ತಿಂಗಳಾಂತ್ಯಕ್ಕೆ ಮಂಟಪ ಕಾಮಗಾರಿ ಶುರು


Team Udayavani, Apr 6, 2022, 11:08 AM IST

5vachan

ಭಾಲ್ಕಿ: ಏಪ್ರಿಲ್‌ ಕೊನೆ ವಾರದಲ್ಲಿ ಬಸವಕಲ್ಯಾಣ ನೂತನ ಅನುಭವ ಮಂಟಪ ಕಟ್ಟಡ ಕಾಮಗಾರಿ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಹಿರೇಮಠ ಸಂಸ್ಥಾನಕ್ಕೆ ಭೇಟಿ ನೀಡಿ ಉಭಯ ಶ್ರೀಗಳಿಂದ ಆಶೀರ್ವಾದ ಪಡೆದು ಡಾ| ಚನ್ನಬಸವ ಪಟ್ಟದ್ದೇವರ 23ನೇ ಸ್ಮರಣೋತ್ಸವ ಮತ್ತು ವಚನ ಜಾತ್ರೆ-2022ರ ವಾಲ್‌ ಪೋಸ್ಟರ್‌ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಅನುಭವ ಮಂಟಪ ನಿರ್ಮಾಣಕ್ಕಿರುವ ಎಲ್ಲ ಸಮಸ್ಯೆ, ಅಡೆತಡೆ ನಿವಾರಿಸಲಾಗಿದೆ. 75 ಎಕರೆ ಭೂಮಿ ಸ್ವಾ ಧೀನ ಮಾಡಿಕೊಳ್ಳಲಾಗಿದೆ. ಕಾಮಗಾರಿಗೆ ಟೆಂಡರ್‌ ಕೂಡ ಕರೆಯಲಾಗಿದೆ. ಏಪ್ರಿಲ್‌ ಕೊನೆ ವಾರದಲ್ಲಿ ಅನುಭವ ಮಂಟಪ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ. ಈ ಭಾಗದ ಅಭಿವೃದ್ಧಿಯಲ್ಲಿ ಡಾ| ಚನ್ನಬಸವ ಪಟ್ಟದ್ದೇವರ ಕೊಡುಗೆ ಏನು ಎಂಬುದನ್ನು ತಿಳಿದುಕೊಂಡಿದ್ದೇನೆ. ನಿರ್ಲಕ್ಷ್ಯಕ್ಕೊಳಗಾಗಿದ್ದ ಅನುಭವ ಮಂಟಪ 20ನೇ ಶತಮಾನದಲ್ಲಿ ಡಾ| ಚನ್ನಬಸವ ಪಟ್ಟದ್ದೇವರು ಸ್ವತಃ ಕಲ್ಲು-ಮಣ್ಣು ಹೊತ್ತು ಅನುಭವ ಮಂಟಪ ನಿರ್ಮಾಣ ಮಾಡಿದ್ದು ಕೇಳಿದ್ದೆ. ಅದೇ ದಾರಿಯಲ್ಲಿ ಡಾ| ಬಸವಲಿಂಗ ಪಟ್ಟದ್ದೇವರು ನಡೆಯುತ್ತಿರುವುದು ಶ್ಲಾಘನೀಯ ಎಂದರು.

ಸುಮಾರು 4 ಕೋಟಿ ರೂ. ಮೌಲ್ಯದ 12 ಎಕರೆ ಭೂಮಿ ಯಾವುದೇ ಬೇಡಿಕೆ ಇಡದೇ ಅನುಭವ ಮಂಟಪ ಕಟ್ಟಡ ನಿರ್ಮಾಣಕ್ಕೆ ಹಸ್ತಾಂತರಿಸಿರುವುದು ಶ್ಲಾಘನೀಯ. ಜತೆಗೆ ಜಿಲ್ಲಾಡಳಿತ ಮಾಡಬೇಕಾದ ಕೆಲಸ ಪಟ್ಟದ್ದೇವರು ಮಾಡಿದ್ದು ನೋಡಿದರೇ ಅವರಿಗೆ ಅನುಭವ ಮಂಟಪಕ್ಕೆ ಇರುವ ಕಾಳಜಿ ಎಂಥಹದ್ದು ಎನ್ನುವುದನ್ನು ತೋರಿಸಿಕೊಡುತ್ತದೆ ಎಂದು ತಿಳಿಸಿದರು.

ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿ ಮಾತನಾಡಿ, ಬಸವಣ್ಣನವರ ನಂತರ ಡಾ| ಚನ್ನಬಸವ ಪಟ್ಟದ್ದೇವರು ಕಟ್ಟಿದ ಅನುಭವ ಮಂಟಪ ವಿಶ್ವಮಾನ್ಯ ಆಗಬೇಕೆನ್ನುವ ಉದ್ದೇಶದಿಂದ ನೂತನ ಅನುಭವ ಮಂಟಪ ಕಟ್ಟಡ ನಿರ್ಮಾಣಕ್ಕೆ ಎಲ್ಲಿಲ್ಲದ ಪ್ರಯತ್ನ ಮಾಡಲಾಗಿದೆ. ಈಗ ಕಾಮಗಾರಿ ಆರಂಭ ಆಗುತ್ತಿರುವುದು ಖುಷಿ ಕೊಟ್ಟಿದೆ. ಭೂಸ್ವಾಧೀನ ಪ್ರಕ್ರಿಯೆ ಸುಲಭದ ವಿಷಯವಲ್ಲ. ಆದರೆ ನೂತನ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ವಾರದೊಳಗೆ ಎಲ್ಲ ಸಮಸ್ಯೆ ಬಗೆಹರಿಸಿದ್ದು ಶ್ಲಾಘನೀಯ ಎಂದರು. ಪೀಠಾಪತಿ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿ ಮಾತನಾಡಿದರು.

ವಾಲ್ಪೋಸ್ಟರ್ಬಿಡುಗಡೆ

ಏ.21 ಮತ್ತು 22 ರಂದು ನಡೆಯಲಿರುವ ಡಾ| ಚನ್ನಬಸವ ಪಟ್ಟದ್ದೇವರ 23ನೇ ಸ್ಮರಣೋತ್ಸವ ಮತ್ತು ವಚನ ಜಾತ್ರೆ-2022ರ ವಾಲ್‌ ಪೋಸ್ಟರ್‌ನ್ನು ಜಿಲ್ಲಾಧಿಕಾರಿ ಗೋವಿಂದ್‌ ರೆಡ್ಡಿ ಬಿಡುಗಡೆ ಮಾಡಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬಸವಕಲ್ಯಾಣ ಸಹಾಯಕ ಆಯುಕ್ತ ರಮೇಶ ಕೋಳಾರ್‌, ತಹಶೀಲ್ದಾರ್‌ ಕೀರ್ತಿ ಚಾಲಕ್‌, ಪುರಸಭೆ ಮುಖ್ಯಾಧಿಕಾರಿ ಸ್ವಾಮಿದಾಸ್‌, ಶಶಿಧರ ಕೋಸಂಬೆ, ಸಿದ್ಧಯ್ಯ ಕವಡಿಮಠ, ಶರಣಪ್ಪ ಬಿರಾದಾರ, ಗಣಪತಿ ಬಾವುಗೆ, ಶರಣಪ್ಪ ಬಿರಾದಾರ, ಧನರಾಜ ಬಂಬುಳಗೆ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.