ಕ್ರೀಡೆಯಿಂದ ಯಶಸ್ವಿ ಜೀವನ
Team Udayavani, Sep 4, 2017, 11:51 AM IST
ಹುಮನಾಬಾದ: ವಿದ್ಯಾರ್ಥಿಗಳು ಶ್ರಮಪಟ್ಟರೆ ಕ್ರೀಡಾ ಕ್ಷೇತ್ರದಲ್ಲೂ ಸಾಧನೆ ಮಾಡಿ ಜೀವನದಲ್ಲಿ ಯಶಸ್ವೀ ಕಾಣಬಹುದು ಎಂದು ಮಾಣಿಕನಗರ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಪೊಲೀಸ್ ಪಾಟೀಲ ಹೇಳಿದರು.
ಮಾಣಿಕನಗರ ಗ್ರಾಮದ ಮಾಣಿಕಪ್ರಭು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ
ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಓದಿನೊಂದಿಗೆ ತಮಗೆ ಆಸಕ್ತಿ ಇರುವ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಇಂದಿನ ದಿನಗಳಲ್ಲಿ
ಹೆಚ್ಚು ಯುವಕರು ಟಿವಿ ಹಾಗೂ ಮೂಬೈಲ್ಗಳಲ್ಲಿ ಆಟ ಆಡುತ್ತಿರುವುದು ದುರದುಷ್ಟಕರ ಸಂಗತಿಯಾಗಿದೆ.
ಕ್ರೀಡಾಂಗಣದಲ್ಲಿ ಇಳಿದು ವಿವಿಧ ಕ್ರೀಡೆಗಳನ್ನು ಆಡುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಸಾಧ್ಯವಿದೆ ಎಂದು ಸಲಹೆ ನೀಡಿದರು.
ದೈಹಿಕ ಶಿಕ್ಷಣ ಪರಿವೀಕ್ಷಕ ಲಿಂಗರಾಜ ಎಖೇಳ್ಳಿ ಮಾತನಾಡಿ, ಆಟಗಳನ್ನು ಆಡುವುದರಿಂದ ಉಲ್ಲಾಸ, ಆತ್ಮವಿಶ್ವಾಸ
ಹೆಚ್ಚುತ್ತದೆ. ದಸರಾ ಕ್ರೀಡಾ ಕೂಟದಲ್ಲಿ ಎಲ್ಲಾ ವಯಸ್ಸಿನವರು ಭಾಗವಹಿಸಲು ಅವಕಾಶವಿದೆ. ತಮ್ಮ ಪ್ರತಿಭೆ ಪ್ರದರ್ಶಿಸಿ
ಉನ್ನತ ಸ್ಥಾನದಲ್ಲಿ ಗೆಲವು ಕಾಣಬೇಕು ಎಂದು ಹೇಳಿದರು. ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಅನಂತರಡ್ಡಿ ಶಿವರಾಯ,
ಕಾರ್ಯದರ್ಶಿ ವೀರೇಂದ್ರ ಮುರಡೆ, ಚಾಮರಾಜ ಶಿರಮುಂಡೆ, ಶರಣಪ್ಪ ಮಾಲೆ, ಕಿರಣ ಕುಲ್ಕರ್ಣಿ, ಸಿದ್ದಪ್ಪ ಹೆಗ್ಗಣಿ,
ರಮೇಶ, ಬಂಡೆಪ್ಪ ಶ್ರೀಮಂಗಲೆ, ಜೈರಾಜ, ನಾಗರಾಜ ಶಿರಮುಂಡೆ, ಗಣಪತಿ ಪವಾರ್, ದಶರಥ ಉಡಬನಳ್ಳಿ, ವೆಂಕಟ ಉಡಬಾಳ, ವಿಜಯಕುಮಾರ ಚಾಂಗಲೇರಾ, ಕಲ್ಲಪ್ಪ ಬೋರೆ, ಸುರೇಶ ಪೊದ್ದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