ಸೋಯಾ ಹೊಡೆತಕ್ಕೆ ಮುಗ್ಗರಿಸಿದ ಜೋಳ

ಇನ್ನೊಂದೆಡೆ ಜೋಳದ ಪ್ರದೇಶ ಕಡಿಮೆಯಾಗಿ ರೊಟ್ಟಿ ತುಟ್ಟಿಯಾಗುತ್ತಿದೆ.

Team Udayavani, Jul 7, 2021, 7:06 PM IST

ಸೋಯಾ ಹೊಡೆತಕ್ಕೆ ಮುಗ್ಗರಿಸಿದ ಜೋಳ

ಬೀದರ: ಪ್ರಕೃತಿ ವಿಕೋಪ, ಮಾರುಕಟ್ಟೆಯಲ್ಲಿ ದರ ಕುಸಿತದಿಂದ ಜಿಲ್ಲೆಯ ಪ್ರಧಾನ ಆಹಾರ ಬೆಳೆ ಜೋಳಕ್ಕೆ ಭಾರಿ ಹೊಡೆತ ಬಿದ್ದಿದ್ದು, ಬಿತ್ತನೆ ಕ್ಷೇತ್ರ ಕ್ಷೀಣಿಸಿದೆ. ಕಳೆದ ಒಂದುವರೆ ದಶಕದಲ್ಲಿ ಶೇ. 80ರಷ್ಟು ಜೋಳದ ಕ್ಷೇತ್ರ ಇಳಿಕೆಯಾಗಿದ್ದು, ಈಗ ಜಾಗವನ್ನು ಸೊಯಾಬಿನ್‌ ಆವರಿಸಿಕೊಂಡಿದೆ. ತೊಗರಿ ಕಣಜ, ಉದ್ದು- ಹೆಸರು, ಜೋಳ ಉತ್ಪಾದನೆ ಪ್ರದೇಶ ಎಂಬೆಲ್ಲ ಖ್ಯಾತಿ ಪಡೆದಿದ್ದ ಗಡಿ ನಾಡು ಬೀದರ ಈಗ ಸೋಯಾಮಯವಾಗಿದೆ.

ಜೋಳ ಬಿತ್ತನೆ ಆಗುತ್ತಿದ್ದ ಪ್ರದೇಶದಲ್ಲಿ ಸೋಯಾಬಿನ್‌ ಆಕ್ರಮಿಸಿಕೊಂಡಿದೆ. ಒಂದೂವರೆ ದಶಕದ ಹಿಂದೆ ಲಕ್ಷಕ್ಕೂ ಅಧಿಕ ಹೆಕ್ಟೇರ್‌ ಪ್ರದೇಶದಲ್ಲಿ ಜೋಳ ಬಿತ್ತನೆ ಮಾಡಲಾಗುತ್ತಿತ್ತು. ಆದರೆ, ಈಗ ಶೇ. 20ರಷ್ಟು ಮಾತ್ರ ಬಿತ್ತನೆ ಆಗುತ್ತಿದೆ. ಒಂದೆಡೆ ಊಟಕ್ಕೆ ಜೋಳದ ರೊಟ್ಟಿ ಬಳಸುವವರ ಸಂಖ್ಯೆ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ಜೋಳದ ಪ್ರದೇಶ ಕಡಿಮೆಯಾಗಿ ರೊಟ್ಟಿ ತುಟ್ಟಿಯಾಗುತ್ತಿದೆ.

ಉತ್ತರ ಕರ್ನಾಟಕದ ಆಹಾರ ಬೆಳೆಗಳಲ್ಲಿ ಜೋಳ ಪ್ರಧಾನವಾಗಿದ್ದು, ಜೋಳದ ರೊಟ್ಟಿ ತಿನ್ನದೆ ಊಟ ಇಲ್ಲ ಎನ್ನುವಷ್ಟರ ಮಟ್ಟಿಗೆ ಈ ಬೆಳೆ ಇಲ್ಲಿನ ಜನರನ್ನು ಆವರಿಸಿದೆ. ಆದರೆ, ಈಗ ಅನ್ನದಾತರು ಪ್ರಮುಖ ಆಹಾರ ಬೆಳೆ ಬಿತ್ತನೆಯತ್ತ ನಿರಾಸಕ್ತಿ ತೋರುತ್ತಿದ್ದಾರೆ. ಸೋಯಾಬೀನ್‌ ಕಡಿಮೆ ಬಂಡವಾಳ-ಅಧಿಕ ಲಾಭವನ್ನು ತಂದುಕೊಡಬಲ್ಲ ಬೆಳೆ ಎಂಬುದು ರೈತರ ನಂಬಿಕೆ. ಇದರಿಂದ ಪಾರಂಪರಿಕ ಬೆಳೆಗಳ ಮೇಲೆ ಭಾರಿ ಹೊಡೆತ ಬಿದ್ದಿದ್ದು, ಭವಿಷ್ಯದಲ್ಲಿ ಜೋಳ ಉತ್ಪಾದನೆಯ ಗಂಭೀರ ಪರಿಸ್ಥಿತಿ ಎದುರಾದರು ಅಚ್ಚರಿ ಇಲ್ಲ.

