ಶ್ರದ್ದಾ-ಭಕ್ತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ


Team Udayavani, Aug 15, 2017, 12:29 PM IST

JANMASHTAMI.jpg

ಬೀದರ: ನಗರದ ವಿವಿಧೆಡೆ ಸೋಮವಾರ ಶ್ರೀ ಕೃಷ್ಣ ಜನ್ಮಾಷ್ಮಮಿಯನ್ನು ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು. ವಿವಿಧ ಶಾಲೆಗಳಲ್ಲಿ
ವೇಷಧಾರಿ ಮಕ್ಕಳು ಗಮನ ಸೆಳೆದರು, ಕೃಷ್ಣನ ಬಾಲ ಲೀಲೆಗಳ ಪ್ರದರ್ಶಿಸಿ ರಂಜಿಸಿದರು. ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ,
ಕೋಲಾಟ ಕಣ್ಮನ ಸೆಳೆಯಿತು. ಸರಸ್ವತಿ ಶಿಕ್ಷಣ ವಿಕಾಸ ಸಮಿತಿ: ನಗರದಲ್ಲಿ ಸರಸ್ವತಿ ಶಿಕ್ಷಣ ವಿಕಾಸ ಸಮಿತಿ ವತಿಯಿಂದ ಗಿರಿಜಾ ಸಭಾ ಮಂಟಪದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಿಸಲಾಯಿತು. ಮುದ್ದಣ ಡಿ.ಇಡಿ ಕಾಲೇಜಿನ ಪ್ರಾಚಾರ್ಯ ವಿದ್ಯಾವತಿ ಬಲ್ಲೂರ ಮಾತನಾಡಿ, ಕಂಸನಿಗೆ ತನ್ನ ಸಾವು ತಂಗಿಯ ಮಗುವಿನಿಂದಲೆ ಎಂದು ಖಚಿತವಾದಾಗ ಕಂಸನು ತನ್ನ ತಂಗಿ ಮತ್ತು
ವಾಸುದೇವನನ್ನು ಕಾರಾಗೃಹದಲ್ಲಿ ಹಾಕಿರುತ್ತಾನೆ. ಅವರಿಗೆ ಹುಟ್ಟಿದ 7 ಮಕ್ಕಳನ್ನು ಕಂಸನು ಕೊಂದು ಬೀಡುತ್ತಾನೆ. ಎಂಟನೇ ಮಗುವಾಗಿ ಹುಟ್ಟಿದ ಶ್ರೀಕೃಷ್ಣನನ್ನು ವಾಸುದೇವನು ಯಮುನಾ ನದಿಯನ್ನು ದಾಟಿ ಗೋಕುಲದಲ್ಲಿ ಬಿಟ್ಟು ಬರುತ್ತಾನೆ. ಶ್ರೀಕೃಷ್ಣ ಬಾಲ್ಯದಲ್ಲಿ ಅನೇಕ ಲೀಲೆಗಳನ್ನು ಹಾಗೂ ದೊಡ್ಡವನಾದ ಮೇಲೆ ಕಂಸನ ಸಂಹಾರ ಮಾಡುತ್ತಾನೆ ಎಂದು ಹೇಳಿದರು. ಸಂಸ್ಥೆಯ ಅಧ್ಯಕ್ಷ ಪ್ರೊ| ಎಸ್‌.ಬಿ. ಬಿರಾದಾರ ಮಾತನಾಡಿ, ಮಹಾಭಾರತದ ಯುದ್ಧದಲ್ಲಿ ಅರ್ಜುನ ತನ್ನ ಸಹೋದರರ ವಿರುದ್ಧ ನಾನು
