ಒಂದೇ ವರ್ಷದಲ್ಲಿ 907 ರೈತರ ಆತ್ಮಹತ್ಯೆ
657 ಪ್ರಕರಣಗಳಿಗೆ 5 ಲಕ್ಷ ರೂ. ಪರಿಹಾರ ; 187 ಪ್ರಕರಣಗಳು ತಿರಸ್ಕೃತ, 63 ಇತ್ಯರ್ಥಕ್ಕೆ ಬಾಕಿ
Team Udayavani, Jun 7, 2019, 6:00 AM IST
ಸಾಂದರ್ಭಿಕ ಚಿತ್ರ
ಬೀದರ: ಕಳೆದೊಂದು ವರ್ಷದಲ್ಲಿ ರಾಜ್ಯದಲ್ಲಿ 907 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, 657 ಪ್ರಕರಣಗಳಿಗೆ ಈಗಾಗಲೇ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಕಲ್ಪಿಸಲಾಗಿದೆ. 187 ಪ್ರಕರಣಗಳು ತಿರಸ್ಕೃತಗೊಂಡಿದ್ದು, ಇನ್ನೂ 63 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ.
ರಾಜ್ಯದಲ್ಲಿ ಅತಿ ಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ಬೆಳಗಾವಿ ಜಿಲ್ಲೆಯಲ್ಲಿ ದಾಖಲಾಗಿವೆ. ಮೈಸೂರು ಜಿಲ್ಲೆ ಎರಡನೇ ಸ್ಥಾನ ಪಡೆದರೆ, ಹಾವೇರಿ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ ಒಂದೇ ಒಂದು ಪ್ರಕ ರಣ ಮಾತ್ರ ನಡೆದಿದ್ದು, ಪರಿಹಾರ ಕೂಡ ಕಲ್ಪಿಸಲಾಗಿದೆ. ಬೆಳಗಾವಿಯಲ್ಲಿ 104 ಪ್ರಕರಣಗಳ ಪೈಕಿ 80 ಪ್ರಕರಣ ಗಳಿಗೆ ಪರಿಹಾರ ನೀಡಲಾಗಿದೆ. 17 ಪ್ರಕರಣಗಳು ತಿರಸ್ಕೃತಗೊಂಡಿದ್ದು, 7 ಪ್ರಕರಣಗಳು ಬಾಕಿ ಇವೆ.
ಮೈಸೂರು ಜಿಲ್ಲೆಯ 79 ರೈತರ ಆತ್ಮಹತ್ಯೆ ಪ್ರಕರಣಗಳ ಪೈಕಿ 49 ಪ್ರಕರಣಗಳನ್ನು ಅಂಗೀಕೃತಗೊಳಿಸಲಾಗಿದೆ. 15 ಪ್ರಕರಣಗಳು ತಿರಸ್ಕೃತಗೊಂಡಿದ್ದು, 15 ಪ್ರಕರಣಗಳಿಗೆ ಪರಿಹಾರ ನೀಡಬೇಕಿದೆ. ಹಾವೇರಿ ಜಿಲ್ಲೆಯ ಒಟ್ಟು 65 ಪ್ರಕರಣಗಳ ಪೈಕಿ 53 ಪ್ರಕರಣಗಳು ಇತ್ಯರ್ಥವಾಗಿವೆ. 7 ಪ್ರಕರಣಗಳು ತಿರಸ್ಕೃತಗೊಂಡಿದ್ದು, 5 ಪ್ರಕರಣಗಳಿಗೆ ಪರಿಹಾರ ನೀಡಬೇಕಾಗಿದೆ.
ಮಂಡ್ಯ ಜಿಲ್ಲೆಯ 57 ಪ್ರಕರಣಗಳ ಪೈಕಿ 45 ಪ್ರಕರಣಗಳಿಗೆ ಪರಿಹಾರ ನೀಡಲಾಗಿದ್ದು, 12 ಪ್ರಕರಣ ಗಳು ತಿರಸ್ಕೃತಗೊಂಡಿವೆ. ದಾವಣಗೆರೆ ಜಿಲ್ಲೆಯ 54 ಪ್ರಕರಣಗಳ ಪೈಕಿ 39 ಪ್ರಕಣಗಳಿಗೆ ಪರಿಹಾರ ಕಲ್ಪಿಸ ಲಾಗಿದೆ. 15 ಪ್ರಕರಣಗಳು ತಿರಸ್ಕೃತಗೊಂಡಿವೆ. ಧಾರವಾಡ ಜಿಲ್ಲೆಯ 53 ಪ್ರಕರಣಗಳ ಪೈಕಿ 37 ಪ್ರಕರಣ ಗಳು ಇತ್ಯರ್ಥಗೊಂಡಿವೆ. 16 ಪ್ರಕರಣಗಳು ತಿರಸ್ಕೃತ ಗೊಂಡಿವೆ. ಬೀದರನಲ್ಲಿ 51 ಪ್ರಕರಣಗಳ ಪೈಕಿ 37 ಪ್ರಕಣ ಗಳಿಗೆ ಪರಿಹಾರ ಕಲ್ಪಿಸಲಾಗಿದೆ. 13 ಪ್ರಕರಣಗಳು ತಿರಸ್ಕೃತಗೊಂಡಿದ್ದು, ಇನ್ನೂ 1 ಪ್ರಕರಣ ಬಾಕಿ ಉಳಿದಿದೆ.
ಕಲಬುರಗಿ ಜಿಲ್ಲೆಯ 48 ಪ್ರಕರಣಗಳ ಪೈಕಿ 44 ಪ್ರಕರಣಗಳಿಗೆ ಪರಿಹಾರ ನೀಡಲಾಗಿದ್ದು, 4 ಪ್ರಕರಣ ಗಳು ತಿರಸ್ಕೃತಗೊಂಡಿವೆ. ಯಾದಗಿರಿ ಜಿಲ್ಲೆಯ 48 ಪ್ರಕರಣಗಳ ಪೈಕಿ 37 ಪ್ರಕರಣಗಳ ಪರಿಹಾರ ಕಲ್ಪಿಸ ಲಾಗಿದೆ. 9 ಪ್ರಕರಣಗಳು ತಿರಸ್ಕೃತಗೊಂಡಿದ್ದು, 2 ಪ್ರಕರಣಗಳು ಇತ್ಯರ್ಥಗೊಳ್ಳಬೇಕಿದೆ. ರಾಯಚೂರು ಜಿಲ್ಲೆಯ 40 ಪ್ರಕರಣಗಳ ಪೈಕಿ 26 ಪ್ರಕರಣಗಳಿಗೆ ಪರಿ ಹಾರ ನೀಡಲಾಗಿದೆ. 14 ಪ್ರಕರಣಗಳು ತಿರಸ್ಕೃತ ಗೊಂಡಿವೆ. ವಿಜಯಪುರ ಜಿಲ್ಲೆಯ 36 ಪ್ರಕರಣಗಳ ಪೈಕಿ 31 ಪ್ರಕರಣಗಳಿಗೆ ಪರಿಹಾರ ಕಲ್ಪಿಸಲಾಗಿದೆ. 2 ಪ್ರಕರಣಗಳು ತಿರಸ್ಕೃತಗೊಂಡಿದ್ದು, 3 ಪ್ರಕರಣಗಳು ಬಾಕಿ ಉಳಿದುಕೊಂಡಿವೆ.
ಚಿಕ್ಕಮಗಳೂರು ಜಿಲ್ಲೆಯ 35 ಪ್ರಕರಣಗಳ ಪೈಕಿ 27 ಪ್ರಕರಣಗಳಿಗೆ ಪರಿಹಾರ ನೀಡಿದ್ದು, 8 ಪ್ರಕರಣಗಳು ತಿರಸ್ಕೃತಗೊಂಡಿವೆ. ಶಿವಮೊಗ್ಗ ಜಿಲ್ಲೆಯ 35 ಪ್ರಕರಣಗಳ ಪೈಕಿ 25 ಪ್ರಕರಣಗಳಿಗೆ ಪರಿಹಾರ ಕಲ್ಪಿಸಲಾಗಿದೆ. 8 ಪ್ರಕರಣಗಳು ತಿರಸ್ಕೃತಗೊಂಡಿದ್ದು, 2 ಪ್ರಕರಣಗಳು ಬಾಕಿ ಇವೆ.
ಕೊಪ್ಪಳ ಜಿಲ್ಲೆಯಲ್ಲಿ 28 ಪ್ರಕರಣಗಳ ಪೈಕಿ 14 ಪ್ರಕರಣಗಳಿಗೆ ಪರಿಹಾರ ಕಲ್ಪಿಸಲಾಗಿದೆ. 1 ಪ್ರಕರಣ ತಿರಸ್ಕೃತಗೊಂಡಿದ್ದು, 13 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇವೆ. ಬಾಗಲಕೋಟೆ ಜಿಲ್ಲೆಯ 28 ಪ್ರಕರಣಗಳ ಪೈಕಿ 24 ಪ್ರಕರಣಗಳಿಗೆ ಪರಿಹಾರ ಕಲ್ಪಿಸಲಾಗಿದೆ. 4 ಪ್ರಕರಣಗಳು ತಿರಸ್ಕೃತಗೊಂಡಿವೆ. ಬಳ್ಳಾರಿ ಜಿಲ್ಲೆಯ 27 ಪ್ರಕರಣಗಳ ಪೈಕಿ 22 ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ. 4 ಪ್ರಕರಣಗಳು ತಿರಸ್ಕೃತಗೊಂಡಿದ್ದು, ಒಂದು ಪ್ರಕರಣ ಬಾಕಿ ಉಳಿದಿದೆ.