ಮಳೆಯಾಶ್ರಿತ ಬೀದರ ಜಿಲ್ಲೆಯಲ್ಲಿ 10-15 ವರ್ಷಗಳ ಹಿಂದೆ ಜೊಳ ಬೆಳೆಯನ್ನು ಹೆಚ್ಚು ಪ್ರಮಾಣದಲ್ಲಿ ಬೆಳೆದರೆ, ಅಂತರ ಬೆಳೆಯಾಗಿ ಸೋಯಾಬೀನ್‌ ಬಿತ್ತನೆಯಾಗುತ್ತಿತ್ತು. ಆದರೆ, ಜಿಲ್ಲೆ ಪ್ರತಿ ವರ್ಷ ಅತಿವೃಷ್ಟಿ ಅಥವಾ ಅನಾವೃಷ್ಟಿಗೆ ಜೋಳ ತುತ್ತಾಗಿ ಕೃಷಿಕರನ್ನು ಆರ್ಥಿಕ ನಷ್ಟ ತಂದೊಡ್ಡುತ್ತಿತ್ತು. ಈ ನಡುವೆ ಸೋಯಾ ಬೆಳೆಗೆ ಪ್ರಕೃತಿ ವಿಕೋಪವಾದರೂ ಅಷ್ಟಾಗಿ ತೊಂದರೆಯಾಗುವುದಿಲ್ಲ ಎಂದು ಅರಿತಿರುವ ರೈತರು ಸೋಯಾನತ್ತ ಹೆಚ್ಚು ಒಲವು ತೋರುತ್ತಿದ್ದಾರೆ.

ಜಿಲ್ಲೆಯಲ್ಲಿ ಗುಂಡು ಜೋಳ ಮತ್ತು ಎಂ. 35-1 ತಳಿಯನ್ನು ಬಿತ್ತನೆ ಮಾಡಲಾಗುತ್ತದೆ. ಮುಖ್ಯವಾಗಿ ಬೆಳೆಗೆ ದರ, ಕಟಾವಿಗೆ ಕೂಲಿಕಾರರ ಸಮಸ್ಯೆ ಜೋಳ ಬಿತ್ತನೆಯತ್ತ ರೈತರ ಆಸಕ್ತಿ ಕಡಿಮೆಯಾಗಿಸಿದೆ. ಉತ್ಪಾದನೆ ಕಡಿಮೆಯಾದ ಪರಿಣಾಮ ರೊಟ್ಟಿ ಪ್ರಿಯರ ಆಹಾರ ಪದ್ಧತಿಯೂ ಬದಲಾಗುತ್ತಿದ್ದು, ಗೋಧಿ ಮತ್ತು ಅಕ್ಕಿ ಬಳಕೆಯಾಗುತ್ತಿದೆ. ರೈತರು ಹಣ ಗಳಿಸುವ ಬೆಳೆಯನ್ನಾಗಿ ಸ್ವೀಕರಿಸಿರುವುದರಿಂದ ಸೋಯಾ ಪ್ರದೇಶ ಪ್ರತಿ ವರ್ಷ ಹಿಗ್ಗುತ್ತಲೇ ಇದೆ. ಭವಿಷ್ಯದಲ್ಲಿ ಜೋಳಕ್ಕೆ ಗಂಭೀರ ಸ್ಥಿತಿ ಎದುರಾಗುವ ಮುನ್ನ ಎಚ್ಚೆತ್ತುಕೊಳ್ಳಬೇಕಾಗಿದೆ.

