಮಠ ಎನ್ನುವ ಶಬ್ದದ ಅರ್ಥವನ್ನು ಬರೆಯುವಾಗ ವಿದ್ಯಾರ್ಥಿಗಳ ವಾಸಸ್ಥಾನ ಎಂಬುದಾಗಿ ಹೇಳಿದ್ದಾನೆ. ಆದ್ದರಿಂದ ಕೇವಲ ಗುರುವಿನ ನಿವಾಸ ಸ್ಥಾನವು ಮಠವೆಂದು ಕರೆಸಿಕೊಳ್ಳುವುದಿಲ್ಲ. ಜೊತೆಗೆ ಅಲ್ಲಿ ಶಿಷ್ಯರು ವಾಸವಾಗಿದ್ದು ಗುರುವಿನಿಂದ ಅವರಿಗೆ ಪಾಠ ಪ್ರವಚನಗಳು ನಡೆಯುತ್ತಿದ್ದರೆ ಅದು ಮಠ ಎಂದು ಕರೆಯಿಸಿಕೊಳ್ಳುತ್ತದೆ ಎಂದರು.

ಕಾಶಿ ಕ್ಷೇತ್ರದ ಶ್ರೀ ಜಗದ್ಗುರು ವಿಶ್ವಾರಾಧ್ಯ ಜ್ಞಾನ ಪೀಠವು ಈ ವ್ಯಾಖ್ಯಾನಕ್ಕೆ ಅನುರೂಪವಾಗಿದೆ. ಈ ಜ್ಞಾನ ಪೀಠದಲ್ಲಿ ಕಳೆದ ಸಾವಿರಾರು ವರ್ಷಗಳಿಂದ ಸಂಸ್ಕೃತ ಭಾಷೆಯ ಮಾಧ್ಯಮದಿಂದ ಅನೇಕ ಶಾಸ್ತ್ರಗಳ ಅಧ್ಯಯನವು ನಡೆಯುತ್ತ ಬಂದಿದ್ದು, ಇಲ್ಲಿಯ ವಿದ್ಯಾರ್ಥಿಗಳು ಇಲ್ಲಿನ ಮಹಾ ವಿದ್ಯಾಲಯಗಳಲ್ಲಿ ಹಾಗೂ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ಪಡೆದು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಹಿತ್ಯಕ, ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುತ್ತಾ ನಾಡಿನ ಸರ್ವ ವರ್ಗದ ಜನರಿಗೆ ಜ್ಞಾನ ಪ್ರಕಾಶವನ್ನು ಸಂವ ರ್ದಿಸಿದ್ದಾರೆ. ಜೊತೆಗೆ ದಕ್ಷಿಣ ಭಾರತದ ಎಲ್ಲ ವೀರಶೈವ ಗುರುಕುಲಗಳಿಗೆ ಗುರುವನ್ನು ಒದಗಿಸಿರುವ ಒಂದು ಸರ್ವೋತ್ಕಷ್ಟವಾದ ಗುರುಕುಲ ಇದಾಗಿದೆ ಎಂದು ಹೇಳಿದರು.

ಕಾಶಿ ಜ್ಞಾನ ಪೀಠದ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ
ಭಗವತ್ಪಾದರು ಆಶೀರ್ವಚನ ನೀಡಿದರು. ಇಂದಿನ ಧರ್ಮಸಭೆಯಲ್ಲಿ ಕಾಶಿ ಪೀಠದ ಗುರುಕುಲದ ವಿದ್ಯಾರ್ಥಿಯಾಗಿದ್ದ ಮತ್ತು ಪ್ರಸ್ತುತ ಶ್ರೀಶೈಲ ಕ್ಷೇತ್ರದಲ್ಲಿ ವೀರಶೈವ ಗುರುಕುಲವನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ವೇದಾಧ್ಯಯನ ಮಾಡಿಸಿದ್ದ ಲಿಂಗೈಕ್ಯ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳ ಹಾಗೂ ತೆಲಂಗಾಣ ಪ್ರಾಂತದ ವಿಕಾರಾಬಾದದಲ್ಲಿ ವೇದ ಪಾಠಶಾಲೆ ಪ್ರಾರಂಭಿಸಿ ಅನೇಕ ವಿದ್ಯಾರ್ಥಿಗಳಿಗೆ ವಿದ್ಯಾದಾನವನ್ನು ಮಾಡಿದ ಶ್ರೀ ಶಂಕರ ಸ್ವಾಮಿಗಳವರ ಸ್ಮರಣೋತ್ಸವ ಆಚರಿಸಲಾಯಿತು.

ಕರ್ನಾಟಕದ ವಿವಿಧ ಜಿಲ್ಲೆಗಳ ಮಠಾಧೀಶರು ಮತ್ತು ಶ್ರೀಶೈಲ ಗುರುಕುಲದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಗುರುಕುಲಕ್ಕೆ ಧನಸಹಾಯ: ಶ್ರೀಶೈಲ ಕ್ಷೇತ್ರದಲ್ಲಿಯ ವೀರಶೈವ ಗುರುಕುಲದ ವಿಕಾಸಕ್ಕಾಗಿ ಕಾಶಿ ಪೀಠದಿಂದ 2 ಲಕ್ಷ 25 ಸಾವಿರ ರೂ. ಧನಸಹಾಯವನ್ನು, ಲಿಂಗೈಕ್ಯ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳಿಗೆ ಮರಣೋತ್ತರವಾಗಿ “ಗುರುಕುಲ ಜ್ಞಾನ ಭಾಸ್ಕರ’ ಎನ್ನುವ ಪ್ರಶಸ್ತಿಯನ್ನು ಹಾಗೂ ಶ್ರೀಶೈಲ ವೀರಶೈವ ಗುರುಕುಲದ ಪ್ರಾಧ್ಯಾಪಕ ವೇ. ಮಲ್ಲಿಕಾರ್ಜುನ ಶಾಸ್ತ್ರೀಗಳಿಗೆ “ಗುರುಕುಲ ಜ್ಞಾನ ಜ್ಯೋತಿ’ ಪ್ರಶಸ್ತಿಯನ್ನು ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಅನುಗ್ರಹಿಸಿದರು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.