ಅನ್ಯ ರಾಜ್ಯದಲ್ಲಿರುವ ಕಾರ್ಮಿಕರ ಕರೆತರಲು ಮನವಿ
Team Udayavani, May 7, 2020, 11:48 AM IST
ಸುರಪುರ: ಶಾಸಕ ರಾಜೂಗೌಡ ಜಿಲ್ಲಾಧಿಕಾರಿಗೆ ಕೂರ್ಮಾರಾವ್ ಅವರಿಗೆ ಮನವಿ ಸಲ್ಲಿಸಿದರು
ಸುರಪುರ: ಲಾಕ್ಡೌನ್ ಹಿನ್ನೆಲೆಯಲ್ಲಿ ಅನ್ಯ ರಾಜ್ಯಗಳಲ್ಲಿ ಸಿಲುಕಿರುವ ಜಿಲ್ಲೆ ಹಾಗೂ ತಾಲೂಕಿನ ಕೂಲಿ ಕಾರ್ಮಿಕರನ್ನು ಕರೆತರುವಂತೆ ಒತ್ತಾಯಿಸಿ ಶಾಸಕ ನರಸಿಂಹ ನಾಯಕ ರಾಜೂಗೌಡ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಶಾಸಕ ನರಸಿಂಹ ನಾಯಕ, ಜಿಲ್ಲೆ ಹಾಗೂ ತಾಲೂಕಿನ ವಿವಿಧ ಗ್ರಾಮಗಳ ಕೂಲಿ ಕಾರ್ಮಿಕರು ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಇತರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದಾರೆ. ಮಾನವೀಯತೆ ಆಧಾರದಲ್ಲಿ ಅವರನ್ನು ತವರಿಗೆ ಕರೆತರುವುದು ಅಗತ್ಯವಾಗಿದೆ. ಕಾರ್ಮಿಕರು ಕೆಲಸ ಇಲ್ಲದೆ ಮನೆಯಲ್ಲಿಯೇ ಕುಳಿತಿದ್ದು, ಒಪ್ಪತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಈ ಕುರಿತು ಕೆಲ ಕಾರ್ಮಿಕರು ವಾಟ್ಸ್ಆ್ಯಫ್ ಮೂಲಕ ಪರಿಸ್ಥಿತಿ ಕುರಿತು ಗೋಳಿಡುತ್ತಿದ್ದಾರೆ. ತಮ್ಮ ಗ್ರಾಮಗಳಿಗೆ ತಲುಪಿಸುವಂತೆ ನಿತ್ಯವೂ ದೂರವಾಣಿ ಮೂಲಕ ಮನವಿ ಮಾಡುತ್ತಿದ್ದಾರೆ. ಆದ್ದರಿಂದ ಸರಕಾರ ಕಾರ್ಮಿಕರನ್ನು ಕರೆ ತರಲು ಮುಂದಾಗಬೇಕು ಎಂದು ಮನವಿ ಮಾಡಿದರು.
ಈ ಕುರಿತು ಈಗಾಗಲೇ ಸಾರಿಗೆ ಖಾತೆ ಸಚಿವ ಮತ್ತು ಮುಖ್ಯಮಂತ್ರಿ ಜತೆಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಮನವಿಗೆ ಸಚಿವರು ಮತ್ತು ಸಿಎಂ ಸ್ಪಂದಿಸಿದ್ದಾರೆ. ಕಾರಣ ಸರಕಾರ ಮತ್ತು ಜಿಲ್ಲಾಡಳಿತ ತುರ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್