ಹೇಗೆ ಯುದ್ಧ ಮಾಡಲಿ ಎಂದು ಕೇಳಿದಾಗ ಶ್ರೀ ಕೃಷ್ಣನು ಅರ್ಜುನನಿಗೆ ನೀನು ನಿನ್ನ ಕರ್ತವ್ಯವನ್ನು ಮಾಡು ಎಂದು ತಿಳಿಸಿ ಹೇಳುತ್ತಾರೆ. ಧರ್ಮ ನಾಶವಾಗಿ ಅಧರ್ಮ ಹೆಚ್ಚಾದಾಗ ನಾನು ಪದೇ ಪದೇ ಈ ಭೂಮಿಯಲ್ಲಿ ಜನ್ಮ ತಾಳುತ್ತೇನೆ. ಧರ್ಮದ ರಕ್ಷಣೆಗಾಗಿ ನಾನ್ನು ಹುಟ್ಟಿ ಬರುತ್ತೇನೆ ಎಂದು ಹೇಳಿದರು. ಆಶಾ ಸ್ವಾಗತಿಸಿದರು. ಗೋದಾವರಿ ನಿರೂಪಿಸಿ ಜ್ಯೋತಿ ವಂದಿಸಿದರು. ಕನ್ಯಿಕಾ ಪರಮೇಶ್ವರಿ ಶಾಲೆ: ನಗರದ ಕನ್ನಿಕಾ ಪರಮೇಶ್ವರಿ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಬಾಬು ವಾಲಿ ಗೋ ಮಾತೆಗೆ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು. ಕೃಷ್ಣನ ಬಾಲ್ಯ ಲೀಲೆಗಳಿಂದ ಮಕ್ಕಳು ಬಹಳ ಪ್ರಭಾವಕೊಳಗಾಗುತ್ತಾರೆ. ಮಹಾ ಪುರುಷರ ಜಯಂತಿಗಳನ್ನು ಮಕ್ಕಳ ಜೀವನದ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಆಚರಿಸಬೇಕು ಎಂದು ಹೇಳಿದರು. ಮುಖ್ಯಗುರು ವಿಜಯಕುಮಾರ ಪಾಟೀಲ ಯರನಳ್ಳಿ, ಸುಲೋಚನಾ ಪಾಟೀಲ, ಮುಖ್ಯನಿರ್ವಾಹಕ ಗುರು ಪಾಟೀಲ ಇದ್ದರು.
ಕೋಲಿ ಸಮಾಜ: ನಗರದ ಜಿಲ್ಲಾ ಟೋಕರೆ, ಕೋಲಿ, ಕಬ್ಬಲಿಗ ಸಮಾಜದ ಕಚೇರಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು. ಸಮಾಜದ ಜಿಲ್ಲಾಧ್ಯಕ್ಷ ಜಗನ್ನಾಥ ಜಮಾದಾರ ಮಾತನಾಡಿ, ಶ್ರೀಕೃಷ್ಣ ಪರಮಾತ್ಮ ದುಷ್ಟ ಕಂಸನ ಸಂಹಾರ ಮಾಡಿ ಧರ್ಮ ಉಳಿಸಿರುವನು. ಮಹಾಭಾರತದಲ್ಲಿ ಅರ್ಜುನನಿಗೆ ಭಗವತ್‌ ಗೀತಾ ಬೋಧನೆ ಮಾಡಿದ್ದನು. ಗೀತೋಪದೇಶದಂತೆ ನಡೆದರೆ ಜನ್ಮ ಪಾವನವಾಗುತ್ತದೆ ಎಂದು ಹೇಳಿದರು. ತಾಲೂಕು ಅಧ್ಯಕ್ಷ ಶಿವರಾಜ ಜಮಾದಾರ ಮಾತನಾಡಿದರು. ಪತ್ರಕರ್ತ ನಾಗಶೆಟ್ಟಿ
ಧರಂಪುರ, ಬಸವರಾಜ ಖಾಶೆಂಪುರ, ಶರಣಪ್ಪ ಖಾಶೆಂಪುರ, ಬಲವಂತ ಕೋಳಿ, ಅಶೋಕ ಜಮಾದಾರ ಮತ್ತು ಸುರೇಶ ಪೂಜಾರಿ
ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.