ರಾಜ್ಯದ ಕನ್ನಡ ಶಾಲೆಗಳ ಉಳಿವಿಗೆ ಹೋರಾಟ
Team Udayavani, Feb 22, 2022, 12:00 PM IST
ಬೀದರ: ರಾಜ್ಯದಲ್ಲಿ ಕನ್ನಡ ಶಾಲೆಗಳ ಉಳಿವಿಗೆ ಹೋರಾಟ ನಡೆಸಲು ನಗರದ ಕರ್ನಾಟಕ ಕಾಲೇಜಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಪ್ರಮುಖರ ಸಭೆಯಲ್ಲಿ ನಿರ್ಧರಿಸಲಾಯಿತು.
ಹೋರಾಟಕ್ಕಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕನ್ನಡ ಸಂರಕ್ಷಣಾ ಸಮಿತಿ ರಚಿಸಲು ತೀರ್ಮಾನಿಸಲಾಯಿತು. ಪಾಲಕರಲ್ಲಿ ಇಂಗ್ಲಿಷ್ ವ್ಯಾಮೋಹ ಹೆಚ್ಚುತ್ತಿರುವುದು, ಸರ್ಕಾರದಿಂದಲೇ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಿರುವುದು, ಕನ್ನಡ ಶಾಲೆ ಆರಂಭಿಸಲು ಹಾಗೂ ಮಾನ್ಯತೆ ನವೀಕರಿಸಲು ಹತ್ತು ಹಲವು ನಿಯಮ ವಿಧಿಸಿರುವುದು ರಾಜ್ಯದಲ್ಲಿ ಕನ್ನಡ ಶಾಲೆಗಳು ಮುಚ್ಚಲು ಕಾರಣವಾಗಿವೆ ಎಂದು ಅನೇಕ ಪ್ರಮುಖರು ಸಭೆಯ ಗಮನ ಸೆಳೆದರು.
ಕನ್ನಡ ಶಾಲೆಗಳಿಗೆ ಸರಳವಾಗಿ ಅನುಮತಿ ಕೊಡಬೇಕು. 1995-2015ರ ವರೆಗಿನ ಶಾಲೆಗಳನ್ನು ಸಂವಿಧಾನದ 371(ಜೆ) ಕಲಂ ತಿದ್ದುಪಡಿ ಕಾಯ್ದೆಯಡಿ ಅನುದಾನಕ್ಕೆ ಒಳಪಡಿಸಬೇಕು. ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಖಾಲಿ ಹುದ್ದೆ ಭರ್ತಿ ಮಾಡಬೇಕು. ಸರ್ಕಾರದಿಂದ ಆಂಗ್ಲಮಾಧ್ಯಮ ಶಾಲೆ ತೆರೆಯಬಾರದು. ಅನುದಾನ ರಹಿತ ಶಾಲೆಗಳಿಗೂ ಆರ್ಟಿಇ ಜಾರಿಗೊಳಿಸಬೇಕು ಎಂದು ಬೇಡಿಕೆ ಮಂಡಿಸಿದರು.
ಎರಡು ವರ್ಷದಿಂದ ಒಂದೂ ಹೊಸ ಕನ್ನಡ ಶಾಲೆಗೆ ಪರವಾನಗಿ ಕೊಟ್ಟಿಲ್ಲ. ನೂರೆಂಟು ಕಟ್ಟಳೆಗಳು ಹಾಕಿರುವುದರಿಂದ ಶಾಲೆಗಳ ನವೀಕರಣವೂ ಆಗುತ್ತಿಲ್ಲ. ಒಂದನೇ ತರಗತಿಯಿಂದಲೇ ಇಂಗ್ಲಿಷ್ ಬೋಧಿಸುತ್ತಿರುವ ಕಾರಣ ಕನ್ನಡ ಮಾಧ್ಯಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಸ್ಥಿತಿ ದಯನೀಯವಾಗಿದೆ ಎಂದು ವಿಕಾಸ ಅಕಾಡೆಮಿ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ತಿಳಿಸಿದರು.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮುಂದಿನ ಹತ್ತು ವರ್ಷಗಳಲ್ಲಿ ಕನ್ನಡ ಶಾಲೆಗಳು ಸಂಪೂರ್ಣ ಮುಚ್ಚಲಿವೆ. ಕನ್ನಡ ಉಳಿದರೆ ಮಾತ್ರ ನಾಡು, ಸಂಸ್ಕೃತಿ, ಪರಿಷತ್ತು ಎಲ್ಲವೂ ಉಳಿಯಲಿವೆ. ಕಾರಣ, ಕನ್ನಡ ಶಾಲೆಗಳ ಉಳಿವಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಮಾಜಿ ಅಧ್ಯಕ್ಷ ಪ್ರೊ| ಸಿದ್ರಾಮಪ್ಪ ಮಾಸಿಮಾಡೆ, ಹಿರಿಯ ಸಾಹಿತಿಗಳಾದ ಪಂಚಾಕ್ಷರಿ ಪುಣ್ಯಶೆಟ್ಟಿ, ಭಾರತಿ ವಸ್ತ್ರದ್, ಡಾ| ಬಸವರಾಜ ಬಲ್ಲೂರ, ಸತ್ಯಮೂರ್ತಿ, ರಾಜೇಂದ್ರ ಮಣಗೇರಿ, ಶಾಂತಕುಮಾರ ಬಿರಾದಾರ, ಸಂಗಮೇಶ ಏಣಕೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..