ಜಿಲ್ಲೆಯಲ್ಲಿ 2005-06ರಲ್ಲಿ ಸುಮಾರು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದ್ದ ಜೋಳ ಕಳೆದ 15 ವರ್ಷಗಳಲ್ಲಿ ಭಾರಿ ಕುಸಿತ ಕಂಡಿದೆ. 2011-12ರಲ್ಲಿ 57 ಸಾವಿರ ಹೆ., 2012-13ರಲ್ಲಿ 55 ಸಾವಿರ ಹೆ., 2013-14ರಲ್ಲಿ 35 ಸಾವಿರ ಹೆ., 2014-15ರಲ್ಲಿ 27 ಸಾವಿರ ಹೆ., 2015-16ರಲ್ಲಿ 22 ಸಾವಿರ ಹೆ., 2016-17ರಲ್ಲಿ 26 ಸಾವಿರ ಹೆ., 2017-18ರಲ್ಲಿ 23 ಸಾವಿರ ಹೆ., 2018-19ರಲ್ಲಿ 21 ಸಾವಿರ ಹೆ., 2019-20ರಲ್ಲಿ 18 ಸಾವಿರ ಹೆ. ಪ್ರದೇಶಕ್ಕೆ ಇಳಿಕೆಯಾಗಿದೆ. ಇನ್ನೂ ಈ ವರ್ಷ 2020-21ರಲ್ಲಿ 13 ಸಾವಿರ ಹೆ. ಗುರಿ ಇದ್ದು, ಈವರೆಗೆ ಕೇವಲ 4745 ಹೆ. ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೊಂದೆಡೆ 2005-06ರಲ್ಲಿ ಕೇವಲ 32 ಸಾವಿರ ಹೆ. ಪ್ರದೇಶದಲ್ಲಿ ಬಿತ್ತನೆಯಾಗಿದ್ದ ಸೋಯಾ ಈಗ 15 ವರ್ಷದಲ್ಲಿ ಸುಮಾರು 1.82 ಲಕ್ಷ ಹೆ. ಪ್ರದೇಶವನ್ನು ಆವರಿಸಿಕೊಂಡಿದೆ. ಅಂದಾಜು 20 ವರ್ಷಗಳ ಹಿಂದೆ ಜಿಲ್ಲೆಗೆ ಪರಿಚಯವಾದ ಸೋಯಾ ಸಧ್ಯ ರಾಜ್ಯದಲ್ಲೇ ಹೆಚ್ಚು ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಆದರೆ, ಈ ಬೆಳೆಯ ಬೆಳವಣಿಗೆ ಜೋಳ ಮುಗ್ಗರಿಸುವಂತೆ ಮಾಡಿದೆ.

ಜೋಳ ಬಿತ್ತನೆಗೆ ಸರಕಾರ ಪ್ರೋತ್ಸಾಹಿಸಲಿ
ಮಾರುಕಟ್ಟೆಯಲ್ಲಿ ದರ ಕಡಿಮೆ ಜತೆಗೆ ಪ್ರಾಕೃತಿಕ ಹೊಡೆತ ಮತ್ತು ಕೂಲಿಕಾರರ ಸಮಸ್ಯೆ ಜೋಳ ಬಿತ್ತನೆ ಕಡಿಮೆಯಾಗಲು ಪ್ರಮುಖ ಕಾರಣ. ಆದರೆ, ಸೋಯಾಬಿನ್‌ ಭರವಸೆಯ ಮತ್ತು ಲಾಭದಾಯಕ ಬೆಳೆ ಎನಿಸಿಕೊಂಡಿರುವುದರಿಂದ ರೈತರನ್ನು ಹೆಚ್ಚು ಆಕರ್ಷಿಸಿದೆ. ಜೋಳ ಬಿತ್ತನೆ ಕುಸಿತ ಭವಿಷ್ಯದಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದ್ದು, ಜೋಳ ಬಿತ್ತನೆಗಾಗಿ ಸರ್ಕಾರದ ಪ್ರೋತ್ಸಾಹ ಸಿಗಬೇಕಿದೆ.
ಡಾ| ಎನ್‌.ಎಂ., ಸುನೀಲಕುಮಾರ, ಸಂಯೋಜಕರು ಕೆವಿಕೆ ಬೀದರ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.