ಅನುದಾನ-ಅಧಿಕಾರ ಹೆಚ್ಚಳದಿಂದ ತಾಪಂ ಬಲಗೊಳಿಸಿ

ನಮ್ಮನ್ನು ಚುನಾಯಿಸಿರುವ ಮತದಾರರಿಗೆ ಯಾವುದೇ ಅನುಕೂಲ ಕಲ್ಪಿಸಲು ಸಾಧ್ಯವಾಗುತ್ತಿಲ್ಲ.

Team Udayavani, Jan 21, 2021, 4:06 PM IST

Udayavani Kannada Newspaper

ಬೀದರ: ಅನುದಾನದ ಕೊರತೆ ಮತ್ತು ಅಧಿಕಾರ ಮೊಟಕುದಿಂದಾಗಿ ತಾಪಂ ವ್ಯವಸ್ಥೆಯೇ ದುರ್ಬಲ ಆಗುತ್ತಿರುವ ಹಿನ್ನೆಲೆ ತಾಪಂ ಆಡಳಿತ ರದ್ದುಗೊಳಿಸುವ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ತಾಪಂಗಳನ್ನು ಮತ್ತಷ್ಟು ಬಲಪಡಿಸಿ ಆಡಳಿತ ವ್ಯವಸ್ಥೆ ಉಳಿಸಿಕೊಳ್ಳಲಿ ಎಂಬ ಅಭಿಪ್ರಾಯ ಜಿಲ್ಲೆಯ ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ವ್ಯಕ್ತವಾಗುತ್ತಿದೆ. ಅಧಿಕಾರ ವಿಕೇಂದ್ರೀಕರಣದ ಮಹತ್ವಕಾಂಕ್ಷಿ ಉದ್ದೇಶದಿಂದ ರಾಜ್ಯದಲ್ಲಿ ಜಿಪಂ ಮತ್ತು ಗ್ರಾಪಂ ವ್ಯವಸ್ಥೆ ಜತೆಗೆ ತಾಪಂ ಸಹ ಸ್ಥಾಪನೆಗೊಂಡಿದೆ. ಈ ಸ್ಥಳೀಯ ಸಂಸ್ಥೆಗಳು ಗ್ರಾಮೀಣ ಅಭಿವೃದ್ಧಿಗೆ ಜಿಪಂ ಹಾಗೂ ಸರ್ಕಾರಗಳ ನಡುವೆ ಸೇತುವೆಯಾಗಿ ಕಾರ್ಯಹಿಸುತ್ತಿವೆ.

ಆದರೆ, ಅಗತ್ಯ ಅನುದಾನದ ಲಭ್ಯತೆ ಮತ್ತು ಅಧಿಕಾರದ ಇಲ್ಲದಿರುವುದು ಸಂಸ್ಥೆಗಳ ಅಸ್ತಿತ್ವದ ಪ್ರಶ್ನೆಗಳು ಉದ್ಭವಿಸಿವೆ. ಹಾಗಾಗಿ ಮೂರು ಹಂತಗಳಲ್ಲಿರುವ ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಎರಡು ಹಂತಕ್ಕಿಳಿಸುವ ಕುರಿತು ಚರ್ಚೆಗಳು  ಕೇಳಿಬರಲಾರಂಭವಿಸಿವೆ. ಇದಕ್ಕೆ ಪುಷ್ಠಿ ಎಂಬಂತೆ ಇತ್ತೀಚೆಗೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಾಪಂ ವ್ಯವಸ್ಥೆ ರದ್ದುಗೊಳಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.

ಪ್ರತಿ ತಾಪಂಗಳಿಗೆ ಮುಖ್ಯಮಂತ್ರಿ ಅಭಿವೃದ್ಧಿ ನಿಧಿಯಿಂದ 2 ಕೋಟಿ ರೂ. ವಾರ್ಷಿಕ ಅನುದಾನ ಬರುತ್ತಿದೆ. ಪ್ರಸಕ್ತ ವರ್ಷದಿಂದ 15ನೇ ಹಣಕಾಸು ಯೋಜನೆಯಡಿ ಪ್ರತಿ ಪಂಚಾಯತಗೆ ಮೂರು ಹಂತದಲ್ಲಿ 80 ಲಕ್ಷ ದಿಂದ 1 ಕೋಟಿ ರೂ. ಅನುದಾನ ನೀಡಲಾಗಿದೆ. ಇದಕ್ಕೆ ಹೊರತಾಗಿ ತಾಪಂಗಳಿಗೆ ಯಾವುದೇ ಹಣಕಾಸಿನ ಲಭ್ಯತೆ ಇಲ್ಲ. ಬಿಡುಗಡೆಯಾದ ಅನುದಾನ ಹಂಚಿಕೆಯಾದರೆ ಒಂದು ಕ್ಷೇತ್ರಕ್ಕೆ ವಾರ್ಷಿಕ 7ರಿಂದ 8 ಲಕ್ಷ ರೂ. ಮಾತ್ರ ಲಭಿಸುತ್ತಿದೆ. ಆದರೆ, ಇದು ಯಾವುದಕ್ಕೂ ಸಾಲದು. ಇದರಿಂದ ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ಕೇವಲ ಕಟ್ಟಡಗಳ ದುರಸ್ತಿ ಕೆಲಸವನ್ನಷ್ಟೇ ಮಾಡಲು ಸಾಧ್ಯ ಎಂದು ತಾಪಂ ಅಧ್ಯಕ್ಷರು, ಸದಸ್ಯರುಗಳು ಬೇಸರ ವ್ಯಕ್ತಪಡಿಸುತ್ತಾರೆ.

