ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
Team Udayavani, Nov 3, 2019, 3:02 PM IST
ಹುಮನಾಬಾದ: ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ಕೈಗೊಂಡ ನಂತರ ಕಳಪೆ ಆಗಿದೆ ಎಂದು ದೂರುವ ಬದಲಿಗೆ ಸಾರ್ವಜನಿಕರು ಕಾಮಗಾರಿ ನಡೆಯುವ ಸಂದರ್ಭದಲ್ಲಿ ಕೆಡದಂತೆ ಮೆನ್ನೆಚ್ಚರಿಕೆ ವಹಿಸಿ, ಗುಣಮಟ್ಟದ ಕಾಮಗಾರಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ರಾಜಶೇಖರ ಬಿ.ಪಾಟೀಲ ಸಲಹೆ ನೀಡಿದರು.
ಹುಮನಾಬಾದ- ಮಾಣಿಕನಗರ- ಘೋಡವಾಡಿ ಮಾರ್ಗದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳುತ್ತಿರುವ1.50 ಕಿ.ಮೀ. ಜಂಕ್ಷನ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಸರ್ಕಾರದ ಅನುದಾನವೇನು ವಿಧಾನಸೌಧದಲ್ಲಿ ಪ್ರಿಂಟ್ ಆಗುವುದಿಲ್ಲ. ಪ್ರತಿಯೊಬ್ಬರಿಂದ ಸಂಗ್ರಹಿಸಲಾಗುವುವ ತೆರಿಗೆ ಹಣವನ್ನೇ ಸರ್ಕಾರ ಅಭಿವೃದ್ಧಿಗಾಗಿ ಅನುದಾನ ರೂಪದಲ್ಲಿ ಬಿಡುಗಡೆ ಮಾಡುತ್ತದೆ. ಇದನ್ನು ಯಾರೂ ಗಂಭೀರವಾಗಿ ಪರಿಗಣಿಸದಿರುವ ಕಾರಣ ಬಹುತೇಕ ಕಾಮಗಾರಿಗಳು ಪೂರ್ಣಾವಧಿ ಸೇವೆ ಒದಗಿಸುವ ಮುನ್ನವೇ ಹಾಳಾಗುತ್ತವೆ. ಇಂಥದಕ್ಕೆ ಸಾರ್ವಜನಿಕರು ಅವಕಾಶ ಕಲ್ಪಿಸಬಾರದು ಎಂದು ಸಲಹೆ ನೀಡಿದರು. ಗುಣಮಟ್ಟ ವಿಷಯದಲ್ಲಿ ಯಾವುದೇ ಮುಲಾಜಿಲ್ಲ. ಗುತ್ತಿಗೆದಾರ ಯಾರಾಗಿದ್ದರೂ ಸರಿ, ಕಳಪೆಯಾದರೆ ಬಿಲ್ ತಡೆಹಿಡಿಯಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಡಾ|ಚಂದ್ರಶೇಖರ ಬಿ.ಪಾಟೀಲ, ತಾಲೂಕು ಪಂಚಾಯಿತಿ ಅಧ್ಯಕ್ಷ ರಮೇಶ ಎಂ.ಡಾಕುಳಗಿ, ಉಪಾಧ್ಯಕ್ಷೆ ಸುಗಂಧಾ ಅಣ್ಯಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪ ದಾನಾ, ಸದಸ್ಯ ಪ್ರಕಾಶ ಕಾಳಮದರಗಿ, ಮಾಣಿಕನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಪೊಲೀಸ್ ಪಾಟೀಲ, ಅಣ್ಣಾರಾವ್ ಪಾಟೀಲ, ದತ್ತಕುಮಾರ ಚಿದ್ರಿ, ಓಂಕಾರ ತುಂಬಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಹ್ಮದ್ ಮೈನೋದ್ದಿನ್ ಅಪ್ಸರಮಿಯ್ಯ, ರಾಜಪ್ಪ ಇಟಗಿ, ಎಸ್.ಡಿ.ವಾಗ್ಮಾರೆ, ಈಶ್ವರ ಬಿ.ಕಲಬುರ್ಗಿ, ವಾಹೇದ್ ಬೇಗ್, ಮಲ್ಲಿಕಾರ್ಜುನ ಮಾಳಶೆಟ್ಟಿ, ಸಚ್ಚಿನ ಘವಾಳ್ಕರ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು