ಸುರಪುರದಲ್ಲಿ ಕಂಟೇನ್ಮೆಂಟ್ ಝೋನ್ ರಚನೆ
ಜನರು ಯಾವುದೇ ಕಾರಣಕ್ಕೂ ಮನೆ ಬಿಟ್ಟು ಹೊರ ಬರಲು ಅವಕಾಶವಿಲ್ಲ: ಜೀವನಕುಮಾರ
Team Udayavani, Apr 20, 2020, 11:36 AM IST
ಸುರಪುರ: ರಾಜಾ ನಾಲ್ವಡಿ ವೆಂಕಟಪ್ಪನಾಯಕ ವೃತ್ತದಿಂದ ನಗರಸಭೆವರೆಗೆ ಒಂದು ಬದಿ ರಸ್ತೆಯನ್ನು ಬಂದ್ ಮಾಡಿರುವುದು.
ಸುರಪುರ: ಕಟ್ಟುನಿಟ್ಟಾಗಿ ಲಾಕ್ಡೌನ್ ಜಾರಿಗೆ ತರಲು ನಗರಸಭೆ 3 ವಾರ್ಡ್ಗೆ ಒಂದರಂತೆ ಕಂಟೇನ್ಮೆಂಟ್ ಝೋನ್ (ನಿಯಂತ್ರಣ ವಲಯ) ರಚಿಸಲು ನಿರ್ಧರಿಸಿದೆ. ಪ್ರಾಯೋಗಿಕವಾಗಿ 1, 2, 14 ಮತ್ತು 29, 30, 31 ವಾರ್ಡ್ಗಳನ್ನು ಕಂಟೇನ್ಮೆಂಟ್ ಝೋನ್ಗಳಾಗಿ
ಘೋಷಿಸಲಾಗಿದೆ. ಸೋಮವಾರ ನಗರಸಭೆ ವ್ಯಾಪ್ತಿಯ 6 ವಾರ್ಡ್ಗಳನ್ನು ಕಂಟೇನ್ಮೆಂಟ್ ಝೋನ್ ವ್ಯಾಪ್ತಿಗೆ ತರಲಾಗುತ್ತಿದೆ.
ಕಂಟೇನ್ಮೆಂಟ್ ಝೋನ್ನಲ್ಲಿ ಬರುವ ಮನೆಗಳಿಗೆ ತರಕಾರಿ, ದಿನಸಿ, ಔಷ ಧ ಇತರ ಅಗತ್ಯ ಸಾಮಗ್ರಿಗಳನ್ನು ನಗರಸಭೆ ಸಿಬ್ಬಂದಿ ಇಲ್ಲವೇ ನಗರಸಭೆಯಿಂದ ನಿಯೋಜಿತರಾದ ಸ್ವಯಂ ಸೇವಕರು ತಲುಪಿಸಲಿದ್ದಾರೆ. ಯಾವುದೇ ಕಾರಣಕ್ಕೂ ಜನರು ಮನೆ ಬಿಟ್ಟು ಹೊರಬರಲು ಅವಕಾಶವಿಲ್ಲ. ಹೊರಗೆ ಬಂದರೆ ಅಗತ್ಯ ಕಾರಣ ತಿಳಿಸಬೇಕು. ಇಲ್ಲದಿದ್ದರೆ ಅವರ ಮೇಲೆ ಕಾನೂನು ಕ್ರಮ ತೆಗೆದು ಕೊಳ್ಳಲಾಗುತ್ತಿದೆ.
ಈಗಾಗಲೇ ಕಂಟೇನ್ಮೆಂಟ್ ಝೋನ್ ವ್ಯಾಪ್ತಿಯ ಮನೆಗಳಿಗೆ ಸಾಮಗ್ರಿ ಪೂರೈಸುವವರ ಮೊಬೈಲ್ ಸಂಖ್ಯೆ ನೀಡಲಾಗಿದೆ. ಮನೆ ಮಾಲೀಕರು ಅವರಿಗೆ ಫೋನ್ ಮಾಡಿ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಬಹುದು. ಸಾಮಗ್ರಿ ಮುಟ್ಟಿದ ತಕ್ಷಣ ಹಣ ಕೊಡಬೇಕು ಎಂದು ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ತಿಳಿಸಿದರು.
ಲಾಕ್ಡೌನ್ ಇದ್ದರೂ ಜನರು ಅನಗತ್ಯವಾಗಿ ಹೊರಗೆ ತಿರುಗಾಡುವುದು ನಡೆದೇ ಇದೆ. ದ್ವಿಚಕ್ರ ವಾಹನಗಳ ಸಂಚಾರವೂ ಇದೆ. ಈಗಾಗಲೇ ಸಾಕಷ್ಟು ವಾಹನಗಳನ್ನು ಸೀಜ್ ಮಾಡಿದ್ದರೂ ಜನ ಕೇಳುತ್ತಿಲ್ಲ. ಕಾರಣ ಲಾಕ್ಡೌನ್ ಇನ್ನಷ್ಟು ಕಠಿಣಗೊಳಿಸಲು ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಈ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಹಂತ ಹಂತವಾಗಿ ಎಲ್ಲ ವಾರ್ಡ್ಗಳನ್ನು ಕಂಟೇನ್ಮೆಂಟ್ ಝೋನ್ ವ್ಯಾಪ್ತಿಗೆ ತರಲಾಗುತ್ತದೆ. 10 ಕಂಟೇನ್ಮೆಂಟ್ ಝೋನ್ ರಚಿಸಲಾಗುವುದು. ನಾಗರಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ವಾಹನ ದಟ್ಟಣೆ ತಗ್ಗಿಸಲು ಮತ್ತು ಪೊಲೀಸರಿಗೆ ಸಂಚಾರ ನಿಯಂತ್ರಣಕ್ಕೆ ಅನುಕೂಲವಾಗಲು ರಾಜಾ ನಾಲ್ವಡಿ ವೆಂಕಟಪ್ಪನಾಯಕ ವೃತ್ತದಿಂದ ನಗರಸಭೆಯ ವರೆಗೆ ಒಂದು ಬದಿ ರಸ್ತೆಯನ್ನು ಕಲ್ಲುಗಳನ್ನು ಅಡ್ಡ ಹಾಕಿ ಬಂದ್ ಮಾಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!