ಗದಗ ಜಿಲ್ಲೆಯಲ್ಲಿ 25 ಪ್ರಕರಗಳ ಪೈಕಿ 16 ಪ್ರಕರಣ ಗಳಿಗೆ ಪರಿಹಾರ ನೀಡಲಾಗಿದೆ. 8 ಪ್ರಕರಣಗಳು ತಿರಸ್ಕೃತ ಗೊಂಡಿದ್ದು, 1 ಪ್ರಕರಣ ಬಾಕಿ ಉಳಿದಿದೆ. ಹಾಸನ ಜಿಲ್ಲೆಯ 23 ಪ್ರಕರಣಗಳ ಪೈಕಿ 10ಕ್ಕೆ ಪರಿಹಾರ ಕಲ್ಪಿಸ ಲಾಗಿದ್ದು, 13 ತಿರಸ್ಕೃತಗೊಂಡಿವೆ. ತುಮಕೂರು ಜಿಲ್ಲೆ ಯಲ್ಲಿ 14 ಪ್ರಕರಣಗಳ ಪೈಕಿ 4 ಅಂಗೀಕೃತಗೊಂಡಿವೆ. 2 ತಿರಸ್ಕೃತಗೊಂಡಿದ್ದು, 8 ಪ್ರಕರಣಗಳಿಗೆ ಪರಿಹಾರ ಕಲ್ಪಿಸಬೇಕಾಗಿದೆ. ರಾಮನಗರ ಜಿಲ್ಲೆಯ 12 ಪ್ರಕರಣಗಳ ಪೈಕಿ 6 ಪ್ರಕರಣಗಳಿಗೆ ಪರಿಹಾರ ಕಲ್ಪಿಸಲಾಗಿದ್ದು, 3 ತಿರಸ್ಕೃತಗೊಂಡಿವೆ. 3 ಬಾಕಿ ಉಳಿ ಇವೆ. ಉತ್ತರ ಕನ್ನಡ ಜಿಲ್ಲೆಯ 8 ಪ್ರಕರಣಗಳ ಪೈಕಿ 3 ಪ್ರಕರಣಗಳಿಗೆ ಪರಿಹಾರ ನೀಡಲಾಗಿದ್ದು. 5 ತಿರಸ್ಕೃತಗೊಂಡಿವೆ.
ಕೊಡಗು ಜಿಲ್ಲೆಯಲ್ಲಿ 7 ಪ್ರಕರಣಗಳು ದಾಖಲಾಗಿದ್ದು, 4 ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ. 2 ತಿರಸ್ಕೃತಗೊಂಡಿದ್ದು, 1 ಬಾಕಿ ಇದೆ. ಚಿತ್ರದುರ್ಗ ಜಿಲ್ಲೆಯ 7 ಪ್ರಕರಣಗಳ ಪೈಕಿ 5 ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ. 2 ತಿರಸ್ಕೃತಗೊಂಡಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ 5 ಪ್ರಕರಣಗಳ ಪೈಕಿ 5 ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 5 ಪ್ರಕರಣಗಳ ಪೈಕಿ 3 ಪ್ರಕರಣಗಳಿಗೆ ಪರಿಹಾರ ನೀಡಲಾಗಿದ್ದು, 2 ತಿರಸ್ಕೃತಗೊಂಡಿವೆ. ಕೋಲಾರ ಜಿಲ್ಲೆಯ 4 ಪ್ರಕರಣಗಳ ಪೈಕಿ 3 ಪ್ರಕರಣಗಳಿಗೆ ಪರಿಹಾರ ಕಲ್ಪಿಸಲಾಗಿದ್ದು, ಒಂದು ಬಾಕಿ ಇದೆ. ಚಾಮರಾಜನಗರ ಜಿಲ್ಲೆಯ 4 ಪ್ರಕರಣಗಳಿಗೆ ಪರಿಹಾರ ಕಲ್ಪಿಸಲಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ 4 ಪ್ರಕರಣಗಳ ಪೈಕಿ 3 ಪ್ರಕರಣಕ್ಕೆ ಪರಿಹಾರ ನೀಡಿದ್ದು, ಒಂದು ತಿರಸ್ಕೃತಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ 1 ಪ್ರಕರಣ ದಾಖಲಾಗಿದ್ದು, ಪರಿಹಾರ ಕಲ್ಪಿಸಲಾಗಿದೆ.
2015-16ನೇ ಸಾಲಿನಿಂದ ಈವರೆಗೆ ಜಿಲ್ಲೆಯಲ್ಲಿ ಒಟ್ಟು 263 ರೈತರ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದು, 225 ಪ್ರಕರಣಗಳು ಇತ್ಯರ್ಥಗೊಂಡಿವೆ. 38 ಪ್ರಕರಣಗಳು ತಿರಸ್ಕೃತಗೊಂಡಿವೆ. ಕೆಲ ವರ್ಷಗಳಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಆತ್ಮಹತ್ಯೆ ಪ್ರಕರಣಗಳು ಇಳಿಮುಖವಾಗಿವೆ. ರೈತರು ಆತ್ಮಹತ್ಯೆಗೆ ಮುಂದಾಗಬಾರದು. -ಸಿ.ವಿದ್ಯಾನಂದ, ಜಂಟಿ ಕೃಷಿ ಅಧಿಕಾರಿ
-ದುರ್ಯೋಧನ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