ಅನುದಾನ, ಅಧಿಕಾರ ಇಲ್ಲದೇ ತಾಪಂ ಸದಸ್ಯರಾಗಿ ನಮ್ಮನ್ನು ಚುನಾಯಿಸಿರುವ ಮತದಾರರಿಗೆ ಯಾವುದೇ ಅನುಕೂಲ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಕೇವಲ
ಪರಿಶೀಲನಾ ಸಭೆಗಳಿಗೆ ಮತ್ತು ರಾಜಕೀಯ ನಾಯಕರುಗಳಿಗೆ ಅವಕಾಶ ಮಾಡಿಕೊಡಲು ಈ ಸಂಸ್ಥೆ ಸೃಷ್ಟಿಯಾದಂತಾಗಿದೆ. ಸದ್ಯ ಜಿಪಂ-ತಾಪಂಗಳಿಗಷ್ಟೇ ಹೆಚ್ಚಿನ ಅಧಿಕಾರ ಇದೆ. ಮೂಲಕ ಉದ್ಯೋಗ ಖಾತ್ರಿ ಯೋಜನೆ ಮೂಲಕ ಒಂದು ಕೋಟಿ ರೂ.ಗಳಷ್ಟು ಅನುದಾನ ಮತ್ತು ವಸತಿ ಯೋಜನೆಗಳಡಿ ಬಡವರಿಗೆ ಮನೆಗಳನ್ನು ಒದಗಿಸುವ ಅವಕಾಶ ಇರುವುದರಿಂದ ಗ್ರಾಪಂ ಸದಸ್ಯರಾಗುವುದೇ ಉತ್ತಮ ಎಂಬ ಭಾವನೆ ಅವರಲ್ಲಿ ಮೂಡಿದೆ. ಗ್ರಾಪಂ ಮತ್ತು ಜಿಪಂಗೆ ಸೇತುವೆಯಾಗಿರುವ ತಾಪಂಗಳ ವ್ಯವಸ್ಥೆ ಅಗತ್ಯತೆ ಇದೆ. ಆದರೆ, ತಾಪಂಗಳಿಗೆ ವಾರ್ಷಿಕ ಅನುದಾನ ಹೆಚ್ಚಿಸುವ ಜತೆಗೆ ಆಡಳಿತ ವ್ಯವಸ್ಥೆಯಲ್ಲಿ ಮತ್ತಷ್ಟು ಅಧಿಕಾರ ಕಲ್ಪಿಸಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಸುಗಮ ಆಡಳಿತಕ್ಕಾಗಿ ತಾಪಂ ವ್ಯವಸ್ಥೆ ಅನಿವಾರ್ಯ. ಆದರೆ, ಅನುದಾನ, ಅಧಿಕಾರದ ಕೊರತೆ ಇದೆ. ಅನುದಾನ ಕೇವಲ ಗ್ರಾಮಗಳಲ್ಲಿ ದುರಸ್ತಿ ಕೆಲಸಕ್ಕೆ ಸೀಮಿತವಾಗುತ್ತಿದೆ. ನಮ್ಮನ್ನು ಸದಸ್ಯರಾಗಿ ಮಾಡಿರುವ ಜನರಿಗೆ ಅನುಕೂಲ ಕಲ್ಪಿಸುವ ಸಾಧ್ಯವಾಗುತ್ತಿಲ್ಲ ಎಂಬ ಬೇಸರ ಇದೆ. ತಾಪಂಗಳನ್ನು ಮ ತ್ತಷ್ಟು ಬಲಪಡಿಸಿ ಆಡಳಿತ ವಿಕೇಂದ್ರೀಕರಣ ವ್ಯವಸ್ಥೆ ಪರಿಣಾಮಕಾರಿಗೊಳಿಸುವ ಅಗತ್ಯವಿದೆ. ತಾಪಂ ವ್ಯವಸ್ಥೆ ರದ್ದು ಸರ್ಕಾರಕ್ಕೆ ಬಿಟ್ಟ ವಿಚಾರ.
ರಮೇಶ ಡಾಕುಳಗಿ, ಹುಮನಾಬಾದ ತಾಪಂ ಅಧ್ಯಕ

ಅಧಿಕಾರ ವಿಕೇಂದ್ರೀಕರಣಕ್ಕಾಗಿ ಮೂರು ಹಂತಗಳ ಪಂಚಾಯತ್‌ ವ್ಯವಸ್ಥೆ ಅತ್ಯಗತ್ಯ. ಆದರೆ, ತಾಪಂಗಳಿಗೆ ಅಗತ್ಯ ಅನುದಾನವೇ ಸಿಗದಿರುವುದು ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ಸೌಲಭ್ಯ ಒದಗಿಸಲು  ಸಾಧ್ಯವಾಗುತ್ತಿಲ್ಲ. ಹೆಸರಿಗೆ ಮಾತ್ರ ಸದಸ್ಯ ಎಂಬಂತಾಗಿದೆ. ಹಾಗಾಗಿ ಜನರ ಸೇವೆ ಮಾಡಲು ಗ್ರಾಪಂ ಸದಸ್ಯರಾಗುವುದೇ ಉತ್ತಮ ಎಂಬ ಭಾವನೆ ಮೂಡಿದೆ. ವಿಜಯಕುಮಾರ ಬರೂರ್‌, ಬೀದರ ತಾಪಂ ಅಧ್ಯಕ್ಷ

ಶಶಿಕಾಂತ ಬಂಬುಳಗ